AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆ ಪರವಾನಗಿ ರದ್ದು ಮಾಡಿದ ನಿರ್ಧಾರ ಮರುಪರಿಶೀಲಿಸುವಂತೆ ವರುಣ್ ಗಾಂಧಿ ಒತ್ತಾಯ

ಅಮೇಥಿಯಲ್ಲಿ ಆಸ್ಪತ್ರೆಯ ಪರವಾನಗಿಯನ್ನು ತ್ವರಿತವಾಗಿ ಅಮಾನತುಗೊಳಿಸಿರುವುದು ಪ್ರಾಥಮಿಕ ಆರೋಗ್ಯ ಸೇವೆಗಳಿಗೆ ಮಾತ್ರವಲ್ಲದೆ ತಮ್ಮ ಜೀವನೋಪಾಯಕ್ಕಾಗಿ ಸಂಸ್ಥೆಯನ್ನು ಅವಲಂಬಿಸಿರುವ ಎಲ್ಲ ವ್ಯಕ್ತಿಗಳಿಗೆ ಮಾಡಿದ ಅನ್ಯಾಯ ಎಂದು ಬಿಜೆಪಿ ಪಿಲಿಭಿತ್ ಸಂಸದರು ಹೇಳಿದ್ದಾರೆ. ಜವಾಬ್ದಾರಿಯು ನಿರ್ಣಾಯಕವಾಗಿದ್ದರೂ, ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ತತ್ವಗಳನ್ನು ಎತ್ತಿಹಿಡಿಯುವುದು ಅತ್ಯಗತ್ಯ ಎಂದ ವರುಣ್ ಗಾಂಧಿ

ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆ ಪರವಾನಗಿ ರದ್ದು ಮಾಡಿದ ನಿರ್ಧಾರ ಮರುಪರಿಶೀಲಿಸುವಂತೆ ವರುಣ್ ಗಾಂಧಿ ಒತ್ತಾಯ
ವರುಣ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Sep 22, 2023 | 1:06 PM

ಲಕ್ನೋ  ಸೆಪ್ಟೆಂಬರ್ 22: ಅಮೇಥಿಯಲ್ಲಿ (Amethi) ಸಂಜಯ್ ಗಾಂಧಿ  ಆಸ್ಪತ್ರೆಯ (Sanjay Gandhi Hospital) ಪರವಾನಗಿ ರದ್ದುಗೊಳಿಸಿರುವುದರ ಬಗ್ಗೆ ಬಿಜೆಪಿ ನಾಯಕ ವರುಣ್ ಗಾಂಧಿ (Varun Gandhi) ಕಳವಳ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ತನಿಖೆ ಮಾಡದೆ ಈ ಕ್ರಮ ಕೈಗೊಳ್ಳಲಾಗಿದೆ, ನಿರ್ಧಾರವನ್ನು ಮರುಪರಿಶೀಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದಾರೆ. ಮಹಿಳೆಯೊಬ್ಬರ ಸಾವಿನ ತನಿಖೆಯ ನಂತರ ರಾಜ್ಯ ಆರೋಗ್ಯ ಇಲಾಖೆ ಸೋಮವಾರ ಅಮೇಥಿ ಆಸ್ಪತ್ರೆಯ ಪರವಾನಗಿಯನ್ನು ರದ್ದು ಮಾಡಿದ್ದು, ಅದರ ಒಪಿಡಿ ಮತ್ತು ತುರ್ತು ಸೇವೆಗಳನ್ನು ಸ್ಥಗಿತಗೊಳಿಸಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅಮೇಥಿ ಆಸ್ಪತ್ರೆಯನ್ನು ನಡೆಸುತ್ತಿರುವ ಸಂಜಯ್ ಗಾಂಧಿ ಸ್ಮಾರಕ ಟ್ರಸ್ಟ್ ನವದೆಹಲಿಯ ಅಧ್ಯಕ್ಷರಾಗಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಟ್ರಸ್ಟ್‌ನ ಸದಸ್ಯರಾಗಿದ್ದಾರೆ.

ಗುರುವಾರ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಮಹಿಳೆಯ ಸಾವಿನ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಏತನ್ಮಧ್ಯೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ವರುಣ್ ಗಾಂಧಿ ಪಾಠಕ್ ಅವರಿಗೆ ಬರೆದ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ವೈದ್ಯಕೀಯ ಸೇವೆಗಳಿಗೆ ನಮ್ಮ ನಾಗರಿಕರ ಪ್ರವೇಶವು ಅಡೆತಡೆಯಿಲ್ಲದೆ ಸಾಗಬೇಕು ಎಂಬುದು ನನ್ನ ಆಶಯವಾಗಿದೆ, ಆದರೆ ಸರ್ಕಾರವು ತಕ್ಷಣದ ಕಾಳಜಿಯನ್ನು ತಿಳಿಸುವ ಪಾರದರ್ಶಕ ವಿಚಾರಣೆಯನ್ನು ಖಚಿತಪಡಿಸುತ್ತದೆ. ದುರದೃಷ್ಟಕರ ಘಟನೆಗೆ ಕಾರಣವಾಗಿರುವ ಯಾವುದೇ ವ್ಯವಸ್ಥಿತ ಸಮಸ್ಯೆಗಳನ್ನು ಗುರುತಿಸಿ ಸರಿಪಡಿಸುತ್ತದೆ ಎಂದು ಹೇಳಿದ್ದಾರೆ.

ಅಮೇಥಿಯಲ್ಲಿ ಆಸ್ಪತ್ರೆಯ ಪರವಾನಗಿಯನ್ನು ತ್ವರಿತವಾಗಿ ಅಮಾನತುಗೊಳಿಸಿರುವುದು ಪ್ರಾಥಮಿಕ ಆರೋಗ್ಯ ಸೇವೆಗಳಿಗೆ ಮಾತ್ರವಲ್ಲದೆ ತಮ್ಮ ಜೀವನೋಪಾಯಕ್ಕಾಗಿ ಸಂಸ್ಥೆಯನ್ನು ಅವಲಂಬಿಸಿರುವ ಎಲ್ಲ ವ್ಯಕ್ತಿಗಳಿಗೆ ಮಾಡಿದ ಅನ್ಯಾಯ ಎಂದು ಬಿಜೆಪಿ ಪಿಲಿಭಿತ್ ಸಂಸದರು ಹೇಳಿದ್ದಾರೆ. ಜವಾಬ್ದಾರಿಯು ನಿರ್ಣಾಯಕವಾಗಿದ್ದರೂ, ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ತತ್ವಗಳನ್ನು ಎತ್ತಿಹಿಡಿಯುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ, ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಅಥವಾ ನಿರ್ಲಕ್ಷ್ಯ ತೋರುವ ಎಲ್ಲಾ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಠಕ್ ಹೇಳಿದ್ದರು.

ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಆಸ್ಪತ್ರೆಯ ಪರವಾನಿಗೆಯನ್ನು ರದ್ದುಗೊಳಿಸುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬುಧವಾರ ಮನವಿ ಮಾಡಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ಆದಿತ್ಯನಾಥ್‌ಗೆ ಬರೆದ ಪತ್ರದಲ್ಲಿ ರಾಯ್ ಅವರು ಆಸ್ಪತ್ರೆಯು ಹತ್ತಿರದ ಪ್ರದೇಶಗಳ ಜನರಿಗೆ ಕನಿಷ್ಠ ಶುಲ್ಕದಲ್ಲಿ ಮತ್ತು ಕಳೆದ ಕೆಲವು ದಶಕಗಳಿಂದ ಯಾವುದೇ ಲಾಭವಿಲ್ಲದೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿದೆ.

ಆರೋಗ್ಯ ಖಾತೆಯನ್ನು ಹೊಂದಿರುವ ಪಾಠಕ್, “ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ನಡೆದ ಘಟನೆ ತುಂಬಾ ದುಃಖಕರವಾಗಿದೆ. ಅಲ್ಲಿ ಯುವತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತನಿಖೆಯ ನಂತರ ಆಸ್ಪತ್ರೆಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ  ಎಂದು ಹೇಳಿದರು.

ಉಪಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಹೆಚ್ಚುವರಿ ಸಿಎಂಒ ಡಾ.ರಾಮ್ ಪ್ರಸಾದ್ ನೇತೃತ್ವದ ಮೂವರು ಸದಸ್ಯರ ತಂಡವು ಈ ಕುರಿತು ತನಿಖೆ ನಡೆಸಿತು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇಲಾಖೆ ತನ್ನ ವರದಿಯಲ್ಲಿ ದಿವ್ಯಾ (22) ಅವರಿಗೆ ನೀಡಿದ ಚಿಕಿತ್ಸೆಯಲ್ಲಿ ಲೋಪವನ್ನು ಕಂಡುಹಿಡಿದಿದೆ. ತಜ್ಞ ವೈದ್ಯರು ಆಸ್ಪತ್ರೆಗೆ ತಲುಪಿದ್ದರೆ ಮಹಿಳೆಯನ್ನು ಉಳಿಸಬಹುದಿತ್ತು ಎಂದು ಹೇಳಿದೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಟ್ರಸ್ಟಿಯಾಗಿರುವ ಸಂಜಯ್ ಗಾಂಧಿ ಆಸ್ಪತ್ರೆಯನ್ನು ದಿಢೀರನೆ ಮುಚ್ಚಿದ್ದೇಕೆ?

ಸೆಪ್ಟೆಂಬರ್ 14 ರಂದು ಹೊಟ್ಟೆನೋವಿನಿಂದ ಬಳಲುತ್ತಿದ್ದ ದಿವ್ಯಾ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವಳನ್ನು ಪರೀಕ್ಷಿಸಿದ ನಂತರ, ವೈದ್ಯರು ಅವಳ ಪಿತ್ತಕೋಶದಲ್ಲಿ ಕಲ್ಲುಗಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಸೂಚಿಸಿದರು. ಅದೇ ದಿನ, ಆಪರೇಷನ್‌ಗೆ ಮೊದಲು ಆಕೆ ಕೋಮಾಗೆ ಜಾರಿದ್ದಳು, ಲಕ್ನೋಗೆ ಆಕೆಯನ್ನು ಕರೆದೊಯ್ಯುವ ಮೊದಲು ಆಸ್ಪತ್ರೆಯಲ್ಲಿ 30 ಗಂಟೆಗಳ ಕಾಲ ಇರಿಸಲಾಗಿತ್ತು ಎಂದು ಆಕೆಯ ಕುಟುಂಬ ಆರೋಪಿಸಿದೆ.

ದಿವ್ಯಾ ಸೆಪ್ಟೆಂಬರ್ 16 ರಂದು ಲಕ್ನೋದಲ್ಲಿ ನಿಧನರಾದರು ಎಂದು ಹೇಳಿದ ಆಕೆಯ ಪತಿ ಅನುಜ್ ಶುಕ್ಲಾ ಅವರು, ಅಮೇಥಿ ಆಸ್ಪತ್ರೆಯಲ್ಲಿ ದಿವ್ಯಾ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್