ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್​ ಗಂಭೀರ್​

ರಾಮ ಮಂದಿರ ನಿರ್ಮಾಣಕ್ಕೆ ದೆಣಿಗೆ ಸಂಗ್ರಹ ಮಾಡುವ ಆಂದೋಲನ ಆರಂಭಿಸಿದೆ. ಇದರ ಭಾಗವಾಗಿ ಗೌತಮ್​ ಗಂಭೀರ್​ ಒಂದು ಕೋಟಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್​ ಗಂಭೀರ್​
ಎಬಿಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡದೇ ಇರಬಹುದು. ಆದರೆ ಚುಟುಕು ಕ್ರಿಕೆಟ್​ನಲ್ಲಿ ಅತ್ಯಂತ ಬೇಡಿಕೆಯ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಆರ್​ಸಿಬಿ ತಂಡದಲ್ಲಿ ಡಿವಿಲಿಯರ್ಸ್ ಇರುವುದು ನಾಯಕ ವಿರಾಟ್ ಕೊಹ್ಲಿ ಪ್ಲಸ್ ಪಾಯಿಂಟ್ ಎಂದು ಗಂಭೀರ್ ತಿಳಿಸಿದ್ದಾರೆ.
Edited By:

Updated on: Feb 10, 2021 | 5:42 PM

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸೆಲೆಬ್ರಿಟಿಗಳು ದೇಣಿಗೆ ನೀಡುತ್ತಿದ್ದಾರೆ. ಇತ್ತೀಚೆಗೆ, ನಟ ಅಕ್ಷಯ್​ ಕುಮಾರ್ ರಾಮ ಮಂದಿರ ನಿರ್ಮಾಣಕ್ಕೆ ಕೈಲಾದಷ್ಟು ಹಣ ನೀಡುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್​ ಗಂಭೀರ್​ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮಾಡಲು ಒಂದು ಕೋಟಿ ರೂಪಾಯಿ ನೀಡಿ ಮಾದರಿಯಾಗಿದ್ದಾರೆ.

ರಾಮ ಮಂದಿರ ನಿರ್ಮಾಣ ಭಾರತೀಯರ ಕನಸು. ಬಹು ವರ್ಷಗಳ ಈ ವಿವಾದ ಕೊನೆಗೊಂಡಿದೆ. ಮಂದಿರ ನಿರ್ಮಾಣಕ್ಕೆ ನನ್ನ ಹಾಗೂ ನನ್ನ ಕುಟುಂಬದಿಂದ ಸಣ್ಣ ಕೊಡುಗೆ ಎಂದು ಗೌತಮ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಆಂದೋಲನ ಆರಂಭಿಸಿದೆ. ಇದರ ಭಾಗವಾಗಿ ಗೌತಮ್​ ಗಂಭೀರ್​ ಒಂದು ಕೋಟಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಶದ 5,25,000 ಗ್ರಾಮಗಳಲ್ಲಿ ಹಣ ಸಂಗ್ರಹ ಮಾಡುವ ಕಾರ್ಯ ಆರಂಭಗೊಂಡಿದೆ. ಜನವರಿ 15ರಿಂದ ಫೆಬ್ರವರಿ 27ರ ವರೆಗೆ ಹಣ ಸಂಗ್ರಹಣೆ ಕಾರ್ಯ ನಡೆಯಲಿದೆ.

ಯಾವ ದಾನ ಮಾಡಿದ್ರೆ ಏನು ಫಲ? ದಾನದ ಕುರಿತು ಧರ್ಮಶಾಸ್ತ್ರ ಏನು ಹೇಳುತ್ತೆ?

 

Published On - 5:12 pm, Thu, 21 January 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us