ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ

Varun Gandhi: ಕೃಷಿಕಾಯ್ದೆಗಳ ವಿರುದ್ಧದ ರೈತರ ಹೋರಾಟದ ಬಗ್ಗೆ ಅನೇಕ ಹಿರಿಯ ನಾಯಕರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರ ಪರಿಣಾಮವೇ ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ನಡೆಯಿತು ಎಂದೂ ವರುಣ್​ ಗಾಂಧಿ ಆರೋಪ ಮಾಡಿದ್ದಾರೆ.

ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಂಸದ
ಪ್ರಧಾನಿ ಮೋದಿಗೆ ಪತ್ರ ಬರೆದ ವರುಣ್ ಗಾಂಧಿ
Follow us
| Updated By: Lakshmi Hegde

Updated on:Nov 20, 2021 | 1:55 PM

ದೆಹಲಿ: ಬಿಜೆಪಿ ಸಂಸದ ವರುಣ್​ ಗಾಂಧಿ (BJP MP Varun Gandhi) ಈಗೀಗ ಪಕ್ಷದ ವಿರುದ್ಧ ತುಸು ತಿರುಗಿಬಿದ್ದಿದ್ದಾರೆ. ಅದರಲ್ಲೂ ರೈತರ ಹೋರಾಟಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಕೇಂದ್ರ ಸರ್ಕಾರದ ತತ್ವ-ಸಿದ್ಧಾಂತಗಳನ್ನು ವಿರೋಧಿಸುತ್ತ ಬಂದಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರ ನಡೆದಾಗಲೂ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೇ ವರುಣ್​ ಗಾಂಧಿ ತಮ್ಮ ಸೋಷಿಯಲ್​ ಮೀಡಿಯಾ ಮೂಲಕ ಪ್ರಧಾನಿ ಮೋದಿಯವರಿಗೆ ಒಂದು ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ಕೆಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ. 

ಮೊದಲನೆಯದಾಗಿ ಪ್ರಧಾನಿ ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಅವರು, ನೀವು ಈ ಮೂರು ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆದಿದ್ದಕ್ಕೆ ತುಂಬ ಧನ್ಯವಾದಗಳು. ಆದರೆ ಈ ಕೆಲಸವನ್ನು ಮೊದಲೇ ಮಾಡಿದ್ದರೆ, ಚಳವಳಿಯಲ್ಲಿ ಪ್ರಾಣತೆತ್ತ 700ಕ್ಕೂ ಹೆಚ್ಚು ಅನ್ನದಾತರು ಈಗಲೂ ಜೀವಂತವಾಗಿಯೇ ಇರುತ್ತಿದ್ದರು. ದಯವಿಟ್ಟು ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಿ ಎಂದು ವರುಣ್​ ಗಾಂಧಿ ಬೇಡಿಕೆ ಇಟ್ಟಿದ್ದಾರೆ.  ಹಾಗೇ, ಪ್ರತಿಭಟನಾ ನಿರತ ರೈತರ ವಿರುದ್ಧ, ಹಲವು ರಾಜಕೀಯ ಪ್ರೇರಿತ ಎಫ್​ಐಆರ್​ಗಳು ದಾಖಲಾಗಿವೆ. ಈ ಮೂಲಕ ಅವರ ಮೇಲೆ ದೌರ್ಜನ್ಯ ಎಸಗಲಾಗಿದೆ. ಅಂಥ ಅಷ್ಟೂ ಎಫ್​ಐಆರ್​ಗಳನ್ನು ಕೂಡಲೇ ರದ್ದುಗೊಳಿಸಿ ಎಂದೂ ಕೇಳಿಕೊಂಡಿದ್ದಾರೆ.

ವರುಣ್​ ಗಾಂಧಿಯವರ ಎರಡನೇ ಬೇಡಿಕೆಯೆಂದರೆ, ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು ಎಂಬುದು. ನಮ್ಮ ದೇಶದಲ್ಲಿ ಶೇ.85ಕ್ಕಿಂತ ಜಾಸ್ತಿ ಸಣ್ಣ ಮತ್ತು ಅತಿಸಣ್ಣ ರೈತರಿದ್ದಾರೆ. ಅಂಥ ರೈತರ ಸಬಲೀಕರಣ ಮಾಡಲು ಅವರ ಬೆಳೆಗೆ ಲಾಭದಾಯಕ ಬೆಲೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.  ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಿದ ವಿನರ್ ರೈತರು ಹೋರಾಟ ಹಿಂಪಡೆಯುವುದಿಲ್ಲ. ಹಾಗಾಗಿ ರೈತರು ಮತ್ತು ರಾಷ್ಟ್ರದ ಹಿತಾಸಕ್ತಿ ದೃಷ್ಟಿಯಿಂದ ಕೂಡಲೇ ಈ ಬೇಡಿಕೆ ಈಡೇರಿಸಬೇಕು ಎಂದೂ ಹೇಳಿದ್ದಾರೆ.

ಇದೇ ವೇಳೆ ಲಖಿಂಪುರ ಖೇರಿ ಹಿಂಸಾಚಾರವನ್ನೂ ಪ್ರಸ್ತಾಪ ಮಾಡಿದ ವರುಣ್​ ಗಾಂಧಿ, ಕೃಷಿಕಾಯ್ದೆಗಳ ವಿರುದ್ಧದ ರೈತರ ಹೋರಾಟದ ಬಗ್ಗೆ ಅನೇಕ ಹಿರಿಯ ನಾಯಕರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರ ಪರಿಣಾಮವೇ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ. ಅದರಲ್ಲಿ ಒಟ್ಟು ಐದು ಮಂದಿ ರೈತರು ಮೃತಪಟ್ಟಿದ್ದು ಖೇದನೀಯ. ಈ ಪ್ರಕರಣದಲ್ಲಿ ಕೇಂದ್ರ ಸಚಿವರು ಮತ್ತುವರ ಪುತ್ರನ ಹೆಸರು ಕೇಳಿಬರುತ್ತಿದ್ದು, ಆ ಕೇಂದ್ರ ಸಚಿವರ ವಿರುದ್ಧ ನೀವು ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದ್ದಾರೆ.  ವರುಣ್​ ಗಾಂಧಿ ಇತ್ತೀಚೆಗೆ ಪದೇಪದೆ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಅದರ ಬೆನ್ನಲ್ಲೇ ಅವರನ್ನು ಈ ಬಾರಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದಲೂ ಕೈಬಿಡಲಾಗಿದೆ.

ಇದನ್ನೂ ಓದಿ: Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್

ಲಕ್ನೋ: ಉನ್ನತ ಮಟ್ಟದ ಭದ್ರತಾ ಸಮಾವೇಶದಲ್ಲಿ ಭಾಗಿಯಾದ ಪಿಎಂ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಅಜಿತ್ ದೋವಲ್

Published On - 1:55 pm, Sat, 20 November 21

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ