ಸಂಸತ್‌ನಲ್ಲಿ ಪ್ರತಿಧ್ವನಿಸಿದ ಮೂಡಾ ಅವ್ಯವಹಾರ ಪ್ರಕರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಚಿವರೊಬ್ಬರು ಶಾಮೀಲಾಗಿದ್ದಾರೆ ಎನ್ನಲಾದ ವಾಲ್ಮೀಕಿ ಕಾರ್ಪೊರೇಷನ್ ಹಗರಣವನ್ನು ಪ್ರಸ್ತಾಪಿಸಲು ಬಿಜೆಪಿ ನಾಯಕ ಪಿಸಿ ಮೋಹನ್ ಪ್ರಯತ್ನಿಸಿದರು. ಆದರೆ ಸ್ಪೀಕರ್ ಮೋಹನ್ ಅವರಿಗೆ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲ. ಟಿಎಂಸಿ ಸದಸ್ಯರು ಸದನದ ಬಾವಿಗಿಳಿದು, ಪಶ್ಚಿಮ ಬಂಗಾಳವನ್ನು ಇಬ್ಭಾಗ ಮಾಡುವ ಯಾವುದೇ ಷಡ್ಯಂತ್ರ ಯಶಸ್ವಿಯಾಗಲು ಬಿಡುವುದಿಲ್ಲ ಎಂಬ ಘೋಷಣೆಗಳನ್ನು ಕೂಗಿದರು.

ಸಂಸತ್‌ನಲ್ಲಿ ಪ್ರತಿಧ್ವನಿಸಿದ ಮೂಡಾ ಅವ್ಯವಹಾರ ಪ್ರಕರಣ
ಓಂ ಬಿರ್ಲಾ
Follow us
|

Updated on:Jul 26, 2024 | 6:05 PM

ದೆಹಲಿ ಜುಲೈ 26: ಪಶ್ಚಿಮ ಬಂಗಾಳವನ್ನು (West Bengal) ವಿಭಜಿಸುವ ಟೀಕೆಗಳು ಮತ್ತು ಕರ್ನಾಟಕ ಸರ್ಕಾರದ ಸಚಿವರನ್ನು ಒಳಗೊಂಡಿರುವ ಆರೋಪದ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷ ಸಂಸದರ ಗದ್ದಲದ ನಡುವೆ ಲೋಕಸಭೆಯನ್ನು (Lok  Sabha) ಶುಕ್ರವಾರ ಅಲ್ಪಾವಧಿಗೆ ಮುಂದೂಡಲಾಯಿತು. ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮತ್ತು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಪ್ರಸ್ತಾಪಿಸಿರುವ ಪಶ್ಚಿಮ ಬಂಗಾಳದ ವಿಭಜನೆಯವನ್ನು ತೃಣಮೂಲ ಕಾಂಗ್ರೆಸ್ (TMC) ಸದಸ್ಯ ಕಲ್ಯಾಣ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು ಈ ವಿಷಯವನ್ನು ಪ್ರಸ್ತಾಪಿಸಲು ಬ್ಯಾನರ್ಜಿಗೆ ಅವಕಾಶ ನೀಡಲಿಲ್ಲ, ಮಜುಂದಾರ್ ಆ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿಲ್ಲ. ದುಬೆ ಅವರ ಹೇಳಿಕೆಗಳು ಶೂನ್ಯ ವೇಳೆಯ ಉಲ್ಲೇಖದ ಭಾಗವಾಗಿದೆ ಎಂದಿದ್ದಾರೆ ಸ್ಪೀಕರ್.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಚಿವರೊಬ್ಬರು ಶಾಮೀಲಾಗಿದ್ದಾರೆ ಎನ್ನಲಾದ ವಾಲ್ಮೀಕಿ ಕಾರ್ಪೊರೇಷನ್ ಹಗರಣವನ್ನು ಪ್ರಸ್ತಾಪಿಸಲು ಬಿಜೆಪಿ ನಾಯಕ ಪಿಸಿ ಮೋಹನ್ ಪ್ರಯತ್ನಿಸಿದರು. ಆದರೆ ಸ್ಪೀಕರ್ ಮೋಹನ್ ಅವರಿಗೆ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲ. ಟಿಎಂಸಿ ಸದಸ್ಯರು ಸದನದ ಬಾವಿಗಿಳಿದು, ಪಶ್ಚಿಮ ಬಂಗಾಳವನ್ನು ಇಬ್ಭಾಗ ಮಾಡುವ ಯಾವುದೇ ಷಡ್ಯಂತ್ರ ಯಶಸ್ವಿಯಾಗಲು ಬಿಡುವುದಿಲ್ಲ ಎಂಬ ಘೋಷಣೆಗಳನ್ನು ಕೂಗಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿಯ ಹಿರಿಯ ನಾಯಕ ಅನುರಾಗ್ ಠಾಕೂರ್ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಗದ್ದಲ ಮುಂದುವರಿದಿದ್ದರಿಂದ ಸ್ಪೀಕರ್ ಕಲಾಪವನ್ನು ಮುಂದೂಡಿದರು.

ಕಲಾಪ ಪ್ರಾರಂಭವಾಗುವ ಮೊದಲು, ಕರ್ನಾಟಕ ಬಿಜೆಪಿ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪವನ್ನು ಸ್ಥಗಿತಗೊಳಿಸುವಂತೆ ಮತ್ತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧದ ಆರೋಪಗಳನ್ನು ತಕ್ಷಣವೇ ಚರ್ಚಿಸಲು ನೋಟಿಸ್ ಸಲ್ಲಿಸಿದರು.

ಲೋಕಸಭೆಯಲ್ಲಿ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರಗಳ ಬಗ್ಗೆ ಪ್ರಸ್ತಾಪಿಸಿ ಸಿಬಿಐ ತನಿಖೆಗೆ ಒತ್ತಾಯಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಹಿರಿಯ ಸಂಸದ ಅನುರಾಗ್ ಠಾಕೂರ್ ಸೇರಿದಂತೆ ಇತರರು ಸ್ಪೀಕರ್ ಓಂ ಬಿರ್ಲಾ ವಿಷಯಕ್ಕೆ ಅವಕಾಶ ನೀಡಲು ನಿರಾಕರಿಸಿದ್ದರಿಂದ ಪ್ರತಿಭಟನೆ ನಡೆಸಿದರು.

ಮಧ್ಯಾಹ್ನ 12 ಗಂಟೆಗೆ ಶೂನ್ಯ ವೇಳೆಯಲ್ಲಿ ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮೋಹನ್ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದಾರೆ, ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 12:30 ಕ್ಕೆ ಮುಂದೂಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ತಕ್ಷಣವೇ ಚರ್ಚಿಸಲು ಮತ್ತು ನಾಲ್ವರು ಬಿಜೆಪಿ ಸಂಸದರು ವ್ಯವಹಾರವನ್ನು ಸ್ಥಗಿತಗೊಳಿಸುವಂತೆ ಸಲ್ಲಿಸಿದ ನೋಟಿಸ್‌ಗೆ ಸಭಾಪತಿ ಜಗದೀಪ್ ಧನ್ಖರ್ ಅನುಮತಿ ನಿರಾಕರಿಸಿದ ನಂತರ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆದಿದೆ. ಆದರೆ ಕರ್ನಾಟಕ ಸಂಸದ ಈರಣ್ಣ ಕಡಾಡಿ ಅವರು ಶೂನ್ಯ ವೇಳೆಯ ವಿಷಯವಾಗಿ ಪ್ರಸ್ತಾಪಿಸಲು ಅವಕಾಶ ನೀಡಿದರು.

ಇದನ್ನೂ ಓದಿ: ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ

ಕಡಾಡಿ ಅವರಿಗೆ ಈ ವಿಷಯದ ಬಗ್ಗೆ ಮಾತನಾಡಲು ಧನ್ಖರ್ ಅನುಮತಿ ನೀಡಿದಾಗ ತಕ್ಷಣವೇ ಕಾಂಗ್ರೆಸ್‌ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಸಭಾಪತಿ ತಮ್ಮ ಸೂಚನೆಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ಶೂನ್ಯ ವೇಳೆ ವಿಷಯವಾಗಿ ಎತ್ತಲು ಕಡಾಡಿಗೆ ಈಗಾಗಲೇ ಅವಕಾಶ ನೀಡಿದ್ದಾರೆ ಎಂದು ಕಾಂಗ್ರೆಸ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಾದ ಪಿ ಚಿದಂಬರಂ, ರಣದೀಪ್ ಸುರ್ಜೆವಾಲಾ ಮತ್ತು ಮುಕುಲ್ ವಾಸ್ನಿಕ್ ಸಭಾಪತಿ ನಿರ್ಧಾರವನ್ನು ಟೀಕಿಸಿದ್ದಾರೆ. ವಿರೋಧ ಪಕ್ಷದ ಸಂಸದರಾದ ಜಯಾ ಬಚ್ಚನ್ ಮತ್ತು ಸುಶ್ಮಿತಾ ದೇವ್ ,ನಿಯಮ 267 ರ ಅಡಿಯಲ್ಲಿ ತಮ್ಮ ಸೂಚನೆಗಳನ್ನು ತಿರಸ್ಕರಿಸಿದ ನಂತರ ವಿರೋಧ ಪಕ್ಷದ ಸಂಸದರಿಗೆ ತಮ್ಮ ವಿಷಯವನ್ನು ಪ್ರಸ್ತಾಪಿಸಲು ನೀವು ಅನುಮತಿಸುವುದಿಲ್ಲ ಎಂದು ಹೇಳಿದಾಗ ಯಾವುದೇ ಸಂಸದರು ನನ್ನನ್ನು ಸಂಪರ್ಕಿಸಿದರೆ ನಾನು ಯಾವಾಗಲೂ ಅದಕ್ಕೆ ಅವಕಾಶ ನೀಡುತ್ತೇನೆ ಎಂದಿದ್ದಾರೆ ಧನ್ಖರ್.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಪೋಲು ಮಾಡಿರುವ ಬಗ್ಗೆ ಕೇಂದ್ರ ತನಿಖೆಗೆ ಆದೇಶಿಸಬೇಕು. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣದಲ್ಲಿ ಸಿದ್ದರಾಮಯ್ಯ ಸರ್ಕಾರ ದೊಡ್ಡ ಪ್ರಮಾಣದ ಅಕ್ರಮ ಎಸಗಿದೆ. ಆಂಧ್ರಪ್ರದೇಶದ ಕೆಲವು ಬ್ಯಾಂಕ್‌ಗಳಿಗೆ 180 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕೆ ಮೀಸಲಾದ ರಾಜ್ಯ ಸರ್ಕಾರದ ಖಜಾನೆಯಿಂದ ಹಣವನ್ನು ಸಹ ಪೋಲಾಗಿದೆ ಎಂದು ಕಡಾಡಿ ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Fri, 26 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್