AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಉಪಚುನಾವಣೆ; ಅಸ್ಸಾಂ-ಮಧ್ಯಪ್ರದೇಶದ ಅಭ್ಯರ್ಥಿಗಳ ಆಯ್ಕೆ ಮಾಡಿದ ಬಿಜೆಪಿ, ಅಚ್ಚರಿಯ ಹೆಸರುಗಳು!

ಅಸ್ಸಾಂನಲ್ಲಿ ಬಿಸ್ವಜಿತ್ ಡೈಮರಿ ತಮ್ಮ ರಾಜ್ಯಸಭಾ ಸದಸ್ಯನ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಲ್ಲಿನ ವಿಧಾನಸಭೆ ಸ್ಪೀಕರ್​ ಆಗಿದ್ದರು. ಈ ಹಿನ್ನೆಲೆಯಲ್ಲಿ ಆ ಜಾಗ ಖಾಲಿಯಾಗಿತ್ತು.

ರಾಜ್ಯಸಭಾ ಉಪಚುನಾವಣೆ; ಅಸ್ಸಾಂ-ಮಧ್ಯಪ್ರದೇಶದ ಅಭ್ಯರ್ಥಿಗಳ ಆಯ್ಕೆ ಮಾಡಿದ ಬಿಜೆಪಿ, ಅಚ್ಚರಿಯ ಹೆಸರುಗಳು!
ರಾಜ್ಯಸಭೆ
TV9 Web
| Updated By: Lakshmi Hegde|

Updated on:Sep 18, 2021 | 12:23 PM

Share

ದೆಹಲಿ: ಅಕ್ಟೋಬರ್​ 4ರಂದು ರಾಜ್ಯಸಭೆಯ ಒಟ್ಟು 7 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ತಮಿಳುನಾಡಿನ 2  ರಾಜ್ಯಸಭಾ ಸ್ಥಾನ, ಪಶ್ಚಿಮ ಬಂಗಾಳದ ಒಂದು, ಅಸ್ಸಾಂ, ಮಧ್ಯಪ್ರದೇಶ, ಪುದುಚೇರಿ ಮತ್ತು ಮಹಾರಾಷ್ಟ್ರಗಳ ತಲಾ ಒಂದು ಸೀಟ್​ಗಾಗಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಸ್ಸಾಂ ಮತ್ತು ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದೆ. ಅಸ್ಸಾಂನಿಂದ ಸರ್ಬಾನಂದ ಸೋನೋವಾಲ್​ ಮತ್ತು ಮಧ್ಯಪ್ರದೇಶದಿಂದ ಎಲ್​.ಮುರುಗನ್​ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಇಬ್ಬರೂ ನಾಯಕರು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರ ನೂತನ ಮಂತ್ರಿಮಂಡಳಿಯನ್ನು ಸೇರಿಕೊಂಡವರಾಗಿದ್ದರು. ಇದೀಗ ರಾಜ್ಯಸಭೆ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಅಸ್ಸಾಂ ಮತ್ತು ಮಧ್ಯಪ್ರದೇಶದ ವಿಧಾನಸಭೆಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಇರುವುದರಿಂದ ಅಸ್ಸಾಂನಿಂದ ಸೋ ನೋವಾಲ್​ ಮತ್ತು ಮಧ್ಯಪ್ರದೇಶದಿಂದ ಎಲ್​. ಮುರುಗನ್​ ರಾಜ್ಯಸಭೆಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಅಸ್ಸಾಂನಲ್ಲಿ ಬಿಸ್ವಜಿತ್ ಡೈಮರಿ ತಮ್ಮ ರಾಜ್ಯಸಭಾ ಸದಸ್ಯನ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಲ್ಲಿನ ವಿಧಾನಸಭೆ ಸ್ಪೀಕರ್​ ಆಗಿದ್ದರು. ಈ ಹಿನ್ನೆಲೆಯಲ್ಲಿ ಆ ಜಾಗ ಖಾಲಿಯಾಗಿತ್ತು. ಇನ್ನು ಮಧ್ಯಪ್ರದೇಶದಲ್ಲಿ ಥಾವರ್​ಚಂದ್​ ಗೆಹ್ಲೊಟ್​ ರಾಜ್ಯಸಭಾ ಸದಸ್ಯನ ಸ್ಥಾನಕ್ಕೆ ರಾಜೀನಾಮೆ ನೀಡಿ, ಕರ್ನಾಟಕದ ರಾಜ್ಯಪಾಲರ ಹುದ್ದೆಗೆ ಏರಿದ್ದಾರೆ. ಹೀಗಾಗಿ ಅಲ್ಲಿ ಒಂದು ಸ್ಥಾನ ಖಾಲಿಯಾಗಿತ್ತು.

ಒಟ್ಟು 7 ಸೀಟುಗಳಿಗೆ ಉಪಚುನಾವಣೆ ನಡೆಯಲಿದ್ದರೂ ಬಿಜೆಪಿ ಎರಡು ಸೀಟುಗಳ ಅಭ್ಯರ್ಥಿಗಳ ಹೆಸರನ್ನಷ್ಟೇ ಸೂಚಿಸಿದೆ. ಪುದುಚೇರಿಯಲ್ಲಿ ಇನ್ನೂ ಸ್ಥಾನ ಖಾಲಿ ಆಗಿಲ್ಲ. ಆದರೆ  ಅಲ್ಲಿನ ರಾಜ್ಯಸಭಾ ಸದಸ್ಯ ಎನ್​. ಗೋಪಾಲಕೃಷ್ಣ ಅಕ್ಟೋಬರ್​ 6ರಂದು ನಿವೃತ್ತ ಗೊಳ್ಳಲಿದ್ದು, ಆ ಸ್ಥಾನಕ್ಕೂ ಕೂಡ ಮುಂಚಿತವಾಗಿಯೇ, ಅಂದರೆ ಅಕ್ಟೋಬರ್​ 4ರಂದು ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆಯೇ ಫಲಿತಾಂಶವೂ ಹೊರಬೀಳಲಿದೆ.

ಇದನ್ನೂ ಓದಿ: ‘ಅಸಾದುದ್ದೀನ್ ಓವೈಸಿಗೆಲ್ಲ ಹೆದರುವುದಿಲ್ಲ..ತೆಲಂಗಾಣ ವಿಮೋಚನಾ ದಿನ ಆಚರಣೆ ಖಂಡಿತ ಮಾಡುತ್ತೇವೆ’-ಅಮಿತ್​ ಶಾ

Upendra: ಉಪ್ಪಿ ಹುಟ್ಟುಹಬ್ಬಕ್ಕೆ ರಾಮ್ ಗೋಪಾಲ್ ವರ್ಮಾ ನೀಡಿದ್ರು ಬಿಗ್ ಸರ್ಪ್ರೈಸ್; ಸುದ್ದಿ ಕೇಳಿ ಥ್ರಿಲ್ ಆದ ಅಭಿಮಾನಿಗಳು

Published On - 12:22 pm, Sat, 18 September 21

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ