AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಒಡಿಶಾದ ಝಮು ಜಾತ್ರೆಯಲ್ಲಿ ಕೆಂಡದ ಮೇಲೆ ನಡೆದು ಪ್ರಾರ್ಥನೆ ಸಲ್ಲಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ

ಸುದ್ದಿಗಾರರೊಂದಿಗೆ ಮಾತನಾಡಿದ ಪಾತ್ರಾ, ಜನರ ಕಲ್ಯಾಣ ಮತ್ತು ಕ್ಷೇತ್ರದಲ್ಲಿ ಶಾಂತಿಗಾಗಿ ಬೆಂಕಿಯ ಮೇಲೆ ನಡೆಯುವ ಕಾರ್ಯವನ್ನು ಮಾಡಿರುವುದಾಗಿ ಹೇಳಿದ್ದಾರೆ.

Odisha: ಒಡಿಶಾದ ಝಮು ಜಾತ್ರೆಯಲ್ಲಿ ಕೆಂಡದ ಮೇಲೆ ನಡೆದು ಪ್ರಾರ್ಥನೆ ಸಲ್ಲಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ
ಸಂಬಿತ್ ಪಾತ್ರಾ
ರಶ್ಮಿ ಕಲ್ಲಕಟ್ಟ
|

Updated on:Apr 12, 2023 | 9:16 PM

Share

ಭುವನೇಶ್ವರ: ಒಡಿಶಾದ (Odisha) ಪುರಿ (Puri) ಜಿಲ್ಲೆಯಲ್ಲಿ ನಡೆಯುತ್ತಿರುವ ಝಮು ಜಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ (Sambit Patra) ಕೆಂಡದ ಮೇಲೆ ನಡೆದಿದ್ದಾರೆ. ಪಾತ್ರಾ ಮಂಗಳವಾರ ಸುಡುವ ಕಲ್ಲಿದ್ದಲಿನ ಕೆಂಡದ ಮೇಲೆ ಸುಮಾರು 10 ಮೀಟರ್ ನಡೆದಿದ್ದಾರೆ. ಇದಾದ ನಂತರ ಟ್ವೀಟ್ ಮಾಡಿದ ಪಾತ್ರಾ, ಇಂದು, ನಾನು ಪುರಿ ಜಿಲ್ಲೆಯ ಸಮಂಗ್ ಪಂಚಾಯತ್‌ನ ರೆಬಾಟಿ ರಾಮನ್ ಗ್ರಾಮದ ಯಾತ್ರೆಯಲ್ಲಿ ಭಾಗವಹಿಸಿದ್ದೇನೆ, ನನ್ನ ತಾಯಿಗೆ ಬೆಂಕಿಯ ಮೇಲೆ ನಡೆದಾಡುವ ಮೂಲಕ ಪೂಜೆ ಸಲ್ಲಿಸಿದ್ದೇನೆ. ಅವರ ಆಶೀರ್ವಾದವನ್ನು ಪಡೆದುಕೊಂಡಿದ್ದೇನೆ ಗ್ರಾಮಸ್ಥರಿಗೆ ಸಂತೋಷ ಮತ್ತು ಸಮೃದ್ಧಿಯನ್ನು ಹಾರೈಸುತ್ತೇನೆ ಎಂದಿದ್ದಾರೆ.

ಈ ಯಾತ್ರೆಯಲ್ಲಿ, ನಾನು ಬೆಂಕಿಯ ಮೇಲೆ ನಡೆಯುವ ಮೂಲಕ ಮತ್ತು ತಾಯಿಯ (ದೇವತೆ ದುಲನ್) ಆಶೀರ್ವಾದವನ್ನು ಪಡೆದಿದ್ದೇನೆ ಎಂದು ಪಾತ್ರಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪಾತ್ರಾ, ಜನರ ಕಲ್ಯಾಣ ಮತ್ತು ಕ್ಷೇತ್ರದಲ್ಲಿ ಶಾಂತಿಗಾಗಿ ಬೆಂಕಿಯ ಮೇಲೆ ನಡೆಯುವ ಕಾರ್ಯವನ್ನು ಮಾಡಿರುವುದಾಗಿ ಹೇಳಿದ್ದಾರೆ.

ಪಾತ್ರಾ ಅವರು ದುಲನ್​​ಗೆ ಜೈಕಾರ ಕೂಗುತ್ತಿರುವ ಗ್ರಾಮಸ್ಥರ ನಡುವೆ ಕೆಂಡದ ಮೇಲೆ ನಡೆಯುತ್ತಿರುವ ವಿಡಿಯೊವನ್ನು ಶೇರ್ ಮಾಡಿದ್ದಾರೆ, ಪಾತ್ರಾ 2019 ರ ಲೋಕಸಭೆ ಚುನಾವಣೆಯಲ್ಲಿ ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಲ್ಲಿ ಅವರು ಬಿಜು ಜನತಾ ದಳದ (ಬಿಜೆಡಿ) ಪಿನಾಕಿ ಮಿಶ್ರಾ ವಿರುದ್ಧ 10,000 ಮತಗಳಿಂದ ಸೋತರು.

ಇದನ್ನೂ ಓದಿ: ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಸಂಪ್ರದಾಯದ ಪ್ರಕಾರ, ಝಮು ಜಾತ್ರೆ ಒಂದು ತಪಸ್ಸು. ಭಕ್ತರು ತಮ್ಮ ಆಗ್ರಹಗಳನ್ನು ಈಡೇರಿಸಲು ದೇವತೆ ದುಲನ್ ಅನ್ನು ಸಮಾಧಾನಪಡಿಸಲು ಬೆಂಕಿಯ ಮೇಲೆ ನಡೆಯುವುದರ ಮೂಲಕ ಅಥವಾ ಮೊಳೆ ಚುಚ್ಚುವ ಮೂಲಕ ತಮ್ಮ ದೇಹಕ್ಕೆ ನೋವನ್ನು ಉಂಟುಮಾಡುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:17 pm, Wed, 12 April 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​