AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಮಿಕಲ್ ತಲೆ ಮೇಲೆ ಸುರಿಬೇಕಾ? ಯಮುನಾ ನದಿಗೆ ರಾಸಾಯನಿಕ ಸಿಂಪಡಿಸಿದ ಅಧಿಕಾರಿಗಳ ವಿರುದ್ಧ ಗುಡುಗಿದ ಬಿಜೆಪಿ ಸಂಸದ

ಈ ವಿಡಿಯೊದಲ್ಲಿಪ ಶ್ಚಿಮ ದೆಹಲಿಯ ಸಂಸದರು ಜಲ ಮಂಡಳಿಯ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಹೋಗಿ ನದಿಯಲ್ಲಿ ಮುಳುಗಿ ಅಂದಿದ್ದಾರೆ. ನದಿಯನ್ನು ಸ್ವಚ್ಛಗೊಳಿಸಲು ಅಧಿಕಾರಿಗಳು ರಾಸಾಯನಿಕಗಳನ್ನು ಸಿಂಪಡಿಸುತ್ತಿದ್ದರು.

ಕೆಮಿಕಲ್ ತಲೆ ಮೇಲೆ ಸುರಿಬೇಕಾ? ಯಮುನಾ ನದಿಗೆ ರಾಸಾಯನಿಕ ಸಿಂಪಡಿಸಿದ ಅಧಿಕಾರಿಗಳ ವಿರುದ್ಧ ಗುಡುಗಿದ ಬಿಜೆಪಿ ಸಂಸದ
ಪರ್ವೇಶ್ ವರ್ಮಾ
TV9 Web
| Edited By: |

Updated on: Oct 28, 2022 | 8:15 PM

Share

ಛತ್ ಪೂಜೆಗೂ ಮುನ್ನ ಯಮುನಾ ನದಿಗೆ  (Yamuna river) ರಾಸಾಯನಿಕ ಸಿಂಪಡಿಸುತ್ತಿದ್ದ ದೆಹಲಿ ಜಲ ಮಂಡಳಿ (DJB) ಅಧಿಕಾರಿಗಳೊಂದಿಗೆ ಬಿಜೆಪಿ ಸಂಸದ ಪರ್ವೇಶ್ ವರ್ಮಾ (Parvesh Verma) ವಾಗ್ವಾದ ನಡೆಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ವಿಡಿಯೊದಲ್ಲಿಪ ಶ್ಚಿಮ ದೆಹಲಿಯ ಸಂಸದರು ಜಲ ಮಂಡಳಿಯ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಹೋಗಿ ನದಿಯಲ್ಲಿ ಮುಳುಗಿ ಅಂದಿದ್ದಾರೆ. ನದಿಯನ್ನು ಸ್ವಚ್ಛಗೊಳಿಸಲು ಅಧಿಕಾರಿಗಳು ರಾಸಾಯನಿಕಗಳನ್ನು ಸಿಂಪಡಿಸುತ್ತಿದ್ದರು. ಯಮುನಾ ಘಾಟ್ ಬಳಿಯಿರುವ ರಾಸಾಯನಿಕಗಳ ಬ್ಯಾರೆಲ್‌ಗಳತ್ತ ಬೊಟ್ಟು ಮಾಡಿ ಬಿಜೆಪಿ ನಾಯಕ ವರ್ಮಾ,ಎಂಟು ವರ್ಷಗಳ ನಂತರ, ಅದು (ರಾಸಾಯನಿಕ) ಅನುಮೋದನೆ ಪಡೆದಿರುವುದು ನಿಮಗೆ ಈಗ ನೆನಪಿದೆಯೇ? ಯಹಾನ್ ಲೋಗೋನ್ ಕೋ ಮಾರ್ ರಹೇ ಹೋ ತುಮ್, ಆಟ್ ಸಾಲ್ ಮೇ ತುಮ್ ಇಸ್ಕೋ ಸಾಫ್ ನಹೀಂ ಕರ್ ಪಾಯೆ (ನೀವು ಇಲ್ಲಿ ಜನರನ್ನು ಕೊಲ್ಲುತ್ತಿದ್ದೀರಿ, ಎಂಟು ವರ್ಷಗಳಿಂದ ನದಿಯನ್ನು ಸ್ವಚ್ಛಗೊಳಿಸಲು ನಿಮಗೆ ಸಾಧ್ಯವಾಗಲಿಲ್ಲವೇ) ಎಂದು ಕೂಗಾಡುತ್ತಿರುವುದು ವಿಡಿಯೊದಲ್ಲಿದೆ.

ಪರ್ವೇಶ್ ವರ್ಮಾ ಅವರು ಅಧಿಕಾರಿಗಳಲ್ಲಿ “ಪೆಹ್ಲೆ ತು ಇಸ್ಮೇ ದುಬ್ಕಿ ಲಗಾ (ಮೊದಲು ನೀವು ಇದರಲ್ಲಿ ಮುಳುಗೆದ್ದು ಬನ್ನಿ )” ಎಂದು ಹೇಳುವುದನ್ನು ಕೇಳಬಹುದು.

ಜಲ ಮಂಡಳಿಯ ಅಧಿಕಾರಿಯು ರಾಸಾಯನಿಕವನ್ನು US FDA ಅನುಮೋದಿಸಿದೆ. ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ ಸಹ ಅನುಮೋದಿಸಿದೆ ಎಂದು ಹೇಳಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದರು,ಈ ರಾಸಾಯನಿಕವನ್ನು ನಿನ್ನ ತಲೆ ಮೇಲೆ ಸುರಿಯಲಾ? ನೀನು ಇಲ್ಲಿ ಕೆಮಿಕಲ್ ಹಾಕುತ್ತಿದ್ದಿ. ಇದೇ ನೀರಲ್ಲಿ ಜನರು ಮುಳುಗೇಳುತ್ತಾರೆ. ಇದನ್ನು ನಿನ್ನ ತಲೆ ಮೇಲೆ ಸುರಿದು ಬಿಡಲಾ? ನಾಚಿಕೆ ಆಗಲ್ವಾ ನಿನಗೆ? ಇಲ್ಲಿ ಜನರು ಮುಳುಗೇಳಲು ಬರುತ್ತಾರೆ. ನೀನು ಮೊದಲು ಅದನ್ನು ಮಾಡಿ ತೋರಿಸು. ನಿನಗೆ ಎಂಟು ವರ್ಷಗಳಲ್ಲಿ ಬುದ್ಧಿ ಬಂದಿಲ್ವಾ, ನಾಳೆ ಇಲ್ಲಿ ಛತ್ ಪೂಜೆ ಮಾಡುತ್ತಾರೆ. ಆದರೆ ನೀನಿಲ್ಲಿ ಮಾಡುತ್ತಿರುವುದೇನನ್ನು, ಕೆಟ್ಟ ಮನುಷ್ಯ ಎಂದು ಪರ್ವೇಶ್ ವರ್ಮಾ ಬೈದಿದ್ದಾರೆ.

ಅಧಿಕಾರಿಗಳು ಪ್ರತಿ ವಾರಾಂತ್ಯದಲ್ಲಿ ನದಿಯನ್ನು ನಿಯಮಿತವಾಗಿ ಸ್ವಚ್ಛಗೊಳಿಸುತ್ತಾರೆ ಎಂಬ ವಾದ ಕೇಳಿಬರುತ್ತಿದೆ.

ಇಂಡಿಯಾ ಟುಡೇ ಜೊತೆ ಮಾತನಾಡಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ, ದೆಹಲಿ ಮುಖ್ಯಮಂತ್ರಿ ಮತ್ತು ಸಚಿವರು ಮಾತನಾಡಲು ಸಿದ್ಧರಿಲ್ಲದಿದ್ದರೆ ನಾವು ಅಧಿಕಾರಿಗಳೊಂದಿಗೆ ಮಾತನಾಡಬೇಕಾಗುತ್ತದೆ. ಅಧಿಕಾರಿಗಳು ಸಹ ಕೇಳದಿದ್ದರೆ, ಸಹಜವಾಗಿ ನೀವು ಕೋಪಗೊಳ್ಳುತ್ತೀರಿ. ಅವರು ದೆಹಲಿ ನಿವಾಸಿಗಳಿಗೆ ವಿಷಪೂರಿತ ನೀರನ್ನು ನೀಡುತ್ತಿದ್ದರೆ, ನಾನು ಅಧಿಕಾರಿಗಳೊಂದಿಗೆ ಅಸಭ್ಯವಾಗಿ ಮಾತನಾಡುತ್ತೇನೆ. ನಾನು ಇದನ್ನು ನನಗಾಗಿ ಮಾಡುತ್ತಿಲ್ಲ, ದೆಹಲಿ ನಿವಾಸಿಗಳಿಗಾಗಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ