AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ರಾಜ್ಯಗಳ ಚುನಾವಣೆ ಬಗ್ಗೆ ಚರ್ಚೆ; ಸೇವೆ, ಸಂಕಲ್ಪವೇ ಬಿಜೆಪಿ ಗುರಿ: ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಭೂಪೇಂದ್ರ ಯಾದವ್

ಕೇಂದ್ರದ ಯೋಜನೆ ಜನರಿಗೆ ತಲುಪಿಸಬೇಕೆಂದು ಸೂಚನೆ ನೀಡಲಾಯಿತು. ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು ಎಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚಿವ ಅಶೋಕ್​ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆ ಬಗ್ಗೆ ಚರ್ಚೆ; ಸೇವೆ, ಸಂಕಲ್ಪವೇ ಬಿಜೆಪಿ ಗುರಿ: ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಭೂಪೇಂದ್ರ ಯಾದವ್
ಭೂಪೇಂದ್ರ ಯಾದವ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 07, 2021 | 6:48 PM

Share

ದೆಹಲಿ: ಪಂಜಾಬ್‌ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಸ್ಪರ್ಧೆ ಮಾಡಲಿದೆ. ವಿಧಾನಸಭಾ ಎಲೆಕ್ಷನ್‌ನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸ್ತೇವೆ. 5 ರಾಜ್ಯಗಳ ಚುನಾವಣೆ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗಿದೆ. ಸೇವೆ ಮತ್ತು ಸಂಕಲ್ಪವೇ ಬಿಜೆಪಿ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ 348 ಜನರು ಭಾಗಿ ಆಗಿದ್ದಾರೆ. ಕರ್ನಾಟಕ ರಾಜ್ಯದಿಂದ 17 ಪ್ರಮುಖರು ಭಾಗವಹಿಸಿದ್ದೆವು. ಕೊರೊನಾ ವೇಳೆ ಮೋದಿ ದಿಟ್ಟ ನಿರ್ಧಾರ ಕೈಗೊಂಡಿದ್ದರು. ದಿಟ್ಟ ನಿರ್ಧಾರದಿಂದ ಜನರ ಪ್ರಾಣ ಉಳಿಸಲು ಸಾಧ್ಯವಾಯಿತು. ದೇಶದಲ್ಲಿ 100 ಕೋಟಿ ಜನರಿಗೆ ಕೊರೊನಾ ಲಸಿಕೆ ಹಾಕಿದ್ದು, ವಿದೇಶಗಳಿಗೆ ಕೊರೊನಾ ಲಸಿಕೆ ಪೂರೈಕೆ ಮಾಡಿದ್ದು, 9 ತಿಂಗಳಲ್ಲಿ ಕೊರೊನಾ 2 ಲಸಿಕೆ ಸಂಶೋಧನೆ ಮಾಡಿದ್ದು, ಅರ್ಥವ್ಯವಸ್ಥೆ ಸರಿಯಾಗಿ ನಿಭಾಯಿಸಿದ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಕೋರ್​ಕಮಿಟಿ ಸಭೆ ನಂತರ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚಿವ ಆರ್. ಅಶೋಕ್​ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸಾಧನೆಯ ಬಗ್ಗೆ 3 ಪುಸ್ತಕ ಬಿಡುಗಡೆ ಮಾಡಲಾಗಿದೆ. ಕೇಂದ್ರದ ಯೋಜನೆ ಜನರಿಗೆ ತಲುಪಿಸಬೇಕೆಂದು ಸೂಚನೆ ನೀಡಲಾಯಿತು. ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು ಎಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚಿವ ಅಶೋಕ್​ ಹೇಳಿದ್ದಾರೆ.

ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ​ ಅವನತಿಯ ಸ್ಥಿತಿಯಲ್ಲಿದೆ. ಹಾನಗಲ್​ ಗೆಲುವನ್ನು ಕಾಂಗ್ರೆಸ್​ ಸಂಭ್ರಮಿಸುವುದು ಬೇಡ. ಕಲಬುರಗಿ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಏಕೆ ಸೋತ್ರಿ? ದೊಡ್ಡಬಳ್ಳಾಪುರದಲ್ಲಿ ಯಾಕೆ ಠೇವಣಿ ಕಳೆದುಕೊಂಡಿದ್ದೀರಿ? ಈ ಬಗ್ಗೆ ಕಾಂಗ್ರೆಸ್​ನವರು ಆತ್ಮಾವಲೋಕನ ಮಾಡಿಕೊಳ್ಳಲಿ. ಮುಂದಿನ ಚುನಾವಣೆಯಲ್ಲಿ ಹಾನಗಲ್​ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಕೋರ್​ಕಮಿಟಿ ಸಭೆ ನಂತರ ಸಚಿವ ಆರ್. ಅಶೋಕ್​ ಹೇಳಿದ್ದಾರೆ.

5 ರಾಜ್ಯಗಳ ಚುನಾವಣೆ ಬಗ್ಗೆ 2 ಗಂಟೆ ಕಾಲ ಚರ್ಚೆ ನಡೆದಿದೆ. ಅಭಿವೃದ್ಧಿ ಕಾರ್ಯಗಳ ಮೇಲೆ ಗೆಲ್ಲುತ್ತೇವೆನ್ನುವ ವಿಶ್ವಾಸವಿದೆ. 2ನೇ ಡೋಸ್​ ಲಸಿಕೆಗೆ ದೊಡ್ಡ ಅಭಿಯಾನಕ್ಕೆ ನಿರ್ಧರಿಸಿದ್ದೇವೆ. ಸೇವಾ ಕಾರ್ಯದಿಂದಾಗಿ ಬಿಜೆಪಿ ಕಾರ್ಯಕರ್ತರು ಮಾದರಿ ಆಗಬೇಕು. ಸೇವಾ ಕಾರ್ಯದಿಂದ ಜನರ ಮನಸು ಗೆಲ್ಲಲು ಮುಂದಾಗಬೇಕು ಎಂದು ಅಶೋಕ್ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಭಾಷಣ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊವಿಡ್‌ ಸಂಕಷ್ಟದಲ್ಲಿ ಸಾಕಷ್ಟು ಶ್ರಮ ವಹಿಸಿದ್ದೀರಿ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಎನ್‌ಡಿಎಂಸಿ ಸಭಾಂಗಣದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಂಡಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪುನೀತ್​ಗೆ​ ಸಂತಾಪ ಸೂಚಿಸಲಾಗಿದೆ. ಸಿ.ಎಂ. ಉದಾಸಿಗೂ ಕಾರ್ಯಕಾರಿಣಿಯಲ್ಲಿ ಸಂತಾಪ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ: ನವೆಂಬರ್ 19ರಿಂದ 21ರವರೆಗೆ ಬಿಜೆಪಿಯ ಜನಸ್ವರಾಜ್ ಸಮಾವೇಶ; ಎಂಎಲ್​ಸಿ ಎನ್​ ರವಿಕುಮಾರ್ ಮಾಹಿತಿ

ಇದನ್ನೂ ಓದಿ: ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ; ಪ್ರಧಾನಿ ನರೇಂದ್ರ ಮೋದಿ ನೇತೃತ್ವ

Published On - 6:48 pm, Sun, 7 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ