AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಜೆ.ಪಿ.ನಡ್ಡಾ ಸಭೆ; ಚುನಾವಣೆ ಕೆಲವೇ ತಿಂಗಳಿರುವಾಗ ಬಿಜೆಪಿಗೆ ಶುರುವಾದ ಹೊಸ ಆತಂಕ

ಇನ್ನು ಬಿಜೆಪಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರನ್ನು ತಲುಪಲು, ಇದೇ ಸಮುದಾಯದ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.

ಉತ್ತರಪ್ರದೇಶದ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಜೆ.ಪಿ.ನಡ್ಡಾ ಸಭೆ; ಚುನಾವಣೆ ಕೆಲವೇ ತಿಂಗಳಿರುವಾಗ ಬಿಜೆಪಿಗೆ ಶುರುವಾದ ಹೊಸ ಆತಂಕ
ಜೆ.ಪಿ. ನಡ್ಡಾ
Follow us
TV9 Web
| Updated By: Lakshmi Hegde

Updated on: Dec 27, 2021 | 3:55 PM

ಉತ್ತರಪ್ರದೇಶದಲ್ಲಿ 2022ರ ಮಾರ್ಚ್​ ತಿಂಗಳಲ್ಲಿ ಚುನಾವಣೆ (Uttar Pradesh Assembly Election 2022) ನಡೆಯಲಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಕೂಡ ತಮ್ಮದೇ ಮಾರ್ಗದಲ್ಲಿ ಪ್ರಚಾರ ಶುರುವಿಟ್ಟುಕೊಂಡಿವೆ. ರಾಜ್ಯದಲ್ಲಿ ಬಹುಮುಖ್ಯವಾಗಿರುವ ಬ್ರಾಹ್ಮಣರ ಮತಗಳಿಸುವುದಕ್ಕೋಸ್ಕರ ಬಿಜೆಪಿ ತನ್ನದೇ ಮಾರ್ಗದಲ್ಲಿ ಕೆಲಸ ಶುರು ಮಾಡಿದೆ. ಅದರ ಒಂದು ಭಾಗವಾಗಿ ಇಂದು ರಾಜ್ಯದ ಬ್ರಾಹ್ಮಣ ಸಮುದಾಯದ ಪ್ರಮುಖ ನಾಯಕರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.  ಅದಕ್ಕೂ ಮೊದಲು, ಉತ್ತರ ಪ್ರದೇಶ ರಾಜ್ಯ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅವರ ನಿವಾಸದಲ್ಲಿ ಭಾನುವಾರ ರಾಜ್ಯದ ಬ್ರಾಹ್ಮಣ ಮುಖಂಡರು ಸರಣಿ ಸಭೆ ನಡೆಸಿದ್ದಾರೆ. ಬ್ರಾಹ್ಮಣ ಸಮುದಾಯದ ಮತ ಬಿಜೆಪಿ ಪಾಲಾಗುವಂತೆ ಏನು ಮಾಡಬಹುದು ಎಂಬ ಬಗ್ಗೆ ಇಲ್ಲಿ ಚರ್ಚೆ ನಡೆದಿದೆ.

ಇನ್ನು ಬಿಜೆಪಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರನ್ನು ತಲುಪಲು, ಇದೇ ಸಮುದಾಯದ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿಯಲ್ಲಿ ಬ್ರಾಹ್ಮಣ ನಾಯಕರಾದ ಬಿಜೆಪಿ ರಾಜ್ಯ ಸಭಾ ಮುಖ್ಯ ಸಚೇತಕ ಶಿವ ಪ್ರತಾಪ್​ ಶುಕ್ಲಾ, ಮುಖಂಡರಾದ ಅಭಿಜಿತ್​ ಮಿಶ್ರಾ, ಗುಜರಾತ್​ ಎಂಪಿ ರಾಂ ಭಾಯ್​  ಮೊಕರಿಯಾ, ಮಹೇಶ್ ಶರ್ಮಾ ಇದ್ದಾರೆ.  ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ಆಶೀಶ್​ ಮಿಶ್ರಾ, ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ. ಇವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದು ಮುಂಬರುವ ಚುನಾವಣೆಯಲ್ಲಿ ಬ್ರಾಹ್ಮಣರ ಮತಗಳಿಸಲು ಅಡ್ಡಿಯನ್ನುಂಟುಮಾಡಬಹುದು ಎಂಬ ಹೊಸ ಆತಂಕದಲ್ಲಿ ಬಿಜೆಪಿ ಸರ್ಕಾರವಿದ್ದು, ಅದನ್ನು ಹೋಗಲಾಡಿಸಿಕೊಳ್ಳುವ ಸಲುವಾಗಿ ಸಮಿತಿ ರಚನೆ ಮಾಡಿದೆ. ಈ ಮೂಲಕ ಬ್ರಾಹ್ಮಣ ಸಮುದಾಯವನ್ನು ಹೆಚ್ಚೆಚ್ಚು ತಲುಪುವ ಪ್ರಯತ್ನ ಮಾಡುತ್ತಿದೆ.

ಉತ್ತರಪ್ರದೇಶದಲ್ಲಿ ಶೇ.9-11ರಷ್ಟು ಬ್ರಾಹ್ಮಣರಿದ್ದಾರೆ. ಅದೇ ಪೂರ್ವಾಂಚಲದಲ್ಲಿ ಶೇ.20ರಷ್ಟಿದ್ದಾರೆ. 1990ಕ್ಕೂ ಮೊದಲು ಉತ್ತರಪ್ರದೇಶದ ಸರ್ಕಾರದ ಕ್ಯಾಬಿನೆಟ್​ನಲ್ಲಿ 8ಕ್ಕೂ ಹೆಚ್ಚು ಬ್ರಾಹ್ಮಣ ಮಂತ್ರಿಗಳು ಇದ್ದರು.  ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷವಾದರೂ ಬ್ರಾಹ್ಮಣ ಮತವನ್ನು ನಿರ್ಲಕ್ಷಿಸುವಂತಿಲ್ಲ ಎಂದೇ ಹೇಳಲಾಗುತ್ತದೆ. ಹೀಗಾಗಿ ಈ ಬಾರಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ ಕೂಡ ಬ್ರಾಹ್ಮಣರ ಮತ ಗಳಿಸಲು ಮುಂದಾಗಿದೆ. ಹೀಗಿರುವಾಗ, ಪ್ರಸ್ತುತ ಉತ್ತರಪ್ರದೇಶದಲ್ಲಿ ಬ್ರಾಹ್ಮಣರು ಬಿಜೆಪಿ ಸರ್ಕಾರದ ವಿರುದ್ಧ ಕೆಲವು ಕಾರಣಕ್ಕೆ ಅಸಮಾಧಾನ ಹೊಂದಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಚುನಾವಣೆಗೂ ಪೂರ್ವ ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ರಾತ್ರಿ ಕರ್ಫ್ಯೂ ವಿಧಿಸಿ ಬೆಳಗ್ಗೆ ರ್ಯಾಲಿ ನಡೆಸುತ್ತಿರುವ ಯೋಗಿ ಆದಿತ್ಯನಾಥ ವಿರುದ್ಧ ವರುಣ್ ಗಾಂಧಿ ವಾಗ್ದಾಳಿ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ