AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರಿಗೆ ಜೀಪ್, ನಾಲಿಗೆಯನ್ನು ಓಡಿಸುವುದು ಹೇಗೆಂದು ಚೆನ್ನಾಗಿ ಗೊತ್ತಿದೆ; ಅಖಿಲೇಶ್ ಯಾದವ್ ವಾಗ್ದಾಳಿ

ಲಖೀಂಪುರ ಘಟನೆಯ ವಿಷಯವನ್ನು ಪ್ರಸ್ತಾಪಿಸಿದ ಅಖಿಲೇಶ್ ಯಾದವ್, ಲಖಿಂಪುರದಲ್ಲಿ ನಡೆದ ಘಟನೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಂತಿದೆ. ಬಿಜೆಪಿಯವರು ಬೆದರಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.

ಬಿಜೆಪಿ ನಾಯಕರಿಗೆ ಜೀಪ್, ನಾಲಿಗೆಯನ್ನು ಓಡಿಸುವುದು ಹೇಗೆಂದು ಚೆನ್ನಾಗಿ ಗೊತ್ತಿದೆ; ಅಖಿಲೇಶ್ ಯಾದವ್ ವಾಗ್ದಾಳಿ
ಅಖಿಲೇಶ್ ಯಾದವ್​
TV9 Web
| Edited By: |

Updated on: Nov 27, 2021 | 7:34 PM

Share

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರಿಗೆ ‘ಜೀಪ್ ಮತ್ತು ಜೀಬ್’ (ನಾಲಿಗೆ) ಓಡಿಸುವುದು ಹೇಗೆಂದು ಚೆನ್ನಾಗಿಯೇ ತಿಳಿದಿದೆ ಎಂದು ಲೇವಡಿ ಮಾಡಿದ್ದಾರೆ. ಸಲ್ಹಿಯಾ ಸಿಂಗ್ ಅರ್ಕವಂಶಿಯ 15ನೇ ಮೂರ್ತಿ ಸ್ಥಾಪನಾ ದಿವಸ್ ಸಂದರ್ಭದಲ್ಲಿ ಮಿತ್ರ ಪಕ್ಷವಾದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವು ಶನಿವಾರ ಆಯೋಜಿಸಿದ್ದ ಹರ್ದೋಯ್‌ನಲ್ಲಿ ನಡೆದ ‘ಭಾಗಿದರಿ ಸಂಕಲ್ಪ ಮೋರ್ಚಾ’ ರ್ಯಾಲಿಯಲ್ಲಿ ಎಸ್‌ಪಿ ಮುಖ್ಯಸ್ಥರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಇಂದಿನ ಜನಸಂದಣಿಯನ್ನು ನೋಡಿದ ನಂತರ ದೆಹಲಿ ಮತ್ತು ಲಕ್ನೋದಲ್ಲಿ ಕುಳಿತಿರುವ ನಾಯಕರು ಕೆಂಪು-ಹಳದಿ ಬಣ್ಣಕ್ಕೆ ತಿರುಗುತ್ತಿದ್ದಾರೆ. ಉತ್ತರ ಪ್ರದೇಶ ಈಗ ಬದಲಾವಣೆಯನ್ನು ಬಯಸುತ್ತಿದೆ. ಸದ್ಯದಲ್ಲೇ ಈಗಿರುವ ಸರ್ಕಾರಕ್ಕೆ ಮುಕ್ತಿ ಸಿಗಲಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಖೇಲಾ ಹೋಯ್ಬೆ ಹಾಡು ಬಹಳ ಫೇಮಸ್ ಆಗಿತ್ತು. ಆ ಹಾಡು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಇದೀಗ ಅದೇ ರೀತಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಖದೇಡಾ ಹೋಯ್ಬೆ ಸಾಲುಗಳನ್ನು ಬಿಜೆಪಿ ವಿರುದ್ಧ ಬಳಸಿಕೊಳ್ಳಲು ಮುಂದಾಗಿದೆ.

ಬಿಜೆಪಿ ಎಲ್ಲರ ಕೆಲಸವನ್ನೂ ಕಸಿದುಕೊಳ್ಳಲಾಗಿದೆ. ಇದೀಗ ಸಂದಿಲದ ಪ್ರಸಿದ್ಧ ಲಡ್ಡುವಿನ ಕೆಲಸವೂ ನಿಂತು ಹೋಗಿದೆ ಎನ್ನಲಾಗುತ್ತಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಜನರು ನಿರುದ್ಯೋಗಿಗಳಾಗಿದ್ದಾರೆ. 2022ರಲ್ಲಿ ಬದಲಾವಣೆ ಆಗಲಿರುವ ಸಂದಿಲದಲ್ಲಿ ಲಡ್ಡುಗಳ ವ್ಯಾಪಾರ ಮತ್ತೊಮ್ಮೆ ಜೋರಾಗಿದೆ. ರೈತರು ತಮ್ಮ ಭತ್ತದ ಉತ್ಪನ್ನಗಳನ್ನು ಮಾರುತ್ತಿದ್ದಾರೆ. ಆದರೆ, ಸರಿಯಾದ ಬೆಲೆ ಸಿಗುತ್ತಿಲ್ಲ. ಕೆಲವು ರೈತರು ತಮ್ಮ ಉತ್ಪನ್ನವನ್ನು ಮಾರುವಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಬೇಸರ ವ್ಯಕ್ತಪಡಿಸಿದ್ದಾರೆ.

ಲಖೀಂಪುರ ಘಟನೆಯ ವಿಷಯವನ್ನು ಪ್ರಸ್ತಾಪಿಸಿದ ಅಖಿಲೇಶ್ ಯಾದವ್, ಲಖಿಂಪುರದಲ್ಲಿ ನಡೆದ ಘಟನೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಂತಿದೆ. ಬಿಜೆಪಿಯವರು ಬೆದರಿಸಿ ರಾಜಕೀಯ ಮಾಡುತ್ತಿದ್ದಾರೆ. ಜಾತಿವಾರು ಜನಗಣತಿಗೆ ಹೆದರುತ್ತಿದ್ದಾರೆ. ಅವರ ಸಂಖ್ಯೆ ಹೇಳಿಕೊಳ್ಳುವಷ್ಟು ಹೆಚ್ಚಿಲ್ಲ. ಈ ಜನರು ‘ಜೀಪ್ ಮತ್ತು ಜೀಬ್’ ಮಾತ್ರ ಓಡಿಸುತ್ತಾರೆ. ಬಿಜೆಪಿಯಿಂದ ವಿದ್ಯುತ್ ಸ್ಥಾವರ ನಿರ್ಮಿಸಲು ಸಾಧ್ಯವಾಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಸ್‌ಬಿಎಸ್‌ಪಿ ಮುಖ್ಯಸ್ಥ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದ ಮಾಜಿ ಸಚಿವ ರಾಜ್‌ಭರ್ ಮಾತನಾಡಿ, ಜನರು ವಿದ್ಯುತ್ ಬಿಲ್‌ಗಳ ಬಗ್ಗೆ ಚಿಂತಿತರಾಗಿದ್ದಾರೆ. ಅಖಿಲೇಶ್ ಮುಖ್ಯಮಂತ್ರಿಯಾದ ತಕ್ಷಣ ಗೃಹಬಳಕೆಯ ವಿದ್ಯುತ್ ಬಿಲ್ ಮನ್ನಾ ಆಗಲಿದೆ. ಇಂದು ಜನರು ಹಣದುಬ್ಬರದ ಬಗ್ಗೆ ಚಿಂತಿತರಾಗಿದ್ದಾರೆ. ಬಿಜೆಪಿಯ ವಿದಾಯ ನಂತರವೇ ಪೆಟ್ರೋಲ್, ಡೀಸೆಲ್ ದರ ಅರ್ಧದಷ್ಟು ಇಳಿಕೆಯಾಗಲಿದೆ ಎಂದಿದ್ದಾರೆ.

ಬಿಜೆಪಿಯವರು ಫೂಲನ್ ದೇವಿಜಿ ಅವರನ್ನು ಅವಮಾನಿಸಿದ್ದಾರೆ. ಫೂಲನ್ ದೇವಿಜಿಯ ಅವಮಾನಕ್ಕೆ ಮತದಾನದ ಮೂಲಕ ಸೇಡು ತೀರಿಸಿಕೊಳ್ಳುತ್ತೇನೆ. ಸರಕಾರ ರಚನೆಯಾದರೆ ಬಡವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ನಾವು ಅಧಿಕಾರಕ್ಕೆ ಬಂದರೆ ಕಾವಲುಗಾರರ ಗೌರವಧನ ಹೆಚ್ಚಿಸಿ ಪೊಲೀಸರ ಕೆಲಸದ ಅವಧಿಯನ್ನು ಎಂಟು ಗಂಟೆಗೆ ನಿಗದಿ ಮಾಡಲಾಗುವುದು. ಪಕ್ಕದ ಜಿಲ್ಲೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಮತ್ತು ರಾಜ್ಯದಲ್ಲಿ ಹಳೆಯ ಪಿಂಚಣಿಯನ್ನು ಮರುಸ್ಥಾಪಿಸಲಾಗುವುದು, ಇದರ ಹೊರತಾಗಿ ಬಡವರಿಗೆ ಪಿಜಿವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ರಾಜ್‌ಭರ್ ಹೇಳಿದ್ದಾರೆ.

ಹಿಂದೂ-ಮುಸ್ಲಿಮರಾಗಿ ಹೋರಾಡುವ ಬದಲು ನಿಮ್ಮ ಹಕ್ಕುಗಳಿಗಾಗಿ ಹೋರಾಡಿ. ಮುಸ್ಲಿಮರಿಂದ ಜನರಿಗೆ ಯಾವುದೇ ಬೆದರಿಕೆ ಇಲ್ಲ. ಬದಲಿಗೆ, ಯೋಗಿ-ಮೋದಿ ಅವರ ಕುರ್ಚಿ ಅಪಾಯದಲ್ಲಿದೆ. ರೈಲ್ವೇ, ಎಲ್‌ಐಸಿ, ಬಿಎಸ್‌ಎನ್‌ಎಲ್ ಎಲ್ಲವೂ ಮಾರಾಟವಾಯಿತು. ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ನಿಮ್ಮ ನೆರೆಹೊರೆಯವರಿಗೂ ಹೇಳಿ. ಆರ್‌ಎಸ್‌ಎಸ್‌ನವರು ಬಂದು ನಿಮ್ಮನ್ನು ಪ್ರಚೋದಿಸುತ್ತಾರೆ. ಆದರೆ 2022ರ ಚುನಾವಣೆ ನಿಮ್ಮೆಲ್ಲರಿಗೂ ಮಾಡು ಇಲ್ಲವೇ ಮಡಿ ಇದ್ದಂತೆ ಎಂದಿದ್ದಾರೆ.

ಇದನ್ನೂ ಓದಿ: MPI: ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ದೇಶದ ಅತ್ಯಂತ ಬಡ ರಾಜ್ಯಗಳು; ಕರ್ನಾಟಕಕ್ಕೆ ಎಷ್ಟನೇ ಸ್ಥಾನ? ಇಲ್ಲಿದೆ ಮಾಹಿತಿ

40,000ಕ್ಕೂ ಹೆಚ್ಚು ತಮಿಳು ಬ್ರಾಹ್ಮಣರಿಗೆ ಸಿಗುತ್ತಿಲ್ಲ ವಧು; ಉತ್ತರ ಪ್ರದೇಶ, ಬಿಹಾರಕ್ಕೂ ವ್ಯಾಪಿಸಿದ ವಧು ಅನ್ವೇಷಣೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್