AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ
ವರುಣ್​ ಗಾಂಧಿ
TV9 Web
| Edited By: |

Updated on:Sep 05, 2021 | 6:20 PM

Share

ಉತ್ತರ ಪ್ರದೇಶದ ಪಿಲಿಭಿತ್​ನ ಬಿಜೆಪಿ ಸಂಸದ ವರುಣ್​ ಗಾಂಧಿ (Varun Gandhi), ಕೃಷಿ ಕಾಯ್ದೆ (Farm Laws)ಗಳ ವಿರುದ್ಧ ಪ್ರತಿಭಟನೆ (Farmers Protest) ನಡೆಸುತ್ತಿರುವ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 8-9 ತಿಂಗಳಿಂದಲೂ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದು, ಕಾಯ್ದೆಗಳನ್ನು ವಾಪಸ್​ ಪಡೆಯಿರಿ ಎಂದು ಆಗ್ರಹಿಸುತ್ತಿದ್ದಾರೆ. ಹಾಗೇ, ಇಂದು ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಬೃಹತ್ ಸಭೆ ನಡೆಸಿ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಚಳವಳಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಇದೇ ಹೊತ್ತಲ್ಲಿ ಪಿಲಿಭಿತ್​ ಸಂಸದ ವರುಣ್​ ಗಾಂಧಿ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ರೈತರ ಪರ ಪೋಸ್ಟ್ ಹಾಕಿದ್ದಾರೆ. ಕಿಸಾನ್​ ಮಹಾಪಂಚಾಯತ್​ನ್ನು ಸಮರ್ಥಿಸಿದ ಅವರು, ರೈತರೊಂದಿಗೆ ಗೌರವಯುತವಾಗಿ ಮತ್ತೊಮ್ಮೆ ಮಾತುಕತೆ ನಡೆಸಬೇಕು ಎಂದು ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದಾರೆ. ರೈತರ ಇಂದಿನ ಸಭೆಯ ವಿಡಿಯೋ ಶೇರ್​ ಮಾಡಿಕೊಂಡ ವರುಣ್​ ಗಾಂಧಿ, ಇಂದು ಮುಜಾಫರ್​ನಗರದಲ್ಲಿ ಲಕ್ಷಾಂತರ ರೈತರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೂ ನಮ್ಮಂತೆಯೇ ಮಾಂಸ-ರಕ್ತ ಹೊಂದಿರುವ ಮನುಷ್ಯರು. ಅವರೊಂದಿಗೆ ನಾವು ಗೌರವಯುತವಾಗಿ ಮತ್ತೆ ಮಾತುಕತೆ ಪ್ರಾರಂಭಿಸಬೇಕಾದ ಅಗತ್ಯತೆ ಇದೆ. ರೈತರ ನೋವು, ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅವರ ತಳಮಟ್ಟದ ಸಮಸ್ಯೆಯನ್ನು ಅರಿಯಬೇಕು ಎಂದು ಹೇಳಿದ್ದಾರೆ.

ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿರುವ ರೈತ ಸಂಘಟನೆಗಳು ಇಂದು ಮುಜಾಫರ್​ನಗರದಲ್ಲಿ ಮಹಾಪಂಚಾಯತ್​ ನಡೆಸಿ ಕೇಂದ್ರದ ಗಮನ ಸೆಳೆದಿವೆ. ಆಗಸ್ಟ್​ 28ರಂದು ರೈತರು ಹರ್ಯಾಣದಲ್ಲಿ ಪ್ರತಿಭಟನೆ ನಡೆಸಿದಾಗ ಲಾಠಿ ಚಾರ್ಜ್ ಆಗಿತ್ತು. ಇಂದು ಮತ್ತೆ ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ‘ನಾನು ತಾಲಿಬಾನಿಗಳಿಗೆ ಶರಣಾಗುವುದಿಲ್ಲ..ಅಂಥ ಪರಿಸ್ಥಿತಿ ಬಂದರೆ ನನ್ನ ತಲೆಗೆ ಎರಡು ಬಾರಿ ಗುಂಡು ಹೊಡಿ‘

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

Published On - 6:20 pm, Sun, 5 September 21

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ