AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ
ವರುಣ್​ ಗಾಂಧಿ
TV9 Web
| Edited By: |

Updated on:Sep 05, 2021 | 6:20 PM

Share

ಉತ್ತರ ಪ್ರದೇಶದ ಪಿಲಿಭಿತ್​ನ ಬಿಜೆಪಿ ಸಂಸದ ವರುಣ್​ ಗಾಂಧಿ (Varun Gandhi), ಕೃಷಿ ಕಾಯ್ದೆ (Farm Laws)ಗಳ ವಿರುದ್ಧ ಪ್ರತಿಭಟನೆ (Farmers Protest) ನಡೆಸುತ್ತಿರುವ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 8-9 ತಿಂಗಳಿಂದಲೂ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದು, ಕಾಯ್ದೆಗಳನ್ನು ವಾಪಸ್​ ಪಡೆಯಿರಿ ಎಂದು ಆಗ್ರಹಿಸುತ್ತಿದ್ದಾರೆ. ಹಾಗೇ, ಇಂದು ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಬೃಹತ್ ಸಭೆ ನಡೆಸಿ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಚಳವಳಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಇದೇ ಹೊತ್ತಲ್ಲಿ ಪಿಲಿಭಿತ್​ ಸಂಸದ ವರುಣ್​ ಗಾಂಧಿ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ರೈತರ ಪರ ಪೋಸ್ಟ್ ಹಾಕಿದ್ದಾರೆ. ಕಿಸಾನ್​ ಮಹಾಪಂಚಾಯತ್​ನ್ನು ಸಮರ್ಥಿಸಿದ ಅವರು, ರೈತರೊಂದಿಗೆ ಗೌರವಯುತವಾಗಿ ಮತ್ತೊಮ್ಮೆ ಮಾತುಕತೆ ನಡೆಸಬೇಕು ಎಂದು ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದಾರೆ. ರೈತರ ಇಂದಿನ ಸಭೆಯ ವಿಡಿಯೋ ಶೇರ್​ ಮಾಡಿಕೊಂಡ ವರುಣ್​ ಗಾಂಧಿ, ಇಂದು ಮುಜಾಫರ್​ನಗರದಲ್ಲಿ ಲಕ್ಷಾಂತರ ರೈತರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೂ ನಮ್ಮಂತೆಯೇ ಮಾಂಸ-ರಕ್ತ ಹೊಂದಿರುವ ಮನುಷ್ಯರು. ಅವರೊಂದಿಗೆ ನಾವು ಗೌರವಯುತವಾಗಿ ಮತ್ತೆ ಮಾತುಕತೆ ಪ್ರಾರಂಭಿಸಬೇಕಾದ ಅಗತ್ಯತೆ ಇದೆ. ರೈತರ ನೋವು, ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅವರ ತಳಮಟ್ಟದ ಸಮಸ್ಯೆಯನ್ನು ಅರಿಯಬೇಕು ಎಂದು ಹೇಳಿದ್ದಾರೆ.

ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿರುವ ರೈತ ಸಂಘಟನೆಗಳು ಇಂದು ಮುಜಾಫರ್​ನಗರದಲ್ಲಿ ಮಹಾಪಂಚಾಯತ್​ ನಡೆಸಿ ಕೇಂದ್ರದ ಗಮನ ಸೆಳೆದಿವೆ. ಆಗಸ್ಟ್​ 28ರಂದು ರೈತರು ಹರ್ಯಾಣದಲ್ಲಿ ಪ್ರತಿಭಟನೆ ನಡೆಸಿದಾಗ ಲಾಠಿ ಚಾರ್ಜ್ ಆಗಿತ್ತು. ಇಂದು ಮತ್ತೆ ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ‘ನಾನು ತಾಲಿಬಾನಿಗಳಿಗೆ ಶರಣಾಗುವುದಿಲ್ಲ..ಅಂಥ ಪರಿಸ್ಥಿತಿ ಬಂದರೆ ನನ್ನ ತಲೆಗೆ ಎರಡು ಬಾರಿ ಗುಂಡು ಹೊಡಿ‘

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

Published On - 6:20 pm, Sun, 5 September 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ