AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ವರುಣ್​ ಗಾಂಧಿಗೆ ಕೊವಿಡ್ 19 ಸೋಂಕು; ಗಂಭೀರ ಸ್ವರೂಪದ ಲಕ್ಷಣಗಳಿವೆ ಎಂದು ಟ್ವೀಟ್​

ದೇಶದ 5 ರಾಜ್ಯಗಳಾದ ಗೋವಾ, ಉತ್ತರಪ್ರದೇಶ, ಉತ್ತರಾಖಂಡ್​, ಮಣಿಪುರ, ಪಂಜಾಬ್​ಗಳಲ್ಲಿ ಮುಂದಿನ ತಿಂಗಳಿಂದ ವಿಧಾನಸಭೆ ಚುನಾವಣೆ ನಡೆಯಲಿದೆ. ಫೆ.10ರಿಂದ ವಿವಿಧ ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಫಲಿತಾಂಶ ಹೊರಬೀಳಲಿದೆ.

ಬಿಜೆಪಿ ಸಂಸದ ವರುಣ್​ ಗಾಂಧಿಗೆ ಕೊವಿಡ್ 19 ಸೋಂಕು; ಗಂಭೀರ ಸ್ವರೂಪದ ಲಕ್ಷಣಗಳಿವೆ ಎಂದು ಟ್ವೀಟ್​
ವರುಣ್​ ಗಾಂಧಿ
TV9 Web
| Edited By: |

Updated on:Jan 09, 2022 | 2:05 PM

Share

ಉತ್ತರಪ್ರದೇಶದ ಪಿಲಿಭಿತ್​ ಬಿಜೆಪಿ ಸಂಸದ ವರುಣ್​ ಗಾಂಧಿ (BJP MP Varun Gandhi) ಕೊವಿಡ್​ 19 ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ, ಸೋಂಕಿನ ಗಂಭೀರ ಸ್ವರೂಪ ಕಾಣಿಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ವರುಣ್​ ಗಾಂಧಿ,  ನನ್ನ ಕ್ಷೇತ್ರವಾದ ಪಿಲಿಭಿತ್​ನಲ್ಲಿ ಮೂರು ದಿನಗಳ ಕಾಲ ಇದ್ದು, ಚುನಾವಣಾ ಕಾರ್ಯ ನಡೆಸಿದೆ. ಇದೀಗ ನನಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಲಕ್ಷಣಗಳು ತುಸು ಗಂಭೀರಸ್ವರೂಪದಲ್ಲಿಯೇ ಇವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಸಕ್ರಿಯವಾಗಿ ಪಾಲ್ಗೊಳ್ಳುವ ರಾಜಕೀಯ ನಾಯಕರ ಆರೋಗ್ಯ ಸುರಕ್ಷತೆಗಾಗಿ ಕೂಡ ಕೆಲವು ಕ್ರಮಗಳನ್ನು ಚುನಾವಣಾ ಆಯೋಗ ಘೋಷಿಸಬೇಕು ಎಂದು ವರುಣ್ ಗಾಂಧಿ ಒತ್ತಾಯಿಸಿದ್ದಾರೆ. 

ದೇಶದ 5 ರಾಜ್ಯಗಳಾದ ಗೋವಾ, ಉತ್ತರಪ್ರದೇಶ, ಉತ್ತರಾಖಂಡ್​, ಮಣಿಪುರ, ಪಂಜಾಬ್​ಗಳಲ್ಲಿ ಮುಂದಿನ ತಿಂಗಳಿಂದ ವಿಧಾನಸಭೆ ಚುನಾವಣೆ ನಡೆಯಲಿದೆ. ಫೆ.10ರಿಂದ ವಿವಿಧ ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಠಿ ನಡೆಸಿದರುವ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ಹಲವು ನಿಯಮಗಳನ್ನು ಘೋಷಿಸಿದ್ದಾರೆ. ಕೊವಿಡ್​ 19 ಇರುವುದರಿಂದ ಮತದಾನದ ಸಮಯವನ್ನು ಒಂದು ತಾಸುಗಳು ಕಾಲ ವಿಸ್ತರಿಸಲಾಗಿದೆ. ರೋಡ್​ ಶೋ, ಸಾರ್ವಜನಿಕ ಸಭೆ, ಪ್ರಚಾರ ಸಭೆ ಸೇರಿ ಜನರನ್ನು ಗುಂಪುಗೂಡಿಸುವಂಥ ಯಾವುದೇ ಸಭೆಗಳಿಗೆ ಜ.15ರವರೆಗೆ ನಿರ್ಬಂಧ ಇರಲಿದೆ. ರಾಜಕೀಯ ನಾಯಕರು ವರ್ಚ್ಯುವಲ್​ ರ್ಯಾಲಿ ನಡೆಸಬಹುದು ಎಂದು ಹೇಳಿದೆ.  ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಸಿಬ್ಬಂದಿ ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿರಬೇಕು ಎಂದೂ ಚುನಾವಣಾ ಆಯೋಗ ಘೋಷಿಸಿದೆ.

ನಿನ್ನೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ, ಚುನಾವಣೆ ದಿನಾಂಕ ಘೋಷಣೆ ಮಾಡುವುದಕ್ಕೂ ಮೊದಲು ಆರೋಗ್ಯ ಇಲಾಖೆ ಮುಖ್ಯಕಾರ್ಯದರ್ಶಿ, ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿತ್ತು. ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ 19 ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆದಿತ್ತು. ಅಲ್ಲಿ ಲಸಿಕೆ ವೇಗ ಹೆಚ್ಚಿಸಿ ಎಂಬ ಸಲಹೆಯನ್ನೂ ನೀಡಿದೆ. ಇನ್ನು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್​ ಡೋಸ್​ ನೀಡುವಿಕೆಯನ್ನೂ ಸಾಧ್ಯವಾದಷ್ಟು ವೇಗವಾಗಿ ಪೂರ್ಣಗೊಳಿಸಿ ಎಂದು ಹೇಳಿತ್ತು.

ಇದನ್ನೂ ಓದಿ: Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

Published On - 2:05 pm, Sun, 9 January 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ