AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat BJP: ಭರೂಚ್ ಸ್ಥಳೀಯ ಪಾಲಿಕೆ ಚುನಾವಣೆ; ಅತಿ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿದ ಬಿಜೆಪಿ

ಸ್ಥಳೀಯ ನಾಯಕರ ಪಕ್ಷಾಂತರ, ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿದ ಕಮಲ, ಅಸಾದುದ್ದೀನ್ ಓವೈಸಿಯ ಎಐಎಂಐಎಂ ಪಕ್ಷದ ಸ್ಪರ್ಧೆ ಮತ್ತು ಹಿರಿಯ ಕಾಂಗ್ರೆಸ್ ನಾಯಕನ ನಿಧನ ಭರೂಚ್​ನಲ್ಲಿ ತರಲಿರುವ ಬದಲಾವಣೆಗಳನ್ನು ಕಾದುನೋಡಬೇಕಿದೆ.

Gujarat BJP: ಭರೂಚ್ ಸ್ಥಳೀಯ ಪಾಲಿಕೆ ಚುನಾವಣೆ; ಅತಿ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿದ ಬಿಜೆಪಿ
ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸಹ ಮೊದಲ ಬಾರಿಗೆ ಭರೂಚ್​ ಸ್ಥಳೀಯ ಪಾಲಿಕೆಗಳಿಗೆ ಸ್ಪರ್ಧಿಸಿದ್ದು, ಕಾಂಗ್ರೆಸ್, ಬಿಜೆಪಿಗಳಿಗೆ ಹೊಸ ತಲೆನೋವು ಎದುರಾಗಿದೆ.
Follow us
guruganesh bhat
|

Updated on:Feb 12, 2021 | 11:31 AM

ಭರೂಚ್: ಮುಸ್ಲಿಂ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ನಿಧಾನವಾಗಿ ಆಗಾಗ ಒಂದಿಲ್ಲೊಂದು ಪ್ರಯತ್ನಗಳನ್ನು ಮಾಡುತ್ತಲೇ ಬರುತ್ತಿದೆ. ಇದೀಗ ಗುಜರಾತ್​ನ ಭರೂಚ್​ ಜಿಲ್ಲೆಯ ಪಾಲಿಕೆ ಚುನಾವಣೆಯಲ್ಲಿ ಒಟ್ಟು 31 ಮುಸ್ಲಿಂ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. 9 ತಾಲೂಕಾ ಪಂಚಾಯತ್, 4 ನಗರ ಪಾಲಿಕೆ, ಭರೂಚ್ ಜಿಲ್ಲಾ ಪಂಚಾಯತ್​ಗಳಿಗೆ ಫೆಬ್ರವರಿ 28ರಂದು ಚುನಾವಣೆ ನಡೆಯಲಿದ್ದು, ಒಟ್ಟು 320 ಸ್ಥಾನಗಳಿಗೆ ಬಿಜೆಪಿ ಒಟ್ಟು 31 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕಿದೆ. 31 ಅಭ್ಯರ್ಥಿಗಳ ಪೈಕಿ 17 ಅಭ್ಯರ್ಥಿಗಳು ಮಹಿಳೆಯರೇ ಆಗಿದ್ದಾರೆ ಎಂಬುದು ಸಹ ಮಹತ್ವ ಪಡೆದಿದೆ. ಹಲವು ಕಾರಣಗಳಿಂದಾಗಿ ದಕ್ಷಿಣ ಗುಜರಾತ್​ನ ಸ್ಥಳೀಯ ಆಡಳಿಗಳಿಗೆ ನಡೆಯುತ್ತಿರುವ ಚುನಾವಣೆ ದೇಶದ ಗಮನ ಸೆಳೆಯುತ್ತಿದೆ.

ಈ ಅಭ್ಯರ್ಥಿಗಳಲ್ಲಿ ಬಹುತೇಕರು ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಬಂದವರೇ ಆಗಿದ್ದು, ಭರೂಚ್​ನಲ್ಲಿ ಈ ಬಾರಿ ಇದುವರೆಗಿನ ಚುನಾವಣೆಗಿಂತ ಅತಿ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಾರುತಿಸಿನ್ಹ್ ಅತೋದರಿಯಾ ತಿಳಿಸಿದ್ದಾರೆ. ಕೆಲ ತಿಂಗಳಿಂದ ಕಾಂಗ್ರೆಸ್​ನಿಂದ ಬಿಜೆಪಿಗೆ ತಮ್ಮ ಬೆಂಬಲಿಗರ ಜತೆ ಹಲವು ಕಾಂಗ್ರೆಸ್ ಸ್ಥಳೀಯ ನಾಯಕರು ಸೇರ್ಪಡೆಗೊಂಡಿದ್ದಾರೆ. ಈ ಪಕ್ಷಾಂತರದ ಲಾಭವನ್ನು ಪಡೆಯಲು ಬಿಜೆಪಿಯು ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಸಹಜವಾಗಿಯೇ ಮಣೆ ಹಾಕಿದೆ.

ಮತದಾರರು ಯಾರು? ಭರೂಚ್​ನಲ್ಲಿ ಮುಸ್ಲಿಂ ಸಮುದಾಯದ ಮತಗಳು ಹೆಚ್ಚಿದ್ದು, ಜತೆಗೆ ಬುಡಕಟ್ಟು ಸಮುದಾಯದ ಮತಗಳು ಸಹ ಈ ಹಿಂದಿನ ಚುನಾವಣೆಗಳಲ್ಲಿ ತಮ್ಮ ಪ್ರಾಬಲ್ಯ ಮೆರೆದಿದೆ. ಸ್ಥಳೀಯ ಪಾಲಿಕೆಗಳನ್ನು ಗೆಲ್ಲಲು ಮುಸ್ಲಿಂ ಮತಗಳು ಅನಿವಾರ್ಯ ಎಂಬುದನ್ನು ಮನಗಂಡಿರುವ ಬಿಜೆಪಿ ಸಹಜವಾಗಿಯೇ ಈಬಾರಿ ಈ ಸಮುದಾಯಕ್ಕೆ ಒತ್ತು ನೀಡಿದೆ.

ASADUDDIN OWAISI

ಭರೂಚ್​ನ ಸಾಂಪ್ರದಾಯಿಕ ಮತಗಳನ್ನು ಅನಾಯಾಸವಾಗಿ ಒಲಿಸಿಕೊಳ್ಳುವತ್ತ ಹೆಜ್ಜೆಯಿಟ್ಟಿದ್ದಾರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ

ಕಣಕ್ಕಿಳಿಯಲಿದೆ ಎಐಎಂಐಎಂ ಅಲ್ಲದೇ ಈ ವರ್ಷ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸಹ ಮೊದಲ ಬಾರಿಗೆ ಭರೂಚ್​ ಸ್ಥಳೀಯ ಪಾಲಿಕೆಗಳಿಗೆ ಸ್ಪರ್ಧಿಸಿದ್ದು, ಕಾಂಗ್ರೆಸ್, ಬಿಜೆಪಿಗಳಿಗೆ ಹೊಸ ತಲೆನೋವು ಎದುರಾಗಿದೆ. ಸಾಂಪ್ರದಾಯಿಕ ಮುಸ್ಲಿಂ ಮತಗಳನ್ನು ನಿರಾಯಾಸವಾಗಿ ಸೆಳೆಯುವ ಶಕ್ತಿಯಿರುವ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಈವರೆಗೆ ಅಧಿಕಾರ ಹೊಂದಿದ್ದ ಕಾಂಗ್ರೆಸ್​ಗೆ ಮುಳುವಾಗಲಿರುವ ಸಾಧ್ಯತೆಯೇ ಹೆಚ್ಚಿದೆ ಎಂದು ಭರೂಚ್​ನ ಚುನಾವಣಾ ಅಂಗಳದಿಂದ ಕೇಳಿಬರುತ್ತಿದೆ. ಭರೂಚ್​ನ್ನು ಲೋಕಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದ ಕಾಂಗ್ರೆಸ್​​ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನರಾಗಿದ್ದು ಕಾಂಗ್ರೆಸ್ ಕೈಯನ್ನು ಕಟ್ಟಿಹಾಕಿದಂತಾಗಿದೆ. ಅವರ ಅನುಪಸ್ಥಿತಿ ಕಾಂಗ್ರೆಸ್​ಗೆ ಪೆಟ್ಟು ನೀಡುವ ಸಾಧ್ಯತೆಯನ್ನು ಕಾಂಗ್ರೆಸ್ಸಿಗರೇ ಒಪ್ಪಿಕೊಳ್ಳುತ್ತಾರೆ.

AHMAD PATEL AND SONIA GANDHI

ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ನಿಧನ ಭರೂಚ್​ನಲ್ಲಿ ಕಾಂಗ್ರೆಸ್​ಗೆ ಮುಳುವಾಗಲಿದೆ.

ಸ್ಥಳೀಯ ನಾಯಕರ ಪಕ್ಷಾಂತರ, ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿದ ಕಮಲ, ಅಸಾದುದ್ದೀನ್ ಓವೈಸಿಯ ಎಐಎಂಐಎಂ ಪಕ್ಷದ ಸ್ಪರ್ಧೆ ಮತ್ತು ಹಿರಿಯ ಕಾಂಗ್ರೆಸ್ ನಾಯಕನ ನಿಧನ ಭರೂಚ್​ನಲ್ಲಿ ತರಲಿರುವ ಬದಲಾವಣೆಗಳನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

Published On - 11:18 am, Fri, 12 February 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ