AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಆಶೀರ್ವಾದ ಕೇಳಲು ಹೊರಡುತ್ತಿದ್ದಾರೆ ಕೇಂದ್ರ ಸಚಿವರು; ಆಗಸ್ಟ್​ 16ರಿಂದ ಪ್ರಾರಂಭ ಬಿಜೆಪಿ ಜನಾಶೀರ್ವಾದ ಯಾತ್ರೆ

BJP Jan Ashirwad Yatra: ಸ್ವಾತಂತ್ರ್ಯೋತ್ಸವದ ಮರುದಿನ ಅಂದರೆ ಅಗಸ್ಟ್​ 16ರಿಂದ ಈ ಜನಾಶೀರ್ವಾದ ಯಾತ್ರೆ ಶುರುವಾಗಲಿದೆ. ಈ ಱಲಿಯನ್ನು ಕೇಂದ್ರ ಇಲಾಖೆ ರಾಜ್ಯ ಸಚಿವರುಗಳು ಪ್ರಾರಂಭಿಸಲಿದ್ದು, ಅದರಲ್ಲಿ ಕ್ಯಾಬಿನೆಟ್ ದರ್ಜೆಯ ಹೊಸ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.

ಜನರ ಆಶೀರ್ವಾದ ಕೇಳಲು ಹೊರಡುತ್ತಿದ್ದಾರೆ ಕೇಂದ್ರ ಸಚಿವರು; ಆಗಸ್ಟ್​ 16ರಿಂದ ಪ್ರಾರಂಭ ಬಿಜೆಪಿ ಜನಾಶೀರ್ವಾದ ಯಾತ್ರೆ
ಬಿಜೆಪಿ
TV9 Web
| Edited By: |

Updated on:Aug 12, 2021 | 4:50 PM

Share

ಭಾರತೀಯ ಜನತಾ ಪಕ್ಷ (ಬಿಜೆಪಿ -BJP) ಜನರನ್ನು ತಲುಪುವ ನಿಟ್ಟಿನಲ್ಲಿ ಇದೀಗ ಜನಾಶೀರ್ವಾದ ಯಾತ್ರೆಯನ್ನು ಪ್ರಾರಂಭಿಸಲು ಮುಂದಾಗಿದೆ. ಇದು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟ ಸೇರ್ಪಡೆಯಾದ 39 ಹೊಸ ಸಚಿವರ ಜನಾಶೀರ್ವಾದ ಯಾತ್ರೆಯಾಗಿದೆ. ದೊಡ್ಡ ಮಟ್ಟದ ಱಲಿ ಮೂಲಕ ಜನರನ್ನು ತಲುಪುವ ಹೊಸ ಯೋಜನೆಯಾಗಿದೆ.

ಸ್ವಾತಂತ್ರ್ಯೋತ್ಸವದ ಮರುದಿನ ಅಂದರೆ ಅಗಸ್ಟ್​ 16ರಿಂದ ಈ ಜನಾಶೀರ್ವಾದ ಯಾತ್ರೆ ಶುರುವಾಗಲಿದೆ. ಈ ಱಲಿಯನ್ನು ಕೇಂದ್ರ ಇಲಾಖೆ ರಾಜ್ಯ ಸಚಿವರುಗಳು ಪ್ರಾರಂಭಿಸಲಿದ್ದು, ಅದರಲ್ಲಿ ಕ್ಯಾಬಿನೆಟ್ ದರ್ಜೆಯ ಹೊಸ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. ಆಗಸ್ಟ್​ 16ರಿಂದ ಶುರುವಾಗುವ ಈ ಜನಾಶೀರ್ವಾದ ಯಾತ್ರೆ ಸುಮಾರು 22 ರಾಜ್ಯಗಳಿಂದ, ಒಟ್ಟು 19,567 ಕಿಮೀಗಳಷ್ಟು ದೂರ ಸಂಚರಿಸಲಿದೆ. 22 ರಾಜ್ಯಗಳ, 265 ಜಿಲ್ಲೆಗಳು ಮತ್ತು 212 ಲೋಕಸಭಾ ಕ್ಷೇತ್ರಗಳ ಮೂಲಕ ಈ ನೂತನ ಸಚಿವರ ಜನಾಶೀರ್ವಾದ ಯಾತ್ರೆ ಸಂಚಾರ ಮಾಡಲಿದೆ.

ಕಳೆದ ವಾರ ಈ ಬಗ್ಗೆ ಮಾತನಾಡಿದ್ದ ಬಿಜೆಪಿಯ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಇತ್ತೀಚೆಗೆ ಸಂಪುಟ ಸೇರ್ಪಡೆಯಾದ ಹೊಸ ಸಚಿವರು, ಜನರ ಆಶಿರ್ವಾದ ಪಡೆಯಲು ಯಾತ್ರೆ ಹೊರಡಲಿದ್ದಾರೆ. ಸಮಾಜದ ದುರ್ಬಲ ವರ್ಗಗಳು ಮತ್ತು ವಿವಿಧ ಬಡ ಸಮುದಾಯಗಳ ಏಳ್ಗೆಗೆ ಬಿಜೆಪಿ ನೇತೃತ್ವದ ಸರ್ಕಾರ ಪ್ರಾತಿನಿಧ್ಯ ನೀಡಲಿದೆ ಎಂಬ ಸಂದೇಶವನ್ನು ಹೊತ್ತು ಈ ಯಾತ್ರೆ ಸಂಚಾರ ಮಾಡಲಿದೆ ಎಂದಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಆಗಸ್ಟ್​ 11ರಂದೇ ಮುಕ್ತಾಯವಾಗಿದ್ದು, ಇನ್ನು ಸ್ವಾತಂತ್ರ್ಯೋತ್ಸವ ಮುಗಿಯುತ್ತಿದ್ದಂತೆ ಬಿಜೆಪಿ ಜನಾಶೀರ್ವಾದ ಯಾತ್ರೆ ಶುರುವಾಗಲಿದೆ. ಈ ಮಧ್ಯೆ ಕೊರೊನಾ ಮೂರನೇ ಅಲೆಯೂ ಎದ್ದಿದೆ..!

ಇದನ್ನೂ ಓದಿ: ‘ದುಡ್ಡು ಕೊಟ್ಟರೆ ಮಾತ್ರ ಬಾಗಿಲು ತೆಗಿತೀನಿ’; ಸಲ್ಮಾನ್​ ಖಾನ್​ ತಮ್ಮನನ್ನೇ ಹೊರಗೆ ನಿಲ್ಲಿಸಿ, ವಾಪಸ್​​ ಕಳಿಸಿದ ಭೂಪ

Gehana Vasisth: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ನಟಿ ಗೆಹನಾಗೆ ಮತ್ತೊಂದು ಸಂಕಷ್ಟ; ಬಂಧನದ ಭೀತಿ

Published On - 4:46 pm, Thu, 12 August 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ