AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಬಿಜೆಪಿ ಸಂಸದನಿಗೆ ಥಳಿಸಿದ ಸಾರ್ವಜನಿಕರು; ತಪ್ಪಿಸಿಕೊಂಡರೂ ಅಟ್ಟಿಸಿ ಹೋಗಿ ಹಲ್ಲೆ

ಉತ್ತರ ಪ್ರದೇಶದ ಪ್ರತಾಪ್​ ಗಢ್​​ನ ಬಿಜೆಪಿ ಸಂಸದ ಸಂಗಮ್​ ಲಾಲ್​ ಗುಪ್ತಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರು ಥಳಿಸಿದ್ದಾರೆ. ಸಂಗಮ್​ ಲಾಲ್​ ಅವರು ತಮ್ಮ ಕ್ಷೇತ್ರ ಪ್ರತಾಪ್​ಗಢ್​​ನ ಸಂಗಿಪುರ್​​ ಬ್ಲಾಕ್​​ನಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು.  ಈ ವೇಳೆ ಸಾರ್ವಜನಿಕರ ಗುಂಪೊಂದು ಅವರ ಮೇಲೆ ದಾಳಿ ನಡೆಸಿ, ಹೊಡೆದಿದೆ. ಜನರಿಂದ ತಪ್ಪಿಸಿಕೊಂಡು ವಾಹನ ಹತ್ತಿದರೂ ಬಿಡದೆ, ವಾಹನಕ್ಕೇ ಕಲ್ಲು ಹೊಡೆದಿದ್ದಾರೆ. ಈ ದಾಳಿ ನಡೆಯಲು ಮುಖ್ಯ ಕಾರಣ  ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ, ಜನಪ್ರತಿನಿಧಿ […]

Uttar Pradesh: ಬಿಜೆಪಿ ಸಂಸದನಿಗೆ ಥಳಿಸಿದ ಸಾರ್ವಜನಿಕರು; ತಪ್ಪಿಸಿಕೊಂಡರೂ ಅಟ್ಟಿಸಿ ಹೋಗಿ ಹಲ್ಲೆ
ಸಂಗಮ್​ ಲಾಲ್​ ಗುಪ್ತಾ
TV9 Web
| Edited By: |

Updated on:Sep 26, 2021 | 5:29 PM

Share

ಉತ್ತರ ಪ್ರದೇಶದ ಪ್ರತಾಪ್​ ಗಢ್​​ನ ಬಿಜೆಪಿ ಸಂಸದ ಸಂಗಮ್​ ಲಾಲ್​ ಗುಪ್ತಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರು ಥಳಿಸಿದ್ದಾರೆ. ಸಂಗಮ್​ ಲಾಲ್​ ಅವರು ತಮ್ಮ ಕ್ಷೇತ್ರ ಪ್ರತಾಪ್​ಗಢ್​​ನ ಸಂಗಿಪುರ್​​ ಬ್ಲಾಕ್​​ನಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು.  ಈ ವೇಳೆ ಸಾರ್ವಜನಿಕರ ಗುಂಪೊಂದು ಅವರ ಮೇಲೆ ದಾಳಿ ನಡೆಸಿ, ಹೊಡೆದಿದೆ. ಜನರಿಂದ ತಪ್ಪಿಸಿಕೊಂಡು ವಾಹನ ಹತ್ತಿದರೂ ಬಿಡದೆ, ವಾಹನಕ್ಕೇ ಕಲ್ಲು ಹೊಡೆದಿದ್ದಾರೆ.

ಈ ದಾಳಿ ನಡೆಯಲು ಮುಖ್ಯ ಕಾರಣ  ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ, ಜನಪ್ರತಿನಿಧಿ ಆರಾಧನಾ ಮಿಶ್ರಾ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆರೋಗ್ಯ ಶಿಬಿರದಲ್ಲಿ ನಡೆದ ಗಲಾಟೆಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರೂ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರತಾಪ್​ಗಢ್​ ಬಿಜೆಪಿ ಸಂಸದನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಾರಾಣಸಿ ಹೆದ್ದಾರಿಯಲ್ಲಿ ಧರಣಿ ನಡೆಸಿ, ಕ್ರಮಕ್ಕೆ ಆಗ್ರಹಿಸಿದ್ದರು.

ಇದಾದ ನಂತರ ಪ್ರತಾಪ್​ಗಡ್​ನ ಲಾಲ್​ಗಂಜ್​ ಪೊಲೀಸ್​ ಠಾಣೆಯಲ್ಲಿ ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ ಆರಾಧನಾ ಮಿಶ್ರ ಮತ್ತು ಅವರ 27 ಬೆಂಬಲಿಗರ ವಿರುದ್ಧ ಹತ್ಯೆ ಯತ್ನ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಿಜೆಪಿಗರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​, ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದ ಕೆಲವರು ಅಲ್ಲಿನ ವ್ಯವಸ್ಥೆಯಿಂದ ಕಿರಿಕಿರಿಗೊಂಡರು. ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದನನ್ನು ಪ್ರಶ್ನಿಸಿದರು. ಆದರೆ ಸರಿಯಾಗಿ ಉತ್ತರ ಬಾರದೆ ಇದ್ದಾಗ ಸಿಟ್ಟಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

ಸೈಬೀರಿಯಾ ಕಾಡಿನಲ್ಲಿ ರಷ್ಯಾ ಅಧ್ಯಕ್ಷ; ಮೀನು ಹಿಡಿದು, ಗುಡ್ಡ ಹತ್ತಿದ ವ್ಲಾದಿಮಿರ್​ ಪುತಿನ್​ 

(BJP MP Sangam Lal Gupta attacked by public in Pratapgarh Of Uttar Pradesh)

Published On - 5:28 pm, Sun, 26 September 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ