AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಕೊರೊನಾ ಸೋಂಕು; ಸೌಮ್ಯ ಲಕ್ಷಣಗಳಿವೆ ಎಂದ ಮಾಜಿ ಕ್ರಿಕೆಟರ್​

ಜ.31ರಂದು ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಅಲ್ಲಿನ ಸುಮಾರು 875 ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.  ಭಾನುವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಮಗೆ ಕೊರೊನಾ ಸೋಂಕು ತಗುಲಿದ್ದಾಗಿ ಹೇಳಿಕೊಂಡಿದ್ದರು.

ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಕೊರೊನಾ ಸೋಂಕು; ಸೌಮ್ಯ ಲಕ್ಷಣಗಳಿವೆ ಎಂದ ಮಾಜಿ ಕ್ರಿಕೆಟರ್​
ಗೌತಮ್ ಗಂಭೀರ್
TV9 Web
| Edited By: |

Updated on: Jan 25, 2022 | 12:06 PM

Share

ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದ ಗೌತಮ್​ ಗಂಭೀರ್ (Gautam Gambhir)​ ಅವರಿಗೆ ಕೊವಿಡ್ 19 ಸೋಂಕು (Covid 19 ) ತಗುಲಿದೆ. ಹಾಗೇ, ಸೌಮ್ಯ ಲಕ್ಷಣಗಳು ಇರುವುದಾಗಿ ಅವರು ತಿಳಿಸಿದ್ದಾರೆ. ನನಗೆ ಸೌಮ್ಯ ಲಕ್ಷಣಗಳಿದ್ದವು. ತಪಾಸಣೆ ಮಾಡಿಸಿದ ನಂತರ ಕೊವಿಡ್​ 19 ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಗೌತಮ್​ ಗಂಭೀರ್ ಟ್ವೀಟ್ ಮಾಡಿದ್ದಾರೆ. 2021ರ ನವೆಂಬರ್​ನಲ್ಲಿ ಗಂಭೀರ್​ ಕುಟುಂಬದ ಸದಸ್ಯರಲ್ಲಿ ಕೊವಿಡ್ 19 ದೃಢಪಟ್ಟಿದ್ದರಿಂದ ಅವರು ಐಸೋಲೇಟ್ ಆಗಿದ್ದರು. 

ಗೌತಮ್​ ಗಂಭೀರ್​ ಕೆಲವು ದಿನಗಳಿಂದಲೂ ಭರ್ಜರಿ ಸುದ್ದಿಯಲ್ಲಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರು ಮತ್ತೊಮ್ಮೆ ಕ್ರಿಕೆಟ್​ ಫೀಲ್ಡ್​ಗೆ ಕಾಲಿಟ್ಟಿದ್ದು. ಹಾಗಂತ ಅವರು ಕ್ರಿಕೆಟ್​ ಆಡುತ್ತಿಲ್ಲ. 15ನೇ ಆವೃತ್ತಿಯ ಐಪಿಎಲ್​​ನಲ್ಲಿ ಹೊಸದಾಗಿ ಆಡಲಿರುವ ಲಖನೌ ತಂಡದ ಮೆಂಟರ್ ಆಗಲಿದ್ದಾರೆ. ಈ ಸಂಬಂಧ ಕಳೆದ ಕೆಲವು ದಿನಗಳಿಂದಲೂ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಹೀಗೆ ಹೊಸದಾಗಿ ಸೇರ್ಪಡೆಯಾಗಲಿರುವ ಲಖನೌ ತಂಡ, ಲಖನೌ ಸೂಪರ್​ ಜೇಂಟ್ಸ್​ ಎಂದು ಹೆಸರಿಟ್ಟುಕೊಂಡಿದೆ.

ಹಲವು ರಾಜಕಾರಣಿಗಳಿಗೆ ಕೊರೊನಾ ಸೋಂಕು ಇನ್ನು ರಾಜಕಾರಣಿಗಳಿಗೆ ಹಲವರಿಗೆ ಕೊರೊನಾ ಸೋಂಕು ತಗುಲಿದೆ. ನಿನ್ನೆ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾತ್​ ತಮಗೆ ಕೊರೊನಾ ವೈರಸ್ ತಗುಲಿದೆ ಎಂದು ಟ್ವೀಟ್ ಮಾಡಿ ಹೇಳಿದ್ದರು. ಜ.31ರಂದು ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಅಲ್ಲಿನ ಸುಮಾರು 875 ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.  ಭಾನುವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಮಗೆ ಕೊರೊನಾ ಸೋಂಕು ತಗುಲಿದ್ದಾಗಿ ಹೇಳಿಕೊಂಡಿದ್ದರು. ವೆಂಕಯ್ಯ ನಾಯ್ಡು ಅವರು ಹೈದರಾಬಾದ್​ನಲ್ಲಿದ್ದು, ಅವರಲ್ಲಿ ಕೊರೊನಾ ದೃಢಪಟ್ಟಿದೆ. ಸದ್ಯ ಐಸೋಲೇಶನ್​​ಗೆ ಒಳಗಾಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರೆಲ್ಲ ತಪಾಸಣೆಗೆ ಒಳಗಾಗುವಂತೆ ಹೇಳಿದ್ದಾರೆ. ಇವರು 2021ರಲ್ಲೂ ಒಮ್ಮೆ ಕೊರೊನಾಕ್ಕೆ ಒಳಗಾಗಿದ್ದರು. ಇದು ಎರಡನೇ ಬಾರಿಗೆ ಅವರಿಗೆ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗ ಅಂತ್ಯ ಕಾಣುತ್ತಿದೆ ಎಂದು ಭಾವಿಸುವುದು ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ