AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಬಿಜೆಪಿ ಸಂಸದನಿಗೆ ಥಳಿಸಿದ ಸಾರ್ವಜನಿಕರು; ತಪ್ಪಿಸಿಕೊಂಡರೂ ಅಟ್ಟಿಸಿ ಹೋಗಿ ಹಲ್ಲೆ

ಉತ್ತರ ಪ್ರದೇಶದ ಪ್ರತಾಪ್​ ಗಢ್​​ನ ಬಿಜೆಪಿ ಸಂಸದ ಸಂಗಮ್​ ಲಾಲ್​ ಗುಪ್ತಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರು ಥಳಿಸಿದ್ದಾರೆ. ಸಂಗಮ್​ ಲಾಲ್​ ಅವರು ತಮ್ಮ ಕ್ಷೇತ್ರ ಪ್ರತಾಪ್​ಗಢ್​​ನ ಸಂಗಿಪುರ್​​ ಬ್ಲಾಕ್​​ನಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು.  ಈ ವೇಳೆ ಸಾರ್ವಜನಿಕರ ಗುಂಪೊಂದು ಅವರ ಮೇಲೆ ದಾಳಿ ನಡೆಸಿ, ಹೊಡೆದಿದೆ. ಜನರಿಂದ ತಪ್ಪಿಸಿಕೊಂಡು ವಾಹನ ಹತ್ತಿದರೂ ಬಿಡದೆ, ವಾಹನಕ್ಕೇ ಕಲ್ಲು ಹೊಡೆದಿದ್ದಾರೆ. ಈ ದಾಳಿ ನಡೆಯಲು ಮುಖ್ಯ ಕಾರಣ  ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ, ಜನಪ್ರತಿನಿಧಿ […]

Uttar Pradesh: ಬಿಜೆಪಿ ಸಂಸದನಿಗೆ ಥಳಿಸಿದ ಸಾರ್ವಜನಿಕರು; ತಪ್ಪಿಸಿಕೊಂಡರೂ ಅಟ್ಟಿಸಿ ಹೋಗಿ ಹಲ್ಲೆ
ಸಂಗಮ್​ ಲಾಲ್​ ಗುಪ್ತಾ
TV9 Web
| Edited By: |

Updated on:Sep 26, 2021 | 5:29 PM

Share

ಉತ್ತರ ಪ್ರದೇಶದ ಪ್ರತಾಪ್​ ಗಢ್​​ನ ಬಿಜೆಪಿ ಸಂಸದ ಸಂಗಮ್​ ಲಾಲ್​ ಗುಪ್ತಾರಿಗೆ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರು ಥಳಿಸಿದ್ದಾರೆ. ಸಂಗಮ್​ ಲಾಲ್​ ಅವರು ತಮ್ಮ ಕ್ಷೇತ್ರ ಪ್ರತಾಪ್​ಗಢ್​​ನ ಸಂಗಿಪುರ್​​ ಬ್ಲಾಕ್​​ನಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು.  ಈ ವೇಳೆ ಸಾರ್ವಜನಿಕರ ಗುಂಪೊಂದು ಅವರ ಮೇಲೆ ದಾಳಿ ನಡೆಸಿ, ಹೊಡೆದಿದೆ. ಜನರಿಂದ ತಪ್ಪಿಸಿಕೊಂಡು ವಾಹನ ಹತ್ತಿದರೂ ಬಿಡದೆ, ವಾಹನಕ್ಕೇ ಕಲ್ಲು ಹೊಡೆದಿದ್ದಾರೆ.

ಈ ದಾಳಿ ನಡೆಯಲು ಮುಖ್ಯ ಕಾರಣ  ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ, ಜನಪ್ರತಿನಿಧಿ ಆರಾಧನಾ ಮಿಶ್ರಾ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆರೋಗ್ಯ ಶಿಬಿರದಲ್ಲಿ ನಡೆದ ಗಲಾಟೆಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರೂ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರತಾಪ್​ಗಢ್​ ಬಿಜೆಪಿ ಸಂಸದನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಾರಾಣಸಿ ಹೆದ್ದಾರಿಯಲ್ಲಿ ಧರಣಿ ನಡೆಸಿ, ಕ್ರಮಕ್ಕೆ ಆಗ್ರಹಿಸಿದ್ದರು.

ಇದಾದ ನಂತರ ಪ್ರತಾಪ್​ಗಡ್​ನ ಲಾಲ್​ಗಂಜ್​ ಪೊಲೀಸ್​ ಠಾಣೆಯಲ್ಲಿ ಕಾಂಗ್ರೆಸ್​ ನಾಯಕ ಪ್ರಮೋದ್​ ತಿವಾರಿ ಮತ್ತು ಅವರ ಪುತ್ರಿ ಆರಾಧನಾ ಮಿಶ್ರ ಮತ್ತು ಅವರ 27 ಬೆಂಬಲಿಗರ ವಿರುದ್ಧ ಹತ್ಯೆ ಯತ್ನ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಿಜೆಪಿಗರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​, ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದ ಕೆಲವರು ಅಲ್ಲಿನ ವ್ಯವಸ್ಥೆಯಿಂದ ಕಿರಿಕಿರಿಗೊಂಡರು. ಅವ್ಯವಸ್ಥೆ ಬಗ್ಗೆ ಬಿಜೆಪಿ ಸಂಸದನನ್ನು ಪ್ರಶ್ನಿಸಿದರು. ಆದರೆ ಸರಿಯಾಗಿ ಉತ್ತರ ಬಾರದೆ ಇದ್ದಾಗ ಸಿಟ್ಟಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

ಸೈಬೀರಿಯಾ ಕಾಡಿನಲ್ಲಿ ರಷ್ಯಾ ಅಧ್ಯಕ್ಷ; ಮೀನು ಹಿಡಿದು, ಗುಡ್ಡ ಹತ್ತಿದ ವ್ಲಾದಿಮಿರ್​ ಪುತಿನ್​ 

(BJP MP Sangam Lal Gupta attacked by public in Pratapgarh Of Uttar Pradesh)

Published On - 5:28 pm, Sun, 26 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ