AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ವರ್ ಯಾತ್ರೆ:ಯುಪಿ ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶ ಬಗ್ಗೆ ಸೂನು ಸೂದ್ ನಿಲುವು ಪ್ರಶ್ನಿಸಿದ ಕಂಗನಾ ರಣಾವತ್

ಕನ್ವರ್ ಯಾತ್ರಾ ಮಾರ್ಗದಲ್ಲಿ ಅಂಗಡಿಗಳು ಮತ್ತು ಆಹಾರ ತಿನಿಸು ಮಾರುವ ಗಾಡಿಗಳ ಮೇಲೆ ಮಾಲೀಕರು ಹೆಸರನ್ನು ಬರೆಯಬೇಕು ಎಂದು ಉತ್ತರ ಪ್ರದೇಶ ಸರ್ಕಾರದ ಆದೇಶ ಹೊರಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಬಾಲಿವುಡ್ ನಟ ಸೋನು ಸೂದ್, ಪ್ರತೀ ಅಂಗಡಿಯಲ್ಲಿ ಒಂದೇ ನಾಮ ಫಲಕ ಇರಬೇಕು: ಅದು "ಮಾನವೀಯತೆ" ಎಂದು ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಸಂಸದೆ ಕಂಗನಾ ರಣಾವತ್, ಹಲಾಲ್ ಬದಲು ಮಾನವೀಯತೆ ಎಂದು ಬದಲಿಸಬೇಕು ಎಂದಿದ್ದಾರೆ.

ಕನ್ವರ್ ಯಾತ್ರೆ:ಯುಪಿ ಸರ್ಕಾರದ 'ಹೆಸರು ಪ್ರದರ್ಶನ' ಆದೇಶ ಬಗ್ಗೆ ಸೂನು ಸೂದ್ ನಿಲುವು ಪ್ರಶ್ನಿಸಿದ ಕಂಗನಾ ರಣಾವತ್
ಕಂಗನಾ ರಣಾವತ್- ಸೋನು ಸೂದ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 22, 2024 | 12:51 PM

ದೆಹಲಿ ಜುಲೈ 22: ಕನ್ವರ್ ಯಾತ್ರಾ (Kanwar Yatra)ಮಾರ್ಗದಲ್ಲಿ ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಕುರಿತು ವಿವಾದದ ನಡುವೆ ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್  (Kangana Ranaut) ನಟ ಸೋನು ಸೂದ್ (Sonu Sood) ಅವರ ಪೋಸ್ಟ್ ವಿರುದ್ಧ ಗುಡುಗಿದ್ದಾರೆ. ಸೋನು ಸೂದ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ, “ಪ್ರತಿ ಅಂಗಡಿಯಲ್ಲಿ ಒಂದೇ ನಾಮ ಫಲಕ ಇರಬೇಕು: ಅದು “ಮಾನವೀಯತೆ” ಆಗಿರಬೇಕು ಎಂದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್​​ಗೆ ಪ್ರತಿಕ್ರಿಯಿಸಿದ ಕಂಗನಾ, ಒಪ್ಪುವೆ, ಹಲಾಲ್ ಬದಲು ಮಾನವೀಯತೆ ಎಂದು ಹಾಕಬೇಕು ಎಂದಿದ್ದಾರೆ.

ಕನ್ವರ್ ಯಾತ್ರಾ ಮಾರ್ಗದಲ್ಲಿ ಅಂಗಡಿಗಳು ಮತ್ತು ಆಹಾರ ತಿನಿಸು ಮಾರುವ ಗಾಡಿಗಳ ಮೇಲೆ ಮಾಲೀಕರು ಹೆಸರನ್ನು ಬರೆಯಬೇಕು ಎಂದು ಉತ್ತರ ಪ್ರದೇಶ ಸರ್ಕಾರದ ಆದೇಶ ಹೊರಡಿಸಿದ ನಂತರ ಈ ವಿವಾದವುಂಟಾಗಿದೆ.

ಈ ಆದೇಶವನ್ನು ಖಂಡಿಸಿರುವ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಇದು ಭಾರತದಲ್ಲಿ ಮುಸ್ಲಿಮರ ಮೇಲಿನ ದ್ವೇಷವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಮೊಟ್ಟೆಯ ಅಂಗಡಿಯೊಂದರಲ್ಲಿ ಮಾಲೀಕರ ಹೆಸರು ಪ್ರದರ್ಶಿಸಿರುವ ಫೋಟೊವೊಂದನ್ನು ಶೇರ್ ಮಾಡಿ ಟ್ವೀಟ್ ಮಾಡಿರುವ ಓವೈಸಿ”ಯುಪಿಯ ಕನ್ವರ್ ಮಾರ್ಗಗಳಲ್ಲಿ ಭಯ: ಇದು ಭಾರತೀಯ ಮುಸ್ಲಿಮರ ಮೇಲಿನ ದ್ವೇಷವನ್ನು ತೋರಿಸುತ್ತದೆ. ಈ ದ್ವೇಷದ ಶ್ರೇಯಸ್ಸು ರಾಜಕೀಯ ಪಕ್ಷಗಳು / ಹಿಂದುತ್ವದ ನಾಯಕರು ಮತ್ತು ಸೆಕ್ಯುಲರ್ ಪಕ್ಷಗಳು ಎಂದು ಕರೆಯಲ್ಪಡುವವರಿಗೆ ಸಲ್ಲುತ್ತದೆ” ಎಂದಿದ್ದಾರೆ. ಕನ್ವರ್ ಮಾರ್ಗಗಳಲ್ಲಿನ ಆಹಾರ ಅಂಗಡಿಗಳಿಗೆ ಅವುಗಳ ಮಾಲೀಕರ ವಿವರಗಳನ್ನು ಪ್ರದರ್ಶಿಸಲು ನಿರ್ದೇಶಿಸಿರುವುದು ಸಂವಿಧಾನದ ವಿರುದ್ಧದ ದಾಳಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

“ನಮ್ಮ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಜಾತಿ, ಧರ್ಮ, ಭಾಷೆ ಅಥವಾ ಯಾವುದೇ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಖಾತರಿಪಡಿಸುತ್ತದೆ. ಉತ್ತರ ಪ್ರದೇಶದಲ್ಲಿ ಗಾಡಿಗಳು, ಗೂಡಂಗಡಿಗಳು ಮತ್ತು ಅಂಗಡಿಗಳ ಮಾಲೀಕರ ಹೆಸರಿನ ಫಲಕಗಳನ್ನು ಹಾಕುವ ವಿಭಜಕ ಆದೇಶವು ನಮ್ಮ ಸಂವಿಧಾನ, ನಮ್ಮ ಪ್ರಜಾಪ್ರಭುತ್ವ ಮತ್ತು ನಮ್ಮ ಪಾರಂಪರಿಕ ಪರಂಪರೆಯ ಮೇಲಿನ ದಾಳಿಯಾಗಿದೆ€ ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಹಿಂದೆ ಕವಿ, ಸಾಹಿತಿ ಜಾವೇದ್ ಅಖ್ತರ್ ಕೂಡ ಘಟನೆಯ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಪ್ರತಿಕ್ರಿಯಿಸಿ ಆಡಳಿತವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

” ಮುಜಾಫರ್‌ನಗರ ಯುಪಿ ಪೊಲೀಸರು ಮುಂದಿನ ದಿನಗಳಲ್ಲಿ ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯ ಮಾರ್ಗದಲ್ಲಿ ಎಲ್ಲಾ ಅಂಗಡಿಗಳ ರೆಸ್ಟೋರೆಂಟ್‌ಗಳು ಮತ್ತು ವಾಹನಗಳು ಸಹ ಮಾಲೀಕರ ಹೆಸರನ್ನು ಪ್ರಮುಖವಾಗಿ ಮತ್ತು ಸ್ಪಷ್ಟವಾಗಿ ತೋರಿಸಬೇಕು ಎಂದು ಸೂಚನೆ ನೀಡಿದ್ದಾರೆ. ಏಕೆ? ನಾಜಿ ಜರ್ಮನಿಯಲ್ಲಿ ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಮಾತ್ರ ಗುರುತು ಹಾಕುತ್ತಿದ್ದರು ಎಂದು ಜಾವೇದ್ ಅಖ್ತರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Mon, 22 July 24

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ