AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ
ವರುಣ್​ ಗಾಂಧಿ
TV9 Web
| Edited By: |

Updated on:Sep 05, 2021 | 6:20 PM

Share

ಉತ್ತರ ಪ್ರದೇಶದ ಪಿಲಿಭಿತ್​ನ ಬಿಜೆಪಿ ಸಂಸದ ವರುಣ್​ ಗಾಂಧಿ (Varun Gandhi), ಕೃಷಿ ಕಾಯ್ದೆ (Farm Laws)ಗಳ ವಿರುದ್ಧ ಪ್ರತಿಭಟನೆ (Farmers Protest) ನಡೆಸುತ್ತಿರುವ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 8-9 ತಿಂಗಳಿಂದಲೂ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದು, ಕಾಯ್ದೆಗಳನ್ನು ವಾಪಸ್​ ಪಡೆಯಿರಿ ಎಂದು ಆಗ್ರಹಿಸುತ್ತಿದ್ದಾರೆ. ಹಾಗೇ, ಇಂದು ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಬೃಹತ್ ಸಭೆ ನಡೆಸಿ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಚಳವಳಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಇದೇ ಹೊತ್ತಲ್ಲಿ ಪಿಲಿಭಿತ್​ ಸಂಸದ ವರುಣ್​ ಗಾಂಧಿ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ರೈತರ ಪರ ಪೋಸ್ಟ್ ಹಾಕಿದ್ದಾರೆ. ಕಿಸಾನ್​ ಮಹಾಪಂಚಾಯತ್​ನ್ನು ಸಮರ್ಥಿಸಿದ ಅವರು, ರೈತರೊಂದಿಗೆ ಗೌರವಯುತವಾಗಿ ಮತ್ತೊಮ್ಮೆ ಮಾತುಕತೆ ನಡೆಸಬೇಕು ಎಂದು ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದಾರೆ. ರೈತರ ಇಂದಿನ ಸಭೆಯ ವಿಡಿಯೋ ಶೇರ್​ ಮಾಡಿಕೊಂಡ ವರುಣ್​ ಗಾಂಧಿ, ಇಂದು ಮುಜಾಫರ್​ನಗರದಲ್ಲಿ ಲಕ್ಷಾಂತರ ರೈತರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೂ ನಮ್ಮಂತೆಯೇ ಮಾಂಸ-ರಕ್ತ ಹೊಂದಿರುವ ಮನುಷ್ಯರು. ಅವರೊಂದಿಗೆ ನಾವು ಗೌರವಯುತವಾಗಿ ಮತ್ತೆ ಮಾತುಕತೆ ಪ್ರಾರಂಭಿಸಬೇಕಾದ ಅಗತ್ಯತೆ ಇದೆ. ರೈತರ ನೋವು, ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅವರ ತಳಮಟ್ಟದ ಸಮಸ್ಯೆಯನ್ನು ಅರಿಯಬೇಕು ಎಂದು ಹೇಳಿದ್ದಾರೆ.

ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿರುವ ರೈತ ಸಂಘಟನೆಗಳು ಇಂದು ಮುಜಾಫರ್​ನಗರದಲ್ಲಿ ಮಹಾಪಂಚಾಯತ್​ ನಡೆಸಿ ಕೇಂದ್ರದ ಗಮನ ಸೆಳೆದಿವೆ. ಆಗಸ್ಟ್​ 28ರಂದು ರೈತರು ಹರ್ಯಾಣದಲ್ಲಿ ಪ್ರತಿಭಟನೆ ನಡೆಸಿದಾಗ ಲಾಠಿ ಚಾರ್ಜ್ ಆಗಿತ್ತು. ಇಂದು ಮತ್ತೆ ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ‘ನಾನು ತಾಲಿಬಾನಿಗಳಿಗೆ ಶರಣಾಗುವುದಿಲ್ಲ..ಅಂಥ ಪರಿಸ್ಥಿತಿ ಬಂದರೆ ನನ್ನ ತಲೆಗೆ ಎರಡು ಬಾರಿ ಗುಂಡು ಹೊಡಿ‘

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

Published On - 6:20 pm, Sun, 5 September 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ