AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟ ಬೆಂಬಲಿಸಿ ಟ್ರಾಕ್ಟರ್​ನಲ್ಲಿ ಚಳಿಗಾಲದ ಅಧಿವೇಶನಕ್ಕೆ ತೆರಳಲು ಕಾಂಗ್ರೆಸ್ ನಿರ್ಧಾರ: ಬಿಜೆಪಿ ಟೀಕೆ

ಡಿಸೆಂಬರ್ 28ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಶಾಸಕರು ಟ್ರಾಕ್ಟರ್​ನಲ್ಲಿ ಬರುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆ ಮೂಲಕ, ರೈತ ಚಳವಳಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದರು.

ರೈತ ಹೋರಾಟ ಬೆಂಬಲಿಸಿ ಟ್ರಾಕ್ಟರ್​ನಲ್ಲಿ ಚಳಿಗಾಲದ ಅಧಿವೇಶನಕ್ಕೆ ತೆರಳಲು ಕಾಂಗ್ರೆಸ್ ನಿರ್ಧಾರ: ಬಿಜೆಪಿ ಟೀಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 11:23 PM

Share

ಭೋಪಾಲ್: ‘15 ತಿಂಗಳಿನಿಂದ ಒಬ್ಬ ರೈತರ ಹೊಲಕ್ಕೂ ಭೇಟಿ ನೀಡದ ಕಮಲ್​ನಾಥ್ ಟ್ರ್ಯಾಕ್ಟರ್​ನಲ್ಲಿ ಬರುತ್ತಾರಂತೆ. ಆಲೂಗಡ್ಡೆ ನೆಲದೊಳಗೆ ಬೆಳೆಯುತ್ತೋ? ಮೇಲೆ ಬೆಳೆಯುತ್ತೋ ತಿಳಿಯದ ರಾಹುಲ್ ಗಾಂಧಿ ರೈತರನ್ನು ಬೆಂಬಲಿಸಿ ಟ್ರಾಕ್ಟರ್ ಮೂಲಕ ಹೋರಾಟ ನಡೆಸುತ್ತಾರೆ’ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೂ ಆಗಿರುವ ಸಂಸದ ನರೋತ್ತಮ್ ಮಿಶ್ರಾ ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದಾರೆ.

ಡಿ.28ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಶಾಸಕರು ಟ್ರ್ಯಾಕ್ಟರ್​ನಲ್ಲಿ ಬರುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆ ಮೂಲಕ, ರೈತ ಚಳವಳಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದರು. ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕಮಲ್​ನಾಥ್ ಕೂಡ ಈ ಬಗ್ಗೆ ಒಪ್ಪಿಗೆ ಸೂಚಿಸಿ, ಪಕ್ಷದ ಸದಸ್ಯರೂ ಟ್ರಾಕ್ಟರ್ ಚಳವಳಿ ನಡೆಸುವಂತೆ ಕೇಳಿಕೊಂಡಿದ್ದರು.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಬಿಜೆಪಿ ನಾಯಕ ನರೋತ್ತಮ್ ಮಿಶ್ರಾ ಕಾಂಗ್ರೆಸ್ ನಿರ್ಧಾರವನ್ನು ಲೇವಡಿ ಮಾಡಿದ್ದಾರೆ. ರೈತ ಕಾಯ್ದೆಗಳಲ್ಲಿ ಏನು ದೋಷವಿದೆ ಎಂದು ತಿಳಿಯುತ್ತಿಲ್ಲ. ಕಾಂಗ್ರೆಸ್ ಸಹಿತ ಇತರ ‘ತುಕ್ಡೆ ತುಕ್ಡೆ ಗ್ಯಾಂಗ್’ ರೈತರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈಗಾಗಲೇ ಸೋತು ಸುಣ್ಣವಾಗಿರುವ ಕಾಂಗ್ರೆಸ್ ರೈತಸ್ನೇಹಿ ಎಂದು ತೋರಿಕೊಳ್ಳುತ್ತಿದೆ ಎಂದು ಬಿಜೆಪಿ ಶಾಸಕ ಓಂ ಪ್ರಕಾಶ್ ಸಖ್ಲೇಚಾ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದಾರೆ.

ರೈತ ದಿನದ ಉಡುಗೊರೆಯಾಗಿ ನೂತನ ಕೃಷಿ ಕಾಯ್ದೆ ಹಿಂಪಡೆಯಿರಿ: ಕೇಂದ್ರ ಸರ್ಕಾರಕ್ಕೆ ರೈತರ ಮನವಿ

Published On - 3:00 pm, Wed, 23 December 20

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ