AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಗಳ ಬಗ್ಗೆ ಪತ್ರಕರ್ತೆ ಪ್ರಶ್ನೆ ಕೇಳಿದಾಗ ‘ಚುಪ್’ ಎಂದು ಗದರಿದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್

Brij Bhushan Sharan Singh: ನೀವು ಸಂಸತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಕೇಳಿದಾಗ, ಸಿಟ್ಟಿನಿಂದಲೇ ಉತ್ತರಿಸಿದ ಸಂಸದ,“ನಾನೇಕೆ ರಾಜೀನಾಮೆ ನೀಡಬೇಕು? ನೀವೇಕೆ ರಾಜೀನಾಮೆ ಕೇಳುತ್ತಿದ್ದೀರಿ? ಎಂದಿದ್ದಾರೆ. ಅವರು ಎದುರಿಸುತ್ತಿರುವ ಗಂಭೀರ ಆರೋಪಗಳ ಬಗ್ಗೆ ಕೇಳಿದಾಗ ಕೋಪಗೊಂಡ ಸಂಸದರು ಚುಪ್ ಎಂದು ಹೇಳಿದ್ದು ವಿಡಿಯೊದಲ್ಲಿ ಸೆರೆಯಾಗಿದೆ

ಆರೋಪಗಳ ಬಗ್ಗೆ ಪತ್ರಕರ್ತೆ ಪ್ರಶ್ನೆ ಕೇಳಿದಾಗ ‘ಚುಪ್’ ಎಂದು ಗದರಿದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್
ಬ್ರಿಜ್ ಭೂಷಣ್ ಸಿಂಗ್ ಒ
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 8:40 PM

Share

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳ ಆಧಾರದ ಮೇಲೆ ದೆಹಲಿ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ಕುರಿತು ಪ್ರಶ್ನೆ ಕೇಳಿದ ಪತ್ರಕರ್ತೆಗೆ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಚುಪ್ (ಬಾಯ್ಮುಚ್ಚು) ಎಂದು ಗದರಿದ್ದಾರೆ. 12 ವರ್ಷಗಳ ಕಾಲ ಭಾರತದ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥರಾಗಿರುವ ಸಿಂಗ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 , 354 ಎ (ಲೈಂಗಿಕ ಕಿರುಕುಳ) ಮತ್ತು 354 ಡಿ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಸೆಕ್ಷನ್ 354 ರ ಅಡಿಯಲ್ಲಿ ದೋಷಾರೋಪಣೆಯು ಗರಿಷ್ಠ ಐದು ವರ್ಷಗಳು, ಸೆಕ್ಷನ್ 354A ಅಡಿಯಲ್ಲಿ ಮೂರು ವರ್ಷಗಳು ಮತ್ತು ಸೆಕ್ಷನ್ 354D ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಹೊಂದಿರುತ್ತದೆ.

ಟೈಮ್ಸ್ ನೌ ವರದಿಗಾರ್ತಿ, ನೀವು ಸಂಸತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಕೇಳಿದಾಗ, ಸಿಟ್ಟಿನಿಂದಲೇ ಉತ್ತರಿಸಿದ ಸಂಸದ,“ನಾನೇಕೆ ರಾಜೀನಾಮೆ ನೀಡಬೇಕು? ನೀವೇಕೆ ರಾಜೀನಾಮೆ ಕೇಳುತ್ತಿದ್ದೀರಿ? ಎಂದಿದ್ದಾರೆ. ಅವರು ಎದುರಿಸುತ್ತಿರುವ ಗಂಭೀರ ಆರೋಪಗಳ ಬಗ್ಗೆ ಕೇಳಿದಾಗ ಕೋಪಗೊಂಡ ಸಂಸದರು ಚುಪ್ ಎಂದು ಹೇಳಿದ್ದು ವಿಡಿಯೊದಲ್ಲಿ ಸೆರೆಯಾಗಿದೆ. ವರದಿಗಾರ್ತಿ ಅವರನ್ನು ಹಿಂಬಾಲಿಸಿದಾಗ ಮೈಕ್ ತಳ್ಳಿ ಹಾಕಿ ಸಿಂಗ್ ಕಾರಿನ ಬಾಗಿಲು ಹಾಕಿದ್ದಾರೆ.

ಘಟನೆಯ ವಿಡಿಯೊವನ್ನು ಹಂಚಿಕೊಂಡಿರುವ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ್ ಬಿವಿ, ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದರೊಬ್ಬರು ಮಹಿಳಾ ಪತ್ರಕರ್ತೆಗೆ ಕ್ಯಾಮೆರಾದಲ್ಲಿ ಬೆದರಿಕೆ ಹಾಕುತ್ತಿದ್ದಾರೆ. ಅವರ ಮೈಕ್ ಅನ್ನು ಕೂಡಾ ಮುರಿದಿದ್ದಾರೆ. ಇದು ಯಾರ ಮಾತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಬಹುದೇ? ಇದು ಯಾರ ಸಂಸ್ಕೃತಿ ಎಂದು ಕೇಳಿದ್ದಾರೆ.

ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್, ಸಿಂಗ್ ಅವರನ್ನು ‘ಗುಂಡಾ’ ಎಂದು ಕರೆದಿದ್ದಾರೆ. ಈ ಬಗ್ಗೆ ಟ್ಟೀಟ್ ಮಾಡಿದ ಅವರು ಮತ್ತೊಮ್ಮೆ ಹೇಳುತ್ತಿದ್ದೇನೆ ಬ್ರಿಜ್ ಭೂಷಣ್ ಸಿಂಗ್ ಒಬ್ಬ ಗೂಂಡಾ. ಕ್ಯಾಮೆರಾ ಮುಂದೆ. ಮಹಿಳಾ ವರದಿಗಾರರೊಂದಿಗೆ ಈ ರೀತಿ ವರ್ತಿಸುವ ಧೈರ್ಯವಿರುವಾಗ, ಕ್ಯಾಮೆರಾದ ಹೊರಗೆ ಮಹಿಳೆಯರೊಂದಿಗೆ ಅವನು ಹೇಗೆ ವರ್ತಿಸುತ್ತಾನೆಂದು ಊಹಿಸಿ. ಈ ಮನುಷ್ಯನ ಸ್ಥಾನವು ಜೈಲಿನಲ್ಲಿರುವದು, ಸಂಸತ್ತಿನಲ್ಲಿ ಅಲ್ಲ! ಎಂದಿದ್ದಾರೆ.

ಹಿಂದಿನ ದಿನ, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ “ಮೌನ” ವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಸರ್ಕಾರವು ಭಾರತದ ಹೆಣ್ಣುಮಕ್ಕಳಿಂದ ಪರೀಕ್ಷೆಯನ್ನು ಎದುರಿಸುತ್ತಿದೆ ಎಂದು ಹೇಳಿದೆ. ಪ್ರಧಾನಿ ಮೋದಿ ಅವರು ಸಿಂಗ್ ಅವರನ್ನು ಯಾವಾಗ ಬಿಜೆಪಿಯಿಂದ ಉಚ್ಚಾಟಿಸುತ್ತಾರೆ ಮತ್ತು ಅವರನ್ನು ಯಾವಾಗ ಬಂಧಿಸುತ್ತಾರೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಥೆ ಕೇಳಿದ್ದಾರೆ.

ಇದನ್ನೂ ಓದಿಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ ಬಗ್ಗೆ ದೆಹಲಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಹೇಳಿರುವುದೇನು?

ಮಹಿಳಾ ಕ್ರೀಡಾಪಟುಗಳ ಮೇಲಿನ ಲೈಂಗಿಕ ಕಿರುಕುಳದ ವಿಷಯದಲ್ಲಿ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ? ಮೋದಿ ಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಯಾವಾಗ ಪಕ್ಷದಿಂದ ಹೊರಹಾಕುತ್ತಾರೆ? ಬ್ರಿಜ್ ಭೂಷಣ್ ಸಿಂಗ್ ಬಂಧನ ಯಾವಾಗ? ಬ್ರಿಜ್ ಭೂಷಣ್ ಸಿಂಗ್ ಅವರಿಗೆ ರಕ್ಷಣೆ ನೀಡುವುದನ್ನು ಮತ್ತು ಪೋಷಣೆ ನೀಡುವುದನ್ನು ಮೋದಿ ಸರ್ಕಾರ ಯಾವಾಗ ನಿಲ್ಲಿಸುತ್ತದೆ ಎಂದು ಶ್ರೀನಾಥೆ ಪ್ರಶ್ನಿಸಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?