AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಜೆ.ಪಿ.ನಡ್ಡಾ ಸಭೆ; ಚುನಾವಣೆ ಕೆಲವೇ ತಿಂಗಳಿರುವಾಗ ಬಿಜೆಪಿಗೆ ಶುರುವಾದ ಹೊಸ ಆತಂಕ

ಇನ್ನು ಬಿಜೆಪಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರನ್ನು ತಲುಪಲು, ಇದೇ ಸಮುದಾಯದ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.

ಉತ್ತರಪ್ರದೇಶದ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಜೆ.ಪಿ.ನಡ್ಡಾ ಸಭೆ; ಚುನಾವಣೆ ಕೆಲವೇ ತಿಂಗಳಿರುವಾಗ ಬಿಜೆಪಿಗೆ ಶುರುವಾದ ಹೊಸ ಆತಂಕ
ಜೆ.ಪಿ. ನಡ್ಡಾ
TV9 Web
| Updated By: Lakshmi Hegde|

Updated on: Dec 27, 2021 | 3:55 PM

Share

ಉತ್ತರಪ್ರದೇಶದಲ್ಲಿ 2022ರ ಮಾರ್ಚ್​ ತಿಂಗಳಲ್ಲಿ ಚುನಾವಣೆ (Uttar Pradesh Assembly Election 2022) ನಡೆಯಲಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಕೂಡ ತಮ್ಮದೇ ಮಾರ್ಗದಲ್ಲಿ ಪ್ರಚಾರ ಶುರುವಿಟ್ಟುಕೊಂಡಿವೆ. ರಾಜ್ಯದಲ್ಲಿ ಬಹುಮುಖ್ಯವಾಗಿರುವ ಬ್ರಾಹ್ಮಣರ ಮತಗಳಿಸುವುದಕ್ಕೋಸ್ಕರ ಬಿಜೆಪಿ ತನ್ನದೇ ಮಾರ್ಗದಲ್ಲಿ ಕೆಲಸ ಶುರು ಮಾಡಿದೆ. ಅದರ ಒಂದು ಭಾಗವಾಗಿ ಇಂದು ರಾಜ್ಯದ ಬ್ರಾಹ್ಮಣ ಸಮುದಾಯದ ಪ್ರಮುಖ ನಾಯಕರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.  ಅದಕ್ಕೂ ಮೊದಲು, ಉತ್ತರ ಪ್ರದೇಶ ರಾಜ್ಯ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅವರ ನಿವಾಸದಲ್ಲಿ ಭಾನುವಾರ ರಾಜ್ಯದ ಬ್ರಾಹ್ಮಣ ಮುಖಂಡರು ಸರಣಿ ಸಭೆ ನಡೆಸಿದ್ದಾರೆ. ಬ್ರಾಹ್ಮಣ ಸಮುದಾಯದ ಮತ ಬಿಜೆಪಿ ಪಾಲಾಗುವಂತೆ ಏನು ಮಾಡಬಹುದು ಎಂಬ ಬಗ್ಗೆ ಇಲ್ಲಿ ಚರ್ಚೆ ನಡೆದಿದೆ.

ಇನ್ನು ಬಿಜೆಪಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರನ್ನು ತಲುಪಲು, ಇದೇ ಸಮುದಾಯದ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿಯಲ್ಲಿ ಬ್ರಾಹ್ಮಣ ನಾಯಕರಾದ ಬಿಜೆಪಿ ರಾಜ್ಯ ಸಭಾ ಮುಖ್ಯ ಸಚೇತಕ ಶಿವ ಪ್ರತಾಪ್​ ಶುಕ್ಲಾ, ಮುಖಂಡರಾದ ಅಭಿಜಿತ್​ ಮಿಶ್ರಾ, ಗುಜರಾತ್​ ಎಂಪಿ ರಾಂ ಭಾಯ್​  ಮೊಕರಿಯಾ, ಮಹೇಶ್ ಶರ್ಮಾ ಇದ್ದಾರೆ.  ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ಆಶೀಶ್​ ಮಿಶ್ರಾ, ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ. ಇವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದು ಮುಂಬರುವ ಚುನಾವಣೆಯಲ್ಲಿ ಬ್ರಾಹ್ಮಣರ ಮತಗಳಿಸಲು ಅಡ್ಡಿಯನ್ನುಂಟುಮಾಡಬಹುದು ಎಂಬ ಹೊಸ ಆತಂಕದಲ್ಲಿ ಬಿಜೆಪಿ ಸರ್ಕಾರವಿದ್ದು, ಅದನ್ನು ಹೋಗಲಾಡಿಸಿಕೊಳ್ಳುವ ಸಲುವಾಗಿ ಸಮಿತಿ ರಚನೆ ಮಾಡಿದೆ. ಈ ಮೂಲಕ ಬ್ರಾಹ್ಮಣ ಸಮುದಾಯವನ್ನು ಹೆಚ್ಚೆಚ್ಚು ತಲುಪುವ ಪ್ರಯತ್ನ ಮಾಡುತ್ತಿದೆ.

ಉತ್ತರಪ್ರದೇಶದಲ್ಲಿ ಶೇ.9-11ರಷ್ಟು ಬ್ರಾಹ್ಮಣರಿದ್ದಾರೆ. ಅದೇ ಪೂರ್ವಾಂಚಲದಲ್ಲಿ ಶೇ.20ರಷ್ಟಿದ್ದಾರೆ. 1990ಕ್ಕೂ ಮೊದಲು ಉತ್ತರಪ್ರದೇಶದ ಸರ್ಕಾರದ ಕ್ಯಾಬಿನೆಟ್​ನಲ್ಲಿ 8ಕ್ಕೂ ಹೆಚ್ಚು ಬ್ರಾಹ್ಮಣ ಮಂತ್ರಿಗಳು ಇದ್ದರು.  ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷವಾದರೂ ಬ್ರಾಹ್ಮಣ ಮತವನ್ನು ನಿರ್ಲಕ್ಷಿಸುವಂತಿಲ್ಲ ಎಂದೇ ಹೇಳಲಾಗುತ್ತದೆ. ಹೀಗಾಗಿ ಈ ಬಾರಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ ಕೂಡ ಬ್ರಾಹ್ಮಣರ ಮತ ಗಳಿಸಲು ಮುಂದಾಗಿದೆ. ಹೀಗಿರುವಾಗ, ಪ್ರಸ್ತುತ ಉತ್ತರಪ್ರದೇಶದಲ್ಲಿ ಬ್ರಾಹ್ಮಣರು ಬಿಜೆಪಿ ಸರ್ಕಾರದ ವಿರುದ್ಧ ಕೆಲವು ಕಾರಣಕ್ಕೆ ಅಸಮಾಧಾನ ಹೊಂದಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಚುನಾವಣೆಗೂ ಪೂರ್ವ ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ರಾತ್ರಿ ಕರ್ಫ್ಯೂ ವಿಧಿಸಿ ಬೆಳಗ್ಗೆ ರ್ಯಾಲಿ ನಡೆಸುತ್ತಿರುವ ಯೋಗಿ ಆದಿತ್ಯನಾಥ ವಿರುದ್ಧ ವರುಣ್ ಗಾಂಧಿ ವಾಗ್ದಾಳಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ