AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ಅತ್ಯಾಚಾರ-ಕೊಲೆ ಅಪರಾಧದ ಸ್ಥಳ ಬಳಿ ನವೀಕರಣಕ್ಕೆ ಸಂದೀಪ್ ಘೋಷ್ ಆದೇಶ?; ಪತ್ರ ಟ್ವೀಟ್ ಮಾಡಿದ ಬಿಜೆಪಿ

ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ನಿರ್ದೇಶಕ ಸಂದೀಪ್ ಘೋಷ್ ಅವರು ಸಹಿ ಮಾಡಿದ ಆದೇಶದಲ್ಲಿರುವ ದಿನಾಂಕ ಆಗಸ್ಟ್ 10 ಆಗಿದೆ. ಅಂದರೆ ವೈದ್ಯೆಯ ಕೊಲೆ ನಡೆದ ಮರುದಿನ ಸಹೋದ್ಯೋಗಿಗಳು ಮತ್ತು ಪ್ರತಿಭಟನಾಕಾರರು ಅಪರಾಧದ ಸ್ಥಳವನ್ನು ಹಾಳುಮಾಡುವ ಬಗ್ಗೆ ಆರೋಪಿಸಿದರೂ, ಪೊಲೀಸ್ ಕಮಿಷನರ್ ಅದನ್ನು ನಿರಾಕರಿಸಿದರು ಎಂದು ಮಜುಂದಾರ್ ಎಕ್ಸ್​​​ನಲ್ಲಿ ಬರೆದಿದ್ದಾರೆ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಅಪರಾಧದ ಸ್ಥಳ ಬಳಿ ನವೀಕರಣಕ್ಕೆ ಸಂದೀಪ್ ಘೋಷ್ ಆದೇಶ?; ಪತ್ರ ಟ್ವೀಟ್ ಮಾಡಿದ ಬಿಜೆಪಿ
ಸಂದೀಪ್ ಘೋಷ್
ರಶ್ಮಿ ಕಲ್ಲಕಟ್ಟ
|

Updated on: Sep 05, 2024 | 5:09 PM

Share

ದೆಹಲಿ ಸೆಪ್ಟೆಂಬರ್ 05: ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ (Kolkata’s RG Kar Medical College and Hospital) ವೈದ್ಯೆಯ ಅತ್ಯಾಚಾರ-ಕೊಲೆಯಾದ ನಂತರ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಅವರು ಸೆಮಿನಾರ್ ಹಾಲ್ ಬಳಿ ನವೀಕರಣಕ್ಕೆ ಆದೇಶ ನೀಡಿದ್ದರು ಎಂದು ಬಂಗಾಳ ಬಿಜೆಪಿ (BJP) ಮುಖ್ಯಸ್ಥ ಸುಕಾಂತ ಮಜುಂದಾರ್ ಗುರುವಾರ ಆರೋಪಿಸಿದ್ದಾರೆ. ನವೀಕರಣಕ್ಕೆ ಆದೇಶಿಸಿರುವ ಸಂದೀಪ್ ಘೋಷ್ ಅವರು ಸಹಿ ಮಾಡಿದ  ಪತ್ರವನ್ನು ಮಜುಂದಾರ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

“ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ನಿರ್ದೇಶಕ ಸಂದೀಪ್ ಘೋಷ್ ಅವರು ಸಹಿ ಮಾಡಿದ ಆದೇಶದಲ್ಲಿರುವ ದಿನಾಂಕ ಆಗಸ್ಟ್ 10 ಆಗಿದೆ. ಅಂದರೆ ವೈದ್ಯೆಯ ಕೊಲೆ ನಡೆದ ಮರುದಿನ ಸಹೋದ್ಯೋಗಿಗಳು ಮತ್ತು ಪ್ರತಿಭಟನಾಕಾರರು ಅಪರಾಧದ ಸ್ಥಳವನ್ನು ಹಾಳುಮಾಡುವ ಬಗ್ಗೆ ಆರೋಪಿಸಿದರೂ, ಪೊಲೀಸ್ ಕಮಿಷನರ್ ಅದನ್ನು ನಿರಾಕರಿಸಿದರು ಎಂದು ಮಜುಂದಾರ್ ಎಕ್ಸ್​​​ನಲ್ಲಿ ಬರೆದಿದ್ದಾರೆ.  ಸಂದೀಪ್ ಘೋಷ್ ಅವರು ಕೋಲ್ಕತ್ತಾದ PWD ಯ ಹಲವಾರು ವಿಭಾಗಗಳ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೆ ಬರೆದ ಮೆಮೊದಲ್ಲಿ ಶೌಚಾಲಯಗಳನ್ನು ಸರಿಪಡಿಸಲು ಬಯಸಿದ್ದಾರೆ.

ಸುಕಾಂತ  ಮಜುಂದಾರ್ ಟ್ವೀಟ್

ಕೋಲ್ಕತ್ತಾದ ಆರ್‌ಜಿಕೆಎಂಸಿ ಮತ್ತು ಎಚ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರತ ವೈದ್ಯರ ಕೊಠಡಿಗಳು ಮತ್ತು  ಶೌಚಾಲಯಗಳ ಕೊರತೆಗಳಿವೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಇಂದು ಪಶ್ಚಿಮ ಬಂಗಾಳ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಪತ್ರದಲ್ಲಿದೆ.

ನವೀಕರಣ ಕಾರ್ಯವು ಬೆಳಕಿಗೆ ಬಂದ ನಂತರ, ಬಿಜೆಪಿ ನೇತೃತ್ವದ ಪ್ರತಿಪಕ್ಷಗಳು ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯವನ್ನು ಹಾಳುಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದವು.

ವೈದ್ಯೆಯ ಹತ್ಯೆಯ ನಂತರ ಘೋಷ್ ಅವರ ಪಾತ್ರವನ್ನು ಪ್ರಶ್ನಿಸಲಾಗಿದೆ.  ವೈದ್ಯೆಯ ಕೊಲೆಯಾದ ನಂತರ ಸಂತ್ರಸ್ತೆಯ ಕುಟುಂಬಕ್ಕೆ ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದರು. ಮಗಳ ಶವವನ್ನು ನೋಡಲು ಮೂರು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ.

ಇದನ್ನೂ ಓದಿ: Arvind Kejriwal bail: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಹತ್ಯೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡುತ್ತಿರುವ ಬಗ್ಗೆಯೂ ಸುಪ್ರೀಂಕೋರ್ಟ್‌ ಬಂಗಾಳ ಸರ್ಕಾರವನ್ನು ಪ್ರಶ್ನಿಸಿತ್ತು. ಸಂದೀಪ್ ಘೋಷ್ ಅವರನ್ನು ಸಿಬಿಐ ಈ ವಾರದ ಆರಂಭದಲ್ಲಿ ಶವಗಳನ್ನು ಮಾರಾಟ ಮಾಡುವುದು ಸೇರಿದಂತೆ ಹಣಕಾಸಿನ ಅಕ್ರಮಗಳ ಆರೋಪದ ಮೇಲೆ ಬಂಧಿಸಿತ್ತು.

ಸೆಮಿನಾರ್ ಹಾಲ್‌ನಲ್ಲಿ ತನ್ನ 36 ಗಂಟೆಗಳ ಸುದೀರ್ಘ ಶಿಫ್ಟ್ ನಡುವೆ ಮಲಗಿದ್ದಾಗ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ.ಅಪರಾಧಕ್ಕಾಗಿ ಸಂಜಯ್ ರಾಯ್ ಎಂಬ ನಾಗರಿಕ ಸ್ವಯಂಸೇವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ