AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವ್​-ಇನ್ ಸಂಬಂಧ ಅಪಾಯಕಾರಿ ಕಾಯಿಲೆಯಿದ್ದಂತೆ, ಕಠಿಣ ಕಾನೂನಿನ ಅಗತ್ಯವಿದೆ: ಬಿಜೆಪಿ ಸಂಸದ

ಲಿವ್-ಇನ್ ಸಂಬಂಧಗಳ ಬಗ್ಗೆ ಹರ್ಯಾಣದ ಮಹೇಂದ್ರಗಢದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಅವರು ಗುರುವಾರ ಚಳಿಗಾಲದ ಅಧಿವೇಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಲಿವ್​ ಇನ್​ ರಿಲೇಷನ್​ಶಿಪ್ ಎಂಬುದು ಅಪಾಯಕಾರಿ ಕಾಯಿಲೆಯಿದ್ದಂತೆ ಅದರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಅಗತ್ಯವಿದೆ ಎಂದರು.

ಲಿವ್​-ಇನ್ ಸಂಬಂಧ ಅಪಾಯಕಾರಿ ಕಾಯಿಲೆಯಿದ್ದಂತೆ, ಕಠಿಣ ಕಾನೂನಿನ ಅಗತ್ಯವಿದೆ: ಬಿಜೆಪಿ ಸಂಸದ
ಧರಂಬೀರ್​ ಸಿಂಗ್Image Credit source: India Today
Follow us
ನಯನಾ ರಾಜೀವ್
|

Updated on: Dec 07, 2023 | 3:07 PM

ಲಿವ್-ಇನ್ ಸಂಬಂಧ(Live-In Relationship)ಗಳ ಬಗ್ಗೆ ಹರ್ಯಾಣದ ಮಹೇಂದ್ರಗಢದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಅವರು ಗುರುವಾರ ಚಳಿಗಾಲದ ಅಧಿವೇಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಲಿವ್​ ಇನ್​ ರಿಲೇಷನ್​ಶಿಪ್ ಎಂಬುದು ಅಪಾಯಕಾರಿ ಕಾಯಿಲೆಯಿದ್ದಂತೆ ಅದರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಅಗತ್ಯವಿದೆ ಎಂದರು.

ಲೋಕಸಭೆಯ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಧರಂಬೀರ್ ಸಿಂಗ್, ಪ್ರೇಮ ವಿವಾಹಗಳಲ್ಲಿ ವಿಚ್ಛೇದನ ಪ್ರಮಾಣ ಹೆಚ್ಚು. ಆದ್ದರಿಂದ, ಅಂತಹ ಸಂಬಂಧಗಳಿಗೆ ವಧು ಮತ್ತು ವರನ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು. ಧರಂಬೀರ್​ ಸಿಂಗ್ ಮಾತನಾಡಿ, ನಾನು ಅತ್ಯಂತ ಗಂಭೀರವಾದ ಸಮಸ್ಯೆಯನ್ನು ಸರ್ಕಾರ ಮತ್ತು ಸಂಸತ್ತಿನ ಗಮನಕ್ಕೆ ತರಲು ಬಯಸುತ್ತೇನೆ. ಭಾರತೀಯ ಸಂಸ್ಕೃತಿಯು ವಸುಧೈವ ಕುಟುಂಬಕಂ ಮತ್ತು ಸಹೋದರತ್ವದ ತತ್ವಶಾಸ್ತ್ರಕ್ಕೆ ಹೆಸರುವಾಸಿಯಾಗಿದೆ.

ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರರಿಗಿಂತ ಭಿನ್ನವಾಗಿದೆ. ವೈವಿಧ್ಯತೆಯಲ್ಲಿ ನಮ್ಮ ಏಕತೆಯಿಂದ ಇಡೀ ಜಗತ್ತು ಪ್ರಭಾವಿತವಾಗಿದೆ. ಸಮಾಜದ ದೊಡ್ಡ ವರ್ಗವು ಇನ್ನೂ ಪೋಷಕರು ಅಥವಾ ಸಂಬಂಧಿಕರಿಂದ ನಿಯೋಜಿತ ವಿವಾಹಗಳಿಗೆ ಆದ್ಯತೆ ನೀಡುತ್ತದೆ. ಇದರಲ್ಲಿ ವಧು-ವರರ ಒಪ್ಪಿಗೆ ಕೂಡ ಇರುತ್ತದೆ.

ಮತ್ತಷ್ಟು ಓದಿ: Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಮದುವೆಯಲ್ಲಿ ಸಾಮಾಜಿಕ ಮತ್ತು ವೈಯಕ್ತಿಕ ಮೌಲ್ಯಗಳು ಮತ್ತು ಆದ್ಯತೆಗಳು ಮತ್ತು ಕುಟುಂಬದ ಹಿನ್ನೆಲೆಯಂತಹ ಅನೇಕ ಸಾಮಾನ್ಯ ವಿಷಯಗಳನ್ನು ಪರಿಗಣಿಸಲಾಗುತ್ತದೆ.

ಮದುವೆಯನ್ನು ಏಳು ತಲೆಮಾರುಗಳವರೆಗೆ ಇರುವ ಪವಿತ್ರ ಸಂಬಂಧವೆಂದು ಪರಿಗಣಿಸಲಾಗುತ್ತದೆ. ಭಾರತದಲ್ಲಿ ವಿಚ್ಛೇದನ ಪ್ರಮಾಣವು ಸುಮಾರು 1.1 ಪ್ರತಿಶತದಷ್ಟಿದೆ, ಆದರೆ ಯುಎಸ್ನಲ್ಲಿ ಈ ಪ್ರಮಾಣವು ಶೇಕಡಾ 40 ರಷ್ಟಿದೆ. ಈ ಜಗಳದಲ್ಲಿ ನೂರಾರು ಕುಟುಂಬಗಳ ನೆಮ್ಮದಿ ನಾಶವಾಗುತ್ತವೆ. ಆದ್ದರಿಂದ ಎರಡೂ ಕುಟುಂಬಗಳ ಒಪ್ಪಿಗೆ ಅಗತ್ಯ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ