ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ
ವರುಣ್​ ಗಾಂಧಿ
Follow us
| Updated By: Lakshmi Hegde

Updated on:Sep 05, 2021 | 6:20 PM

ಉತ್ತರ ಪ್ರದೇಶದ ಪಿಲಿಭಿತ್​ನ ಬಿಜೆಪಿ ಸಂಸದ ವರುಣ್​ ಗಾಂಧಿ (Varun Gandhi), ಕೃಷಿ ಕಾಯ್ದೆ (Farm Laws)ಗಳ ವಿರುದ್ಧ ಪ್ರತಿಭಟನೆ (Farmers Protest) ನಡೆಸುತ್ತಿರುವ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 8-9 ತಿಂಗಳಿಂದಲೂ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದು, ಕಾಯ್ದೆಗಳನ್ನು ವಾಪಸ್​ ಪಡೆಯಿರಿ ಎಂದು ಆಗ್ರಹಿಸುತ್ತಿದ್ದಾರೆ. ಹಾಗೇ, ಇಂದು ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಬೃಹತ್ ಸಭೆ ನಡೆಸಿ, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಚಳವಳಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಇದೇ ಹೊತ್ತಲ್ಲಿ ಪಿಲಿಭಿತ್​ ಸಂಸದ ವರುಣ್​ ಗಾಂಧಿ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ರೈತರ ಪರ ಪೋಸ್ಟ್ ಹಾಕಿದ್ದಾರೆ. ಕಿಸಾನ್​ ಮಹಾಪಂಚಾಯತ್​ನ್ನು ಸಮರ್ಥಿಸಿದ ಅವರು, ರೈತರೊಂದಿಗೆ ಗೌರವಯುತವಾಗಿ ಮತ್ತೊಮ್ಮೆ ಮಾತುಕತೆ ನಡೆಸಬೇಕು ಎಂದು ತಮ್ಮದೇ ಪಕ್ಷದ ಕೇಂದ್ರ ಸರ್ಕಾರಕ್ಕೆ ಸಲಹೆಯನ್ನೂ ನೀಡಿದ್ದಾರೆ. ರೈತರ ಇಂದಿನ ಸಭೆಯ ವಿಡಿಯೋ ಶೇರ್​ ಮಾಡಿಕೊಂಡ ವರುಣ್​ ಗಾಂಧಿ, ಇಂದು ಮುಜಾಫರ್​ನಗರದಲ್ಲಿ ಲಕ್ಷಾಂತರ ರೈತರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೂ ನಮ್ಮಂತೆಯೇ ಮಾಂಸ-ರಕ್ತ ಹೊಂದಿರುವ ಮನುಷ್ಯರು. ಅವರೊಂದಿಗೆ ನಾವು ಗೌರವಯುತವಾಗಿ ಮತ್ತೆ ಮಾತುಕತೆ ಪ್ರಾರಂಭಿಸಬೇಕಾದ ಅಗತ್ಯತೆ ಇದೆ. ರೈತರ ನೋವು, ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅವರ ತಳಮಟ್ಟದ ಸಮಸ್ಯೆಯನ್ನು ಅರಿಯಬೇಕು ಎಂದು ಹೇಳಿದ್ದಾರೆ.

ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಹಲವು ಸಮಾವೇಶಗಳನ್ನು ನಡೆಸಿರುವ ರೈತ ಸಂಘಟನೆಗಳು ಇಂದು ಮುಜಾಫರ್​ನಗರದಲ್ಲಿ ಮಹಾಪಂಚಾಯತ್​ ನಡೆಸಿ ಕೇಂದ್ರದ ಗಮನ ಸೆಳೆದಿವೆ. ಆಗಸ್ಟ್​ 28ರಂದು ರೈತರು ಹರ್ಯಾಣದಲ್ಲಿ ಪ್ರತಿಭಟನೆ ನಡೆಸಿದಾಗ ಲಾಠಿ ಚಾರ್ಜ್ ಆಗಿತ್ತು. ಇಂದು ಮತ್ತೆ ಮುಜಾಫರ್​ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ‘ನಾನು ತಾಲಿಬಾನಿಗಳಿಗೆ ಶರಣಾಗುವುದಿಲ್ಲ..ಅಂಥ ಪರಿಸ್ಥಿತಿ ಬಂದರೆ ನನ್ನ ತಲೆಗೆ ಎರಡು ಬಾರಿ ಗುಂಡು ಹೊಡಿ‘

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

Published On - 6:20 pm, Sun, 5 September 21

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ