AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

‘ತಮ್ಮಿಂದ ಬೇರ್ಪಟ್ಟ ಗಂಡ ಆಯುಷ್ ಮರಳಿ ಬರುತ್ತಾರೆ ಎಂದು ಅಂದುಕೊಂಡಿದ್ದೆ, ಆದರೆ, ಆಯುಷ್ ತಮ್ಮ ಬಳಿ ಮರಳಿ ಬರಲಿಲ್ಲ’ ಎಂದು ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಮಗ ಆಯುಷ್ ಅವರಿಂದ ಸಾಂಸಾರಿಕವಾಗಿ ಬೇರ್ಪಟ್ಟಿರುವ ಹೆಂಡತಿ ಅಂಕಿತಾ ದೂರಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಸಂಸದರ ಸೊಸೆ
guruganesh bhat
| Edited By: |

Updated on:Mar 15, 2021 | 2:33 PM

Share

ಲಕ್ನೋ: ಏನೂ ಇಲ್ಲದಿದ್ದರೂ ಜೀವನದಲ್ಲಿ ಮುಂದೆ ಬರಬೇಕು ಎನ್ನುವವರು ಒಂದೆಡೆಯಾದರೆ, ಎಲ್ಲಾ ಇದ್ದೂ ಜೀವನ ಸಾಕು ಎನ್ನುವವರು ಇನ್ನೊಂದೆಡೆ. ಉತ್ತರ ಪ್ರದೇಶದ ಮೋಹನ್​ಲಾಲ್​ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಮಗ ಆಯುಷ್ ಅವರಿಂದ ಸಾಂಸಾರಿಕವಾಗಿ ಬೇರ್ಪಟ್ಟಿರುವ ಹೆಂಡತಿ ಅಂಕಿತಾ ಆತ್ಮಹತ್ಯೆ ಪ್ರಯತ್ನ ನಡೆಸಿದ್ದಾರೆ. ಅವರ ಆತ್ಮಹತ್ಯೆಯ ಪ್ರಯತ್ನದ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ತಮ್ಮ ಆತ್ಮಹತ್ಯೆಯ ಪ್ರಯತ್ನಕ್ಕೆ ಬೇರ್ಪಟ್ಟ ಗಂಡ ಆಯುಷ್, ಮಾವ, ಬಿಜೆಪಿ ಸಂಸದ ಕೌಶಲ್ ಕಿಶೋರ್,  ಶಾಸಕಿಯೂ ಆಗಿರುವ ಅತ್ತೆ ಜೈ ದೇವಿ ಮತ್ತು ಬೇರ್ಪಟ್ಟ ಗಂಡನ ಸಹೋದರ  ಕಾರಣ ಎಂದು ಅಂಕಿತಾ ತಿಳಿಸಿದ್ದಾರೆ. ತಮ್ಮಿಂದ ಬೇರ್ಪಟ್ಟ ಗಂಡ ಆಯುಷ್ ತಮಗೆ ಮೋಸ ಮಾಡಿದ್ದಾರೆ ಎಂದು ಸಹ ದೂರಿದ್ದಾರೆ ಅಂಕಿತಾ.

ಅಲ್ಲದೇ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವಿಡಿಯೋದಲ್ಲಿ ಅಳುತ್ತಿರುವುದು ಕಂಡುಬರುತ್ತದೆ. ‘ತಮ್ಮಿಂದ ಬೇರ್ಪಟ್ಟ ಗಂಡ ಆಯುಷ್ ಮರಳಿ ಬರುತ್ತಾರೆ ಎಂದು ಅಂದುಕೊಂಡಿದ್ದೆ, ಆದರೆ, ಆಯುಷ್ ತಮ್ಮ ಬಳಿ ಮರಳಿ ಬರಲಿಲ್ಲ’ ಎಂದು ಅವರು ವಿಡಿಯೊದಲ್ಲಿ ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ತಮ್ಮ ಬೇರ್ಪಟ್ಟ ಗಂಡನ ಮನೆಗೆ ತೆರಳಿದ ಅವರು ಅಲ್ಲಿಯೇ ಕೈ ಕೊಯ್ದುಕೊಂಡು ಆತ್ಮಹತ್ಯೆಯ ಪ್ರಯತ್ನ ನಡೆಸಿದ್ದಾರೆ. ಆದರೆ ತಕ್ಷಣವೇ ಅವರನ್ನು ಮಹಿಳಾ ಪೊಲೀಸರ ನೇತೃತ್ವದಲ್ಲಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಹೀಗಾಗಿ ಅಂಕಿತಾ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಮಗ ಆಯುಷ್, ಅಂಕಿತಾ  ಜತೆ ಕಳೆದ ವರ್ಷವಷ್ಟೇ ಪ್ರೇಮ ವಿವಾಹವಾಗಿದ್ದರು. ಈ ವಿವಾಹಕ್ಕೆ ಆಯುಷ್ ಅವರ ತಂದೆ ಕೌಶಲ್ ಕಿಶೋರ್ ಅವರ ಒಪ್ಪಿಗೆ ಇರಲಿಲ್ಲ ಎಂದು ವರದಿಯಾಗಿತ್ತು.

ಇದನ್ನೂ ಓದಿ: Bengaluru Crime: ಫೇಸ್​ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆ

Published On - 2:28 pm, Mon, 15 March 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?