AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ಸತೀಶ್​ಚಂದ್ರ ದುಬೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬಿಜೆಪಿ ಸಂಸದ ಸತೀಶ್​ ಚಂದ್ರ ದುಬೆ ಅವರಿದ್ದ ಕಾರು ಪಾಟ್ನಾದಲ್ಲಿ ಅಪಘಾತಕ್ಕೀಡಾಗಿದ್ದು, ಸಂಸದರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರದ ಪಾಟ್ನಾದ ಗಾಂಧಿ ಸೇತು ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಅವರ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾರೆ.

ಬಿಜೆಪಿ ಸಂಸದ ಸತೀಶ್​ಚಂದ್ರ ದುಬೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಸತೀಶ್​ ಚಂದ್ರ ದುಬೆ
ನಯನಾ ರಾಜೀವ್
|

Updated on: Sep 18, 2023 | 1:19 PM

Share

ಬಿಜೆಪಿ ಸಂಸದ ಸತೀಶ್​ ಚಂದ್ರ ದುಬೆ(Satish Chandra Dubey) ಅವರಿದ್ದ ಕಾರು ಪಾಟ್ನಾದಲ್ಲಿ ಅಪಘಾತಕ್ಕೀಡಾಗಿದ್ದು, ಸಂಸದರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರದ ಪಾಟ್ನಾದ ಗಾಂಧಿ ಸೇತು ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಅವರ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 48 ವರ್ಷದ ಬಿಜೆಪಿ ಸಂಸದ, ಸತೀಶ್ ಚಂದ್ರ ದುಬೆ ಅವರು 2022 ರಲ್ಲಿ ಸಂಸತ್ತಿನ ಮೇಲ್ಮನೆಗೆ ಚುನಾಯಿತರಾಗಿದ್ದರು. ಇದಕ್ಕೂ ಮೊದಲು ಅವರು ಬಿಹಾರದ ವಾಲ್ಮೀಕಿ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರು 2005 ರಲ್ಲಿ ನಾಟ್ಕಟಿಯಾಗಂಜ್‌ನಿಂದ ಬಿಹಾರ ವಿಧಾನಸಭೆಯ ಸದಸ್ಯರಾಗಿದ್ದರು. ಹಾಜಿಪುರದಿಂದ ಪಾಟ್ನಾಗೆ ಬರುತ್ತಿದ್ದಾಗ, ಸಂಸದರ ಚಾಲಕ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ, ಐಷಾರಾಮಿ ಕಾರಿನ ವೇಗ ಹೆಚ್ಚಾಗಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಸಂಸದ ಸತೀಶ್ ಚಂದ್ರ ದುಬೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರ ಗಾಯ

ಜೊತೆಗಿದ್ದ ಬೆಂಗಾವಲು ತಂಡವು ಕಾರಿನಿಂದ ಎಲ್ಲರನ್ನು ಹೊರತೆಗೆದರು, ಇದರಲ್ಲಿ ಚಾಲಕ ಮತ್ತು ಇಬ್ಬರು ಬಾಡಿ ಗಾರ್ಡ್‌ಗಳ ತಲೆ ಮತ್ತು ಇತರ ಹಲವು ಭಾಗಗಳಲ್ಲಿ ಗಂಭೀರವಾದ ಗಾಯಗಳಾಗಿವೆ. ಮೂವರನ್ನು ಪಿಎಂಸಿಎಚ್ ಗೆ ದಾಖಲಿಸಲಾಗಿದ್ದು, ಸಂಸದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪ್ರಕಾರ ಸಂಸದರ ಸ್ಥಿತಿ ಸುಧಾರಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್