AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಫುಟ್​ಪಾತ್​ನಲ್ಲಿ ಕುಳಿತು ಚಮ್ಮಾರನ ಶೂಗೆ ಪಾಲಿಶ್ ಮಾಡಿದ ಬಿಜೆಪಿ ಸಂಸದ

ಹುಟ್ಟಿನಿಂದ ಯಾವುದೇ ವ್ಯಕ್ತಿ ದೊಡ್ಡವನಲ್ಲ, ಯಾರೂ ಸಣ್ಣವರೂ ಅಲ್ಲ. ಆತ ಮಾಡುವ ಕೆಲಸಗಳು ಆತನ ದೊಡ್ಡತನ ಮತ್ತು ಸಣ್ಣತನವನ್ನು ನಿರ್ಧರಿಸುತ್ತದೆ. ಹೀಗಾಗಿ ನಾನು ಚಮ್ಮಾರನ ಶೂ ಪಾಲಿಶ್ ಮಾಡಿದ್ದೇನೆ ಎಂದು ಬಿಜೆಪಿ ಸಂಸದ ಸುಮೆರ್ ಸಿಂಗ್ ಸೋಲಂಕಿ ಹೇಳಿದ್ದಾರೆ.

Viral Video: ಫುಟ್​ಪಾತ್​ನಲ್ಲಿ ಕುಳಿತು ಚಮ್ಮಾರನ ಶೂಗೆ ಪಾಲಿಶ್ ಮಾಡಿದ ಬಿಜೆಪಿ ಸಂಸದ
ಬಿಜೆಪಿ ಸುಮೆರ್ ಸಿಂಗ್ ಸೋಲಂಕಿ
TV9 Web
| Edited By: |

Updated on: Feb 17, 2022 | 6:22 PM

Share

ಬರ್ವಾನಿ: ರವಿದಾಸ್ ಜಯಂತಿಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಸುಮೆರ್ ಸಿಂಗ್ ಸೋಲಂಕಿ (Sumer Singh Solanki) ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಚಮ್ಮಾರನ ಶೂಗಳಿಗೆ ಪಾಲಿಶ್ ಮಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ವೈರಲ್ (Photos Viral) ಆಗಿವೆ.ಬಿಜೆಪಿ ಸಂಸದ ಸುಮೆರ್ ಸಿಂಗ್ ಸೋಲಂಕಿ ಅವರೇ ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟಿನಿಂದ ಯಾವುದೇ ವ್ಯಕ್ತಿ ದೊಡ್ಡವನಲ್ಲ, ಯಾರೂ ಸಣ್ಣವರೂ ಅಲ್ಲ. ಆತ ಮಾಡುವ ಕೆಲಸಗಳು ಆತನ ದೊಡ್ಡತನ ಮತ್ತು ಸಣ್ಣತನವನ್ನು ನಿರ್ಧರಿಸುತ್ತದೆ. ಇಂದು ಸಂತ ಶಿರೋಮಣಿ ರವಿದಾಸ್ ಜಯಂತಿಯ (Ravidas Jayanti) ಶುಭ ಸಂದರ್ಭದಲ್ಲಿ ಬರ್ವಾನಿ ನಗರದ ಫುಟ್ ಪಾತ್ ಮೇಲೆ ಶೂ ಪಾಲಿಶ್ ಮಾಡಲು ಕುಳಿತಿದ್ದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಂಸದರು 25 ವರ್ಷಗಳ ಹಿಂದೆ ನಾನು ಇಲ್ಲಿ ಓದುವಾಗ ನನ್ನ ಚಪ್ಪಲಿ ಕಿತ್ತು ಹೋಗುತ್ತಲೇ ಇರುತ್ತಿತ್ತು. ಅವುಗಳನ್ನು ರಿಪೇರಿ ಮಾಡಲು ಇಲ್ಲಿಗೆ ಬರುತ್ತಿದ್ದೆ. ಇಂದು ನಾನು ಚಮ್ಮಾರನಿಗೆ ಭಗವದ್ಗೀತೆಯನ್ನು ನೀಡಿ, ಅವರ ಶೂಗಳನ್ನು ಪಾಲಿಶ್ ಮಾಡಿದೆ. ಅವರಿಗೆ ಸಂತ ರವಿದಾಸರ ಫೋಟೋವನ್ನೂ ನೀಡಿದ್ದೇನೆ ಎಂದು ಬಿಜೆಪಿ ಸಂಸದ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಬಿಜೆಪಿ ಸಂಸದ ಚಮ್ಮಾರನ ಶೂ ಪಾಲಿಶ್ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಮತ್ತು ವಿಡಿಯೋವನ್ನು ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ಲೋಕೇಂದ್ರ ಪರಾಶರ ಅವರು ಕೂಡ ಶೇರ್ ಮಾಡಿದ್ದು, ಫುಟ್​ಪಾತ್​ನಲ್ಲಿ ಕುಳಿತು ಚಮ್ಮಾರನ ಶೂ ಪಾಲಿಶ್ ಮಾಡಿದ ಬಿಜೆಪಿ ಸಂಸದ ಸುಮೆರ್ ಸಿಂಗ್ ಅವರ ಈ ಕಾರ್ಯ ಮಾದರಿಯಾದುದು ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ಅಗತ್ಯವಿಲ್ಲ, ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸುವುದಿಲ್ಲ: ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

Viral Video: ಹಳ್ಳಿಯ ದಾರಿಯಲ್ಲಿ ಬೈಕ್​ನಲ್ಲಿ ಹೋಗುವಾಗ ದಿಢೀರೆಂದು ಎದುರು ಬಂದ ಸಿಂಹಿಣಿ; ಶಾಕಿಂಗ್ ವಿಡಿಯೋ ಇಲ್ಲಿದೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್