AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಕೊರೊನಾ ಸೋಂಕು; ಸೌಮ್ಯ ಲಕ್ಷಣಗಳಿವೆ ಎಂದ ಮಾಜಿ ಕ್ರಿಕೆಟರ್​

ಜ.31ರಂದು ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಅಲ್ಲಿನ ಸುಮಾರು 875 ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.  ಭಾನುವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಮಗೆ ಕೊರೊನಾ ಸೋಂಕು ತಗುಲಿದ್ದಾಗಿ ಹೇಳಿಕೊಂಡಿದ್ದರು.

ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಕೊರೊನಾ ಸೋಂಕು; ಸೌಮ್ಯ ಲಕ್ಷಣಗಳಿವೆ ಎಂದ ಮಾಜಿ ಕ್ರಿಕೆಟರ್​
ಗೌತಮ್ ಗಂಭೀರ್
TV9 Web
| Edited By: |

Updated on: Jan 25, 2022 | 12:06 PM

Share

ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದ ಗೌತಮ್​ ಗಂಭೀರ್ (Gautam Gambhir)​ ಅವರಿಗೆ ಕೊವಿಡ್ 19 ಸೋಂಕು (Covid 19 ) ತಗುಲಿದೆ. ಹಾಗೇ, ಸೌಮ್ಯ ಲಕ್ಷಣಗಳು ಇರುವುದಾಗಿ ಅವರು ತಿಳಿಸಿದ್ದಾರೆ. ನನಗೆ ಸೌಮ್ಯ ಲಕ್ಷಣಗಳಿದ್ದವು. ತಪಾಸಣೆ ಮಾಡಿಸಿದ ನಂತರ ಕೊವಿಡ್​ 19 ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಗೌತಮ್​ ಗಂಭೀರ್ ಟ್ವೀಟ್ ಮಾಡಿದ್ದಾರೆ. 2021ರ ನವೆಂಬರ್​ನಲ್ಲಿ ಗಂಭೀರ್​ ಕುಟುಂಬದ ಸದಸ್ಯರಲ್ಲಿ ಕೊವಿಡ್ 19 ದೃಢಪಟ್ಟಿದ್ದರಿಂದ ಅವರು ಐಸೋಲೇಟ್ ಆಗಿದ್ದರು. 

ಗೌತಮ್​ ಗಂಭೀರ್​ ಕೆಲವು ದಿನಗಳಿಂದಲೂ ಭರ್ಜರಿ ಸುದ್ದಿಯಲ್ಲಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರು ಮತ್ತೊಮ್ಮೆ ಕ್ರಿಕೆಟ್​ ಫೀಲ್ಡ್​ಗೆ ಕಾಲಿಟ್ಟಿದ್ದು. ಹಾಗಂತ ಅವರು ಕ್ರಿಕೆಟ್​ ಆಡುತ್ತಿಲ್ಲ. 15ನೇ ಆವೃತ್ತಿಯ ಐಪಿಎಲ್​​ನಲ್ಲಿ ಹೊಸದಾಗಿ ಆಡಲಿರುವ ಲಖನೌ ತಂಡದ ಮೆಂಟರ್ ಆಗಲಿದ್ದಾರೆ. ಈ ಸಂಬಂಧ ಕಳೆದ ಕೆಲವು ದಿನಗಳಿಂದಲೂ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಹೀಗೆ ಹೊಸದಾಗಿ ಸೇರ್ಪಡೆಯಾಗಲಿರುವ ಲಖನೌ ತಂಡ, ಲಖನೌ ಸೂಪರ್​ ಜೇಂಟ್ಸ್​ ಎಂದು ಹೆಸರಿಟ್ಟುಕೊಂಡಿದೆ.

ಹಲವು ರಾಜಕಾರಣಿಗಳಿಗೆ ಕೊರೊನಾ ಸೋಂಕು ಇನ್ನು ರಾಜಕಾರಣಿಗಳಿಗೆ ಹಲವರಿಗೆ ಕೊರೊನಾ ಸೋಂಕು ತಗುಲಿದೆ. ನಿನ್ನೆ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾತ್​ ತಮಗೆ ಕೊರೊನಾ ವೈರಸ್ ತಗುಲಿದೆ ಎಂದು ಟ್ವೀಟ್ ಮಾಡಿ ಹೇಳಿದ್ದರು. ಜ.31ರಂದು ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಅಲ್ಲಿನ ಸುಮಾರು 875 ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.  ಭಾನುವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಮಗೆ ಕೊರೊನಾ ಸೋಂಕು ತಗುಲಿದ್ದಾಗಿ ಹೇಳಿಕೊಂಡಿದ್ದರು. ವೆಂಕಯ್ಯ ನಾಯ್ಡು ಅವರು ಹೈದರಾಬಾದ್​ನಲ್ಲಿದ್ದು, ಅವರಲ್ಲಿ ಕೊರೊನಾ ದೃಢಪಟ್ಟಿದೆ. ಸದ್ಯ ಐಸೋಲೇಶನ್​​ಗೆ ಒಳಗಾಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರೆಲ್ಲ ತಪಾಸಣೆಗೆ ಒಳಗಾಗುವಂತೆ ಹೇಳಿದ್ದಾರೆ. ಇವರು 2021ರಲ್ಲೂ ಒಮ್ಮೆ ಕೊರೊನಾಕ್ಕೆ ಒಳಗಾಗಿದ್ದರು. ಇದು ಎರಡನೇ ಬಾರಿಗೆ ಅವರಿಗೆ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗ ಅಂತ್ಯ ಕಾಣುತ್ತಿದೆ ಎಂದು ಭಾವಿಸುವುದು ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು