AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಆಡುವುದಿಲ್ಲ ಎಂದ ಎಎಪಿ ನಿರ್ಧಾರ ಬಗ್ಗೆ ಲೇವಡಿ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

ಹೋಳಿ ಕೇವಲ ಹಬ್ಬವಲ್ಲ, ಕೆಟ್ಟದ್ದರ ವಿರುದ್ಧ ಒಳಿತಿನ ವಿಜಯದ ಸಂಕೇತ, ಕ್ರೌರ್ಯದ ವಿರುದ್ಧ ನ್ಯಾಯದ ಸಂಕೇತ. ಇಂದು ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ನಾಯಕರು ಈ ದುಷ್ಟತನ, ಕ್ರೌರ್ಯ ಮತ್ತು ಅನ್ಯಾಯದ ವಿರುದ್ಧ ಹಗಲಿರುಳು ಹೋರಾಡುತ್ತಿದ್ದಾರೆ. ಈ ವರ್ಷ, ಆಮ್ ಆದ್ಮಿ ಪಕ್ಷವು ನಾವು ಬಣ್ಣಗಳೊಂದಿಗೆ ಆಟವಾಡುವುದಿಲ್ಲ, ಹೋಳಿ ಆಚರಿಸುವುದಿಲ್ಲ ಎಂದು ನಿರ್ಧರಿಸಿದೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಹೋಳಿ ಆಡುವುದಿಲ್ಲ ಎಂದ ಎಎಪಿ ನಿರ್ಧಾರ ಬಗ್ಗೆ ಲೇವಡಿ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ
ಮನೋಜ್ ತಿವಾರಿ
ರಶ್ಮಿ ಕಲ್ಲಕಟ್ಟ
|

Updated on: Mar 25, 2024 | 4:14 PM

Share

ದೆಹಲಿ ಮಾರ್ಚ್ 25: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಜಾರಿ ನಿರ್ದೇಶನಾಲಯದ (ED) ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಿಜೆಪಿ ಸಂಸದ ಮನೋಜ್ ತಿವಾರಿ (Manoj Tiwari) ಲೇವಡಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷದ ಸಂಚಾಲಕರ ಬಂಧನವನ್ನು ಉಲ್ಲೇಖಿಸಿ, “ಕೋಯಿ ಖೇಲೆ ರೈಲ್ ಮೇ, ಕೋಯಿ ಖೇಲೆ ಜೈಲ್ ಮೇ” ಎಂದು ತಿವಾರಿ ಹಾಡಿದ್ದನ್ನು ಎಎನ್‌ಐ ಟ್ವೀಟ್ ಮಾಡಿದೆ. ತಮ್ಮ ನಾಯಕ ಕೇಜ್ರಿವಾಲ್ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷವು ತನ್ನ ಪ್ರತಿಭಟನೆಯನ್ನು ಮುಂದುವರೆಸಿದ್ದು, ಪಕ್ಷವು ಬಣ್ಣಗಳೊಂದಿಗೆ ಆಟವಾಡುವುದಿಲ್ಲ ಮತ್ತು ಹೋಳಿ ಆಚರಿಸುವುದಿಲ್ಲ ಎಂದು ಘೋಷಿಸಿತು.

ಹೋಳಿ ಕೇವಲ ಹಬ್ಬವಲ್ಲ, ಕೆಟ್ಟದ್ದರ ವಿರುದ್ಧ ಒಳಿತಿನ ವಿಜಯದ ಸಂಕೇತ, ಕ್ರೌರ್ಯದ ವಿರುದ್ಧ ನ್ಯಾಯದ ಸಂಕೇತ. ಇಂದು ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ನಾಯಕರು ಈ ದುಷ್ಟತನ, ಕ್ರೌರ್ಯ ಮತ್ತು ಅನ್ಯಾಯದ ವಿರುದ್ಧ ಹಗಲಿರುಳು ಹೋರಾಡುತ್ತಿದ್ದಾರೆ. ಈ ವರ್ಷ, ಆಮ್ ಆದ್ಮಿ ಪಕ್ಷವು ನಾವು ಬಣ್ಣಗಳೊಂದಿಗೆ ಆಟವಾಡುವುದಿಲ್ಲ, ಹೋಳಿ ಆಚರಿಸುವುದಿಲ್ಲ ಎಂದು ನಿರ್ಧರಿಸಿದೆ ಎಂದು ದೆಹಲಿ ಸಚಿವೆ ಅತಿಶಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮನೋಜ್ ತಿವಾರಿ ಹಾಡುತ್ತಿರುವ ವಿಡಿಯೊ

ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಟೀಕಾ ಪ್ರಹಾರ ಮಾಡಿದ ಸಚಿವೆ, ಕ್ರೂರ ಸರ್ವಾಧಿಕಾರಿ ದೆಹಲಿಯ ಪ್ರೀತಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕಿದ್ದಾರೆ. ಇಂದು ಅವರು ದೇಶದಿಂದ ಪ್ರಜಾಪ್ರಭುತ್ವವನ್ನು ತೊಡೆದುಹಾಕಲು ಯಾವುದೇ ಅವಕಾಶವನ್ನು ಬಿಟ್ಟಿಲ್ಲ.  ಈ ಹೋಳಿಯಲ್ಲಿ ನಾನು ನಿಮ್ಮೆಲ್ಲರಲ್ಲೂ ಒಂದು ಮನವಿ ಮಾಡುತ್ತೇನೆ. ಕ್ರೌರ್ಯ ಮತ್ತು ದುಷ್ಟತನದ ವಿರುದ್ಧದ ಈ ಹೋರಾಟದಲ್ಲಿ ನಮ್ಮ ಜೊತೆಗೂಡಿ ಬನ್ನಿ. ಇದು ಕೇವಲ ಎಎಪಿಯ ಹೋರಾಟವಲ್ಲ, ಇಡೀ ದೆಹಲಿ ಮತ್ತು ದೇಶಕ್ಕೆ ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆ ಎಂದಿದ್ದಾರೆ ಅತಿಶಿ.

ಇದನ್ನೂ ಓದಿ: JNU Elections: ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಡಪಕ್ಷ ಬೆಂಬಲಿತ ಗುಂಪಿಗೆ ಭರ್ಜರಿ ಗೆಲುವು

ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಈ ಪ್ರಕರಣದಲ್ಲಿ ಬಂಧಿತರಾದ ಮೂರನೇ ಉನ್ನತ ಆಪ್ ನಾಯಕರಾಗಿದ್ದಾರೆ 55ರ ಹರೆಯದ ಕೇಜ್ರಿವಾಲ್. ಎಎಪಿ ಸದಸ್ಯರಾಗಿರುವ ವಿರೋಧ ಪಕ್ಷ ಇಂಡಿಯಾ ಬ್ಲಾಕ್ ಮಾರ್ಚ್ 31 ರಂದು ಮೆಗಾ ಪ್ರತಿಭಟನಾ ರ‍್ಯಾಲಿಯನ್ನು ಘೋಷಿಸಿದೆ.  “ದೇಶದಲ್ಲಿ ಏನಾಗುತ್ತಿದೆ ಎಂಬುದರ ವಿರುದ್ಧ ನಾವು ಮಾರ್ಚ್ 31 ರಂದು ರಾಮಲೀಲಾ ಮೈದಾನದಲ್ಲಿ ‘ಮಹಾ ರ‍್ಯಾಲಿ’ ನಡೆಸುತ್ತೇವೆ. ಭಾರತ ಬ್ಲಾಕ್‌ನ ಉನ್ನತ ನಾಯಕತ್ವವು ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ” ಎಂದು ದೆಹಲಿ ಸಚಿವ ಗೋಪಾಲ್ ರಾಯ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್