AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಬಿಜೆಪಿ ಸಂಸದನಿಗೆ ಥಳಿಸಿದ ಸಾರ್ವಜನಿಕರು; ತಪ್ಪಿಸಿಕೊಂಡರೂ ಅಟ್ಟಿಸಿ ಹೋಗಿ ಹಲ್ಲೆ

ಉತ್ತರ ಪ್ರದೇಶದ ಪ್ರತಾಪ್​ ಗಢ್​​ನ ಬಿಜೆಪಿ ಸಂಸದ ಸಂಗಮ್​ ಲಾಲ್​ ಗುಪ್ತಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರು ಥಳಿಸಿದ್ದಾರೆ. ಸಂಗಮ್​ ಲಾಲ್​ ಅವರು ತಮ್ಮ ಕ್ಷೇತ್ರ ಪ್ರತಾಪ್​ಗಢ್​​ನ ಸಂಗಿಪುರ್​​ ಬ್ಲಾಕ್​​ನಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು.  ಈ ವೇಳೆ ಸಾರ್ವಜನಿಕರ ಗುಂಪೊಂದು ಅವರ ಮೇಲೆ ದಾಳಿ ನಡೆಸಿ, ಹೊಡೆದಿದೆ. ಜನರಿಂದ ತಪ್ಪಿಸಿಕೊಂಡು ವಾಹನ ಹತ್ತಿದರೂ ಬಿಡದೆ, ವಾಹನಕ್ಕೇ ಕಲ್ಲು ಹೊಡೆದಿದ್ದಾರೆ. ಈ ದಾಳಿ ನಡೆಯಲು ಮುಖ್ಯ ಕಾರಣ  ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ, ಜನಪ್ರತಿನಿಧಿ […]

Uttar Pradesh: ಬಿಜೆಪಿ ಸಂಸದನಿಗೆ ಥಳಿಸಿದ ಸಾರ್ವಜನಿಕರು; ತಪ್ಪಿಸಿಕೊಂಡರೂ ಅಟ್ಟಿಸಿ ಹೋಗಿ ಹಲ್ಲೆ
ಸಂಗಮ್​ ಲಾಲ್​ ಗುಪ್ತಾ
Follow us
TV9 Web
| Updated By: Lakshmi Hegde

Updated on:Sep 26, 2021 | 5:29 PM

ಉತ್ತರ ಪ್ರದೇಶದ ಪ್ರತಾಪ್​ ಗಢ್​​ನ ಬಿಜೆಪಿ ಸಂಸದ ಸಂಗಮ್​ ಲಾಲ್​ ಗುಪ್ತಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರು ಥಳಿಸಿದ್ದಾರೆ. ಸಂಗಮ್​ ಲಾಲ್​ ಅವರು ತಮ್ಮ ಕ್ಷೇತ್ರ ಪ್ರತಾಪ್​ಗಢ್​​ನ ಸಂಗಿಪುರ್​​ ಬ್ಲಾಕ್​​ನಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು.  ಈ ವೇಳೆ ಸಾರ್ವಜನಿಕರ ಗುಂಪೊಂದು ಅವರ ಮೇಲೆ ದಾಳಿ ನಡೆಸಿ, ಹೊಡೆದಿದೆ. ಜನರಿಂದ ತಪ್ಪಿಸಿಕೊಂಡು ವಾಹನ ಹತ್ತಿದರೂ ಬಿಡದೆ, ವಾಹನಕ್ಕೇ ಕಲ್ಲು ಹೊಡೆದಿದ್ದಾರೆ.

ಈ ದಾಳಿ ನಡೆಯಲು ಮುಖ್ಯ ಕಾರಣ  ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ, ಜನಪ್ರತಿನಿಧಿ ಆರಾಧನಾ ಮಿಶ್ರಾ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆರೋಗ್ಯ ಶಿಬಿರದಲ್ಲಿ ನಡೆದ ಗಲಾಟೆಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರೂ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರತಾಪ್​ಗಢ್​ ಬಿಜೆಪಿ ಸಂಸದನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಾರಾಣಸಿ ಹೆದ್ದಾರಿಯಲ್ಲಿ ಧರಣಿ ನಡೆಸಿ, ಕ್ರಮಕ್ಕೆ ಆಗ್ರಹಿಸಿದ್ದರು.

ಇದಾದ ನಂತರ ಪ್ರತಾಪ್​ಗಡ್​ನ ಲಾಲ್​ಗಂಜ್​ ಪೊಲೀಸ್​ ಠಾಣೆಯಲ್ಲಿ ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ ಆರಾಧನಾ ಮಿಶ್ರ ಮತ್ತು ಅವರ 27 ಬೆಂಬಲಿಗರ ವಿರುದ್ಧ ಹತ್ಯೆ ಯತ್ನ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಿಜೆಪಿಗರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​, ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದ ಕೆಲವರು ಅಲ್ಲಿನ ವ್ಯವಸ್ಥೆಯಿಂದ ಕಿರಿಕಿರಿಗೊಂಡರು. ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದನನ್ನು ಪ್ರಶ್ನಿಸಿದರು. ಆದರೆ ಸರಿಯಾಗಿ ಉತ್ತರ ಬಾರದೆ ಇದ್ದಾಗ ಸಿಟ್ಟಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

ಸೈಬೀರಿಯಾ ಕಾಡಿನಲ್ಲಿ ರಷ್ಯಾ ಅಧ್ಯಕ್ಷ; ಮೀನು ಹಿಡಿದು, ಗುಡ್ಡ ಹತ್ತಿದ ವ್ಲಾದಿಮಿರ್​ ಪುತಿನ್​ 

(BJP MP Sangam Lal Gupta attacked by public in Pratapgarh Of Uttar Pradesh)

Published On - 5:28 pm, Sun, 26 September 21

ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ