AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ವಿರೋಧಿ ನಿರ್ಣಯಕ್ಕೆ ಬೆಂಬಲ ಸೂಚಿಸಿದ ಕೇರಳದ ಏಕೈಕ ಬಿಜೆಪಿ ಶಾಸಕ!

ಕೇರಳ ವಿಧಾನಸಭೆ ನೂತನ ಕೃಷಿ ಕಾಯ್ದೆ ವಿರೋಧಿಸಿ ಸರ್ವಾನುಮತದ ನಿರ್ಣಯ ಅಂಗೀಕರಿಸಿತು. ವಿಶೇಷವೆಂದರೆ, ಕೇರಳದ ಮೊದಲ ಮತ್ತು ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್ ಸಹ ಈ ನಿರ್ಣಯವನ್ನು ಬೆಂಬಲಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿ ನಿರ್ಣಯಕ್ಕೆ ಬೆಂಬಲ ಸೂಚಿಸಿದ ಕೇರಳದ ಏಕೈಕ ಬಿಜೆಪಿ ಶಾಸಕ!
ಕೇರಳದ ಮೊದಲ ಮತ್ತು ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Dec 31, 2020 | 5:47 PM

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕೇರಳದ ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್ ಕೇರಳ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿ ನಿರ್ಣಯವನ್ನು ಬೆಂಬಲಿಸಿದ್ದಾರೆ. ಕೃಷಿ ಕಾಯ್ದೆ ವಿರೋಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದ ನಿರ್ಣಯಕ್ಕೆ ಅಧಿವೇಶನದಲ್ಲಿ ಸರ್ವಾನುಮತದ ಬೆಂಬಲ ದೊರೆತಿದೆ.

ಅಧಿವೇಶನದಲ್ಲಿ ಮೊದಲು ನೂತನ ಕೃಷಿ ಕಾಯ್ದೆಗಳ ಪರ ಮಾತನಾಡಿದ ಓ.ರಾಜಗೋಪಾಲ್, ನಿರ್ಣಯವನ್ನು ಧ್ವನಿ ಮತಕ್ಕೆ ಹಾಕುವಾಗ ವಿರೋಧ ವ್ಯಕ್ತಪಡಿಸಲಿಲ್ಲ. ಕೇರಳ ಸರ್ಕಾರ ಮಂಡಿಸಿದ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿದರೂ, ಕೃಷಿ ಕಾಯ್ದೆಗಳನ್ನು ತಿರುಚಿ ವಿಶ್ಲೇಷಣೆ ನಡೆಸಿರುವ ಕುರಿತು ವಿರೋಧವಿದೆ ಎಂದು ಅವರು ತಿಳಿಸಿದರು.

ವಿಧಾನಸಭೆ ಅಧಿವೇಶನದ ನಂತರ ಪ್ರತಿಕ್ರಿಯಿಸಿದ ಅವರು, ‘ರಾಜ್ಯ ಸರ್ಕಾರದ ನಿರ್ಣಯವನ್ನು ನಾನು ವಿರೋಧಿಸುವುದಿಲ್ಲ. ಅಭಿಪ್ರಾಯ ಭೇದವಿದ್ದರೂ ರಾಜ್ಯದ ಒಗ್ಗಟ್ಟಿಗಾಗಿ ನಾನು ನಿರ್ಣಯದ ಪರವಾಗಿರುವೆ. ಕೃಷಿ ಕಾಯ್ದೆ ವಿರೋಧಿ ನಿರ್ಣಯ ಬೆಂಬಲಿಸಿದರೂ, ಬಿಜೆಪಿಗೆ ವಿರುದ್ಧವಾಗಿ ನಡೆದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯಕ್ಕೂ ಮಹತ್ವವಿದೆ. ನಿರ್ಣಯದಲ್ಲಿನ ಕೆಲ ಅಂಶಗಳನ್ನು ವಿರೋಧಿಸಿದ ನಂತರವೇ ಬೆಂಬಲ ವ್ಯಕ್ತಪಡಿಸಿದ್ದೇನೆ’ ಎಂದು ಓ. ರಾಜಗೋಪಾಲ್ ತಿಳಿಸಿದ್ದಾರೆ.

ಕೇರಳದಲ್ಲಿ ಬಿಜೆಪಿಯ ಮೊದಲ ಮತ್ತು ಏಕೈಕ ಶಾಸಕರಾಗಿರುವ ಓ.ರಾಜಗೋಪಾಲ್ ಪಕ್ಷದ ಹಿರಿಯ ನಾಯಕರು. ಅಟಲ್ ಬಿಹಾರಿ ವಅಜಪೇಯಿಯವರ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ