AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಕೊರೊನಾ ಸೋಂಕು ತಗುಲಿಲ್ಲ, ಏಕೆಂದರೆ ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ: ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್

ಎರಡು ವರ್ಷಗಳ ಮೊದಲು ಗೋಮೂತ್ರ ಹಾಗೂ ಇತರ ಹಸುವಿನ ಉತ್ಪನ್ನಗಳಿಂದ ತನ್ನ ಕ್ಯಾನ್ಸರ್ ಗುಣವಾಗಿತ್ತು ಎಂದು ಪ್ರಗ್ಯಾಸಿಂಗ್ ಹೇಳಿಕೊಂಡಿದ್ದರು.

ನನಗೆ ಕೊರೊನಾ ಸೋಂಕು ತಗುಲಿಲ್ಲ, ಏಕೆಂದರೆ ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ: ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್
ಪ್ರಗ್ಯಾಸಿಂಗ್ ಠಾಕುರ್
TV9 Web
| Edited By: |

Updated on:Aug 21, 2021 | 10:17 AM

Share

ಭೋಪಾಲ್: ನನಗೆ ಕೊರೊನಾ ಸೋಂಕು ತಗುಲಿಲ್ಲ. ಏಕೆಂದರೆ ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ ಎಂದು ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್ ನೀಡಿರುವ ಹೇಳಿಕೆ ಆಕ್ಷೇಪಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್ ಹೀಗೆ ಹೇಳಿಕೆ ನೀಡಿದ್ದರು. ನನಗೆ ಕೊರೊನಾ ತಗುಲಿಲ್ಲ. ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ ಎಂದು ಹೇಳಿದ್ದರು.

ಪ್ರಗ್ಯಾಸಿಂಗ್ ಹೇಳಿಕೆಗೆ ವಿಜ್ಞಾನಿಗಳು, ತಜ್ಞರ ಆಕ್ಷೇಪ ವ್ಯಕ್ತವಾಗಿದೆ. ಇಂತಹವರು ಕೊವಿಡ್ ಈಡಿಯಟ್ಸ್ ಎಂದು ಹಲವರು ಆಕ್ಷೇಪಿಸಿದ್ದಾರೆ. ಕೊರೊನಾದಿಂದ ಸಂಭವಿಸುವ ಶ್ವಾಸಕೋಶದ ಸಮಸ್ಯೆಗಳನ್ನು ಗೋಮೂತ್ರ ಕಡಿಮೆ ಮಾಡುತ್ತದೆ. ನಾನು ದಿನನಿತ್ಯ ಗೋಮೂತ್ರ ಸೇವಿಸುತ್ತೇನೆ. ಅದರಿಂದ ನಾನು ಕೊರೊನಾ ವಿರುದ್ಧ ಯಾವುದೇ ಔಷಧ ತೆಗೆದುಕೊಳ್ಳಬೇಕು ಎಂದಿಲ್ಲ. ನನಗೆ ಕೊರೊನಾ ಇಲ್ಲ ಎಂದು ಪ್ರಗ್ಯಾಸಿಂಗ್ ಹೇಳಿದ್ದಾರೆ.

ಎರಡು ವರ್ಷಗಳ ಮೊದಲು ಗೋಮೂತ್ರ ಹಾಗೂ ಇತರ ಹಸುವಿನ ಉತ್ಪನ್ನಗಳಿಂದ ತನ್ನ ಕ್ಯಾನ್ಸರ್ ಗುಣವಾಗಿತ್ತು ಎಂದು ಪ್ರಗ್ಯಾಸಿಂಗ್ ಹೇಳಿಕೊಂಡಿದ್ದರು.

ಇದಕ್ಕೂ ಮೊದಲು ಪ್ರತಿದಿನ ಬೆಳಗ್ಗೆ  ಖಾಲಿ ಹೊಟ್ಟೆಯಲ್ಲಿ  ಗೋಮೂತ್ರ ಸೇವಿಸಿದರೆ ಕೊರೊನಾವೈರಸ್ ನಿಂದ ರಕ್ಷಣೆ ಪಡೆಯಬಹುದು ಎಂದು ಬಿಜೆಪಿ  ಶಾಸಕ ಸುರೇಂದ್ರ  ಸಿಂಗ್ ಹೇಳಿದ್ದರು. ಉತ್ತರ ಪ್ರದೇಶದ ಬೈರಿಯಾ ವಿಧಾನಸಭಾ ಕ್ಷೇತ್ರದ  ಶಾಸಕ ಸುರೇಂದ್ರ ಸಿಂಗ್ ಗೋಮೂತ್ರವನ್ನು ಹೇಗೆ ಸೇವಿಸಬೇಕು ಎಂಬ ವಿಡಿಯೊವೊಂದನ್ನು  ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದರು.

ವಿಡಿಯೊದಲ್ಲಿ  ಪತಂಜಲಿ  ಗೋಮೂತ್ರದ ಬಾಟಲಿ ಹಿಡಿದುಕೊಂಡಿರುವ ಸಿಂಗ್ ಅದರಿಂದ 50 ಮಿಲಿ ಲೀಟರ್ ಗೋಮೂತ್ರವನ್ನು ತಣ್ಣೀರಲ್ಲಿ  ಬೆರೆಸಿ  ಪ್ರತಿದಿನ ಬೆಳಗ್ಗೆ ಕುಡಿದರೆ  ಕೊರೊನಾವೈರಸ್ ವಿರುದ್ಧ ನೈಸರ್ಗಿಕ ಪ್ರತಿರೋಧಶಕ್ತಿ ಸಿಗುತ್ತದೆ ಎಂದಿದ್ದರು.

ಭಾರತದಲ್ಲಿ  ಕೊವಿಡ್ ಎರಡನೇ ಅಲೆ ಇರುವಾಗಲೂ ನಾನು ಪ್ರತಿದಿನ ಸರಿ ಸುಮಾರು 18 ಗಂಟೆಗಳ ಕಾಲ ಜನರೊಂದಿಗೆ ಹೊರಗೆ ಇರುತ್ತೇನೆ. ಆದರೂ ನಾನು ಆರೋಗ್ಯವಂತನಾಗಿದ್ದೇನೆ ಎಂದಿದ್ದರು.

ಇದನ್ನೂ ಓದಿ: ಕೊವಿಶೀಲ್ಡ್ ಲಸಿಕೆ ಪಡೆದ ಬಳಿಕ ಈ ಸಮಸ್ಯೆಗಳು ಕಂಡುಬಂದರೆ ಎಚ್ಚರವಹಿಸಿ; ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಡಿಸೆಂಬರ್ ಅಂತ್ಯದೊಳಗೆ ದೇಶದ ಎಲ್ಲರಿಗೂ ಲಸಿಕೆ; ಕ್ಯಾಲೆಂಡರ್ ಆಫ್ ಇವೆಂಟ್ಸ್ ಸಿದ್ಧಪಡಿಸುತ್ತಿರುವ ಕೇಂದ್ರ

Published On - 6:45 pm, Mon, 17 May 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ