AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ

ಚೌಧರಿ ಅವರು ಪಶ್ಚಿಮ ಯುಪಿಯ ಜಾಟ್ ಸಮುದಾಯದವರಾಗಿದ್ದು, 2024ರ ಲೋಕಸಭೆ ಚುನಾವಣೆಗೆ ಜಾಟ್ ಮತಗಳನ್ನು ಕ್ರೋಢೀಕರಿಸಲು ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ
ಭೂಪೇಂದ್ರ ಸಿಂಗ್ ಚೌಧರಿ ನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 3:54 PM

Share

ದೆಹಲಿ: ಬಿಜೆಪಿ ಇಂದು ವಿವಿಧ ರಾಜ್ಯಗಳಲ್ಲಿ ಹಲವು ಉನ್ನತ ಮಟ್ಟದ ನೇಮಕಾತಿಗಳನ್ನು ಪ್ರಕಟಿಸಿದೆ. ಈ ಪೈಕಿ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವ ಮತ್ತು ವಿಧಾನ ಪರಿಷತ್ತಿನ ಸದಸ್ಯರಾಗಿರುವ ಭೂಪೇಂದ್ರ ಸಿಂಗ್ ಚೌಧರಿ (Bhupendra Singh Chaudhary) ಅವರನ್ನು ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಚೌಧರಿ ಅವರು ಪಶ್ಚಿಮ ಯುಪಿಯ ಜಾಟ್ ಸಮುದಾಯದವರಾಗಿದ್ದು, 2024ರ ಲೋಕಸಭೆ ಚುನಾವಣೆಗೆ ಜಾಟ್ ಮತಗಳನ್ನು ಕ್ರೋಢೀಕರಿಸಲು ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಯುಪಿ ಒಬಿಸಿ ನಾಯಕ ಸ್ವತಂತ್ರ ದೇವ್ ಸಿಂಗ್ ಅವರ ಸ್ಥಾನಕ್ಕೆ ಈಗ ರಾಜ್ಯ ಕ್ಯಾಬಿನೆಟ್‌ನಲ್ಲಿ ಪಂಚಾಯತ್ ರಾಜ್ ಸಚಿವರಾದ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.

ತ್ರಿಪುರಾ ಬಿಜೆಪಿ ಅಧ್ಯಕ್ಷರಾಗಿ ರಾಜೀವ್ ಭಟ್ಟಾಚಾರ್ಯ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸೌದನ್ ಸಿಂಗ್ ಅವರನ್ನು ಹಿಮಾಚಲ ಪ್ರದೇಶದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ದೇವೇಂದ್ರ ಸಿಂಗ್ ರಾಣಾ ಅವರನ್ನು ಹಿಮಾಚಲ ಪ್ರದೇಶದ ಜಂಟಿ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ.

Published On - 3:44 pm, Thu, 25 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ