AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಔಷಧಿಗಳನ್ನು ವಿತರಿಸಲು ಗೌತಮ್ ಗಂಭೀರ್​ಗೆ ಪರವಾನಗಿ ಇದೆಯೇ?: ದೆಹಲಿ ಹೈಕೋರ್ಟ್

BJP MP Gautam Gambhir: ವೈದ್ಯರು ನಿರ್ದೇಶಿಸಿದ ಔಷಧಿಗಳಾಗಿವೆಯೇ ಅವು? ಅಷ್ಟೊಂದು ಪ್ರಮಾಣದಲ್ಲಿ ಔಷಧಿಗಳನ್ನು ಸಂಗ್ರಹಿಸುವುದಾದರೂ ಹೇಗೆ? ಇಷ್ಟೊಂದು ಔಷಧಿಗಳನ್ನಿರಿಸಲು ಅವರಲ್ಲಿ ಪರವಾನಗಿ ಇದೆಯೇ? ಇದಕ್ಕೇನು ಪರವಾನಗಿ ಬೇಕು ಎಂದಿಲ್ಲವೇ? ಎಂದು ನ್ಯಾಯಮೂರ್ತಿ ವಿಪಿನ್ ಸಂಗಿ ಮತ್ತು ರೇಖಾ ಪಲ್ಲಿ ಅವರ ವಿಭಾಗೀಯ ನ್ಯಾಯಪೀಠ ಪ್ರಶ್ನಿಸಿದೆ.

ಕೊವಿಡ್ ಔಷಧಿಗಳನ್ನು ವಿತರಿಸಲು ಗೌತಮ್ ಗಂಭೀರ್​ಗೆ ಪರವಾನಗಿ ಇದೆಯೇ?: ದೆಹಲಿ ಹೈಕೋರ್ಟ್
ಗೌತಮ್ ಗಂಭೀರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 28, 2021 | 5:21 PM

Share

ದೆಹಲಿ: ದೆಹಲಿಯಲ್ಲಿ ದಿನೇ ದಿನೇ ಕೊವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇರುವಾಗ ಬಿಜೆಪಿ ಸಂಸದ ಗೌತಮ್ ಗಂಭೀರ್ ತಮ್ಮ ಸಂಸದೀಯ ಕ್ಷೇತ್ರವಾದ ಪೂರ್ವ ದೆಹಲಿಯಲ್ಲಿ ಕೊವಿಡ್ -19 ರೋಗಕ್ಕಿರುವ ಔಷಧಿಯನ್ನು ಉಚಿತವಾಗಿ ನೀಡಲಿದ್ದೇನೆ ಎಂದು ಹೇಳಿದ್ದಾರೆ. ಗಂಭೀರ್ ಅವರ ಈ ನಿರ್ಧಾರ ವಿವಾದವನ್ನುಂಟು ಮಾಡಿದ್ದು, ದೆಹಲಿ ಹೈಕೋರ್ಟ್ ಗಂಭೀರ್ ಅವರನ್ನು ಪ್ರಶ್ನಿಸಿದೆ.

ಇಷ್ಟೊಂದು ಜನರಿಗೆ ಉಚಿತವಾಗಿ ಔಷಧಿ ವಿತರಿಸುವುದಾದರೆ ಸಾಕಷ್ಟು ಪ್ರಮಾಣದಲ್ಲಿ ಔಷಧಿ ಸಂಗ್ರಹಿಸಬೇಕು. ಗೌತಮ್ ಗಂಭೀರ್ ಎಲ್ಲಿಂದ ಇಷ್ಟೊಂದು ಔಷಧಿ ತರುತ್ತಾರೆ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಪ್ರಶ್ನಿಸಿದೆ.

ವೈದ್ಯರು ನಿರ್ದೇಶಿಸಿದ ಔಷಧಿಗಳಾಗಿವೆಯೇ ಅವು? ಅಷ್ಟೊಂದು ಪ್ರಮಾಣದಲ್ಲಿ ಔಷಧಿಗಳನ್ನು ಸಂಗ್ರಹಿಸುವುದಾದರೂ ಹೇಗೆ? ಇಷ್ಟೊಂದು ಔಷಧಿಗಳನ್ನಿರಿಸಲು ಅವರಲ್ಲಿ ಪರವಾನಗಿ ಇದೆಯೇ? ಇದಕ್ಕೇನು ಪರವಾನಗಿ ಬೇಕು ಎಂದಿಲ್ಲವೇ? ಎಂದು ನ್ಯಾಯಮೂರ್ತಿ ವಿಪಿನ್ ಸಂಗಿ ಮತ್ತು ರೇಖಾ ಪಲ್ಲಿ ಅವರ ವಿಭಾಗೀಯ ನ್ಯಾಯಪೀಠ ಪ್ರಶ್ನಿಸಿದೆ.

ವರದಿಯ ನಂತರ ಇದು ನಿಲ್ಲುತ್ತದೆ ಎಂದುಕೊಂಡಿದ್ದೆವು. ಆದರೆ ಈಗಲೂ ಮುಂದುವರಿದಿದೆ ಎಂದು ನ್ಯಾಯಾಲಯ ಹೇಳಿದೆ.  ದೆಹಲಿ ಸರ್ಕಾರವನ್ನು ಪ್ರತಿನಿಧಿಕರಿಸಿದ ಹಿರಿಯ ವಕೀಲ ರಾಹುಲ್ ಮೆಹ್ರಾ , ಇದು ತುಂಬಾ ಬೇಜವಾಬ್ದಾರಿತನದ ನಡೆ ಎಂದು ಹೇಳಿದ್ದಾರೆ.

ಚುನಾಯಿತ ಪ್ರತಿನಿಧಿಯು ಫೆಬಿಫ್ಲೂ (Fabiflu) ಔಷಧಿಯನ್ನು ವಿತರಿಸುತ್ತಿದ್ದಾರೆ ಎಂದು ಗೌತಮ್ ಗಂಭೀರ್ ಅವರ ಟ್ವೀಟ್ ಉಲ್ಲೇಖಿಸಿ ವಕೀಲ ರಾಕೇಶ್ ಮಲ್ಹೋತ್ರಾ ನ್ಯಾಯಾಲಯಕ್ಕೆ ಹೇಳಿದ್ದಾರೆ.

ದೆಹಲಿಯಲ್ಲಿ ಕೊವಿಡ್ ಔಷಧಿಗೆ ಬರ ಇರುವಾಗ ಅವರಿಗೆ ಇದೆಲ್ಲ ಎಲ್ಲಿಂದ ಸಿಗುತ್ತದೆ ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ ಮಲ್ಹೋತ್ರಾ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದರೂ ಇತರ ಪ್ರದೇಶದ ಜನರಿಗೆ ಔಷಧಿ ಸಿಗದೆ ಪೂರ್ವ ದೆಹಲಿಯ ಜನರಿಗೆ ಮಾತ್ರ ಔಷಧಿ ಸಿಗುವುದಾದರೆ ಅದು ದೊಡ್ಡ ಸಮಸ್ಯೆ ಎಂದು ಮಲ್ಹೋತ್ರಾ ಹೇಳಿದ್ದಾರೆ.

(BJP MP Gautam Gambhir have holding a license to deal inCovid-19 drugs asks Delhi High Court)

ಇದನ್ನೂ ಓದಿ: ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್​ರನ್ನು ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿಗೆ ಶಿಫ್ಟ್ ಮಾಡಿ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ

ಪಂಚತಾರಾ ಹೋಟೆಲ್​ನಲ್ಲಿ ನ್ಯಾಯಾಧೀಶರಿಗೆ ಕೊವಿಡ್​ ಆರೈಕೆ ಕೇಂದ್ರ ಕೇಳಿಲ್ಲವೆಂದ ದೆಹಲಿ ಹೈಕೋರ್ಟ್​, ದೆಹಲಿ ಸರ್ಕಾರಕ್ಕೆ ಛೀಮಾರಿ

Published On - 5:14 pm, Wed, 28 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!