AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ವಿರೋಧಿ ನಿರ್ಣಯಕ್ಕೆ ಬೆಂಬಲ ಸೂಚಿಸಿದ ಕೇರಳದ ಏಕೈಕ ಬಿಜೆಪಿ ಶಾಸಕ!

ಕೇರಳ ವಿಧಾನಸಭೆ ನೂತನ ಕೃಷಿ ಕಾಯ್ದೆ ವಿರೋಧಿಸಿ ಸರ್ವಾನುಮತದ ನಿರ್ಣಯ ಅಂಗೀಕರಿಸಿತು. ವಿಶೇಷವೆಂದರೆ, ಕೇರಳದ ಮೊದಲ ಮತ್ತು ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್ ಸಹ ಈ ನಿರ್ಣಯವನ್ನು ಬೆಂಬಲಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿ ನಿರ್ಣಯಕ್ಕೆ ಬೆಂಬಲ ಸೂಚಿಸಿದ ಕೇರಳದ ಏಕೈಕ ಬಿಜೆಪಿ ಶಾಸಕ!
ಕೇರಳದ ಮೊದಲ ಮತ್ತು ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್
guruganesh bhat
| Updated By: ಸಾಧು ಶ್ರೀನಾಥ್​|

Updated on: Dec 31, 2020 | 5:47 PM

Share

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕೇರಳದ ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್ ಕೇರಳ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿ ನಿರ್ಣಯವನ್ನು ಬೆಂಬಲಿಸಿದ್ದಾರೆ. ಕೃಷಿ ಕಾಯ್ದೆ ವಿರೋಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದ ನಿರ್ಣಯಕ್ಕೆ ಅಧಿವೇಶನದಲ್ಲಿ ಸರ್ವಾನುಮತದ ಬೆಂಬಲ ದೊರೆತಿದೆ.

ಅಧಿವೇಶನದಲ್ಲಿ ಮೊದಲು ನೂತನ ಕೃಷಿ ಕಾಯ್ದೆಗಳ ಪರ ಮಾತನಾಡಿದ ಓ.ರಾಜಗೋಪಾಲ್, ನಿರ್ಣಯವನ್ನು ಧ್ವನಿ ಮತಕ್ಕೆ ಹಾಕುವಾಗ ವಿರೋಧ ವ್ಯಕ್ತಪಡಿಸಲಿಲ್ಲ. ಕೇರಳ ಸರ್ಕಾರ ಮಂಡಿಸಿದ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿದರೂ, ಕೃಷಿ ಕಾಯ್ದೆಗಳನ್ನು ತಿರುಚಿ ವಿಶ್ಲೇಷಣೆ ನಡೆಸಿರುವ ಕುರಿತು ವಿರೋಧವಿದೆ ಎಂದು ಅವರು ತಿಳಿಸಿದರು.

ವಿಧಾನಸಭೆ ಅಧಿವೇಶನದ ನಂತರ ಪ್ರತಿಕ್ರಿಯಿಸಿದ ಅವರು, ‘ರಾಜ್ಯ ಸರ್ಕಾರದ ನಿರ್ಣಯವನ್ನು ನಾನು ವಿರೋಧಿಸುವುದಿಲ್ಲ. ಅಭಿಪ್ರಾಯ ಭೇದವಿದ್ದರೂ ರಾಜ್ಯದ ಒಗ್ಗಟ್ಟಿಗಾಗಿ ನಾನು ನಿರ್ಣಯದ ಪರವಾಗಿರುವೆ. ಕೃಷಿ ಕಾಯ್ದೆ ವಿರೋಧಿ ನಿರ್ಣಯ ಬೆಂಬಲಿಸಿದರೂ, ಬಿಜೆಪಿಗೆ ವಿರುದ್ಧವಾಗಿ ನಡೆದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯಕ್ಕೂ ಮಹತ್ವವಿದೆ. ನಿರ್ಣಯದಲ್ಲಿನ ಕೆಲ ಅಂಶಗಳನ್ನು ವಿರೋಧಿಸಿದ ನಂತರವೇ ಬೆಂಬಲ ವ್ಯಕ್ತಪಡಿಸಿದ್ದೇನೆ’ ಎಂದು ಓ. ರಾಜಗೋಪಾಲ್ ತಿಳಿಸಿದ್ದಾರೆ.

ಕೇರಳದಲ್ಲಿ ಬಿಜೆಪಿಯ ಮೊದಲ ಮತ್ತು ಏಕೈಕ ಶಾಸಕರಾಗಿರುವ ಓ.ರಾಜಗೋಪಾಲ್ ಪಕ್ಷದ ಹಿರಿಯ ನಾಯಕರು. ಅಟಲ್ ಬಿಹಾರಿ ವಅಜಪೇಯಿಯವರ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ