AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಕೆ. ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ನೇಮಮ್ ನಿಂದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿದೆ. ಏಪ್ರಿಲ್ 9ರಂದು ಕೇರಳದ ಎಲ್ಲಾ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿಯ ಅಭ್ಯರ್ಥಿಗಳ ಪೂರ್ತಿ ಪಟ್ಟಿ ಇಲ್ಲಿದೆ.

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ
Rajeev Chandrasekhar
ಸುಷ್ಮಾ ಚಕ್ರೆ
|

Updated on: Mar 16, 2026 | 10:15 PM

Share

ನವದೆಹಲಿ, ಮಾರ್ಚ್ 16: ಕೇರಳಂ (ಕೇರಳ) ಚುನಾವಣೆಗೆ (Kerala Assembly Elections ) ಬಿಜೆಪಿ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹಲವಾರು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಒಬ್ಬರು. ಅವರು ನೇಮಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಸ್ಥಾನವು ಬಿಜೆಪಿ ಮತ್ತು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್​​ವಾದಿ) (ಸಿಪಿಐಎಂ) ನಡುವೆ ನೇರ ಸ್ಪರ್ಧೆಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

ಸಿಪಿಐಎಂ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವ ನಿರೀಕ್ಷೆಯಿರುವ ಕಜಕ್ಕೊಟ್ಟಂ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಅವರನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ ನಾಯಕ ಕೆ. ಸುರೇಂದ್ರನ್ ಮಂಜೇಶ್ವರದಿಂದ ಸ್ಪರ್ಧಿಸಲಿದ್ದಾರೆ. ಅಲ್ಲಿ ಬಿಜೆಪಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ನಡುವೆ ನೇರ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

ಹಿರಿಯ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಅವರನ್ನು ಪಾಲಕ್ಕಾಡ್‌ನಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಮುಖ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ವಟ್ಟಿಯೂರ್ಕಾವುದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಆರ್. ಶ್ರೀಲೇಖಾ ಅವರನ್ನು ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರವು ಸಿಪಿಐಎಂ, ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಒಳಗೊಂಡ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

2024ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಿದ್ದ ನವ್ಯಾ ಹರಿದಾಸ್ ಅವರಿಗೆ ಈ ಬಾರಿ ಬಿಜೆಪಿ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಿದೆ. ನವ್ಯಾ ಹರಿದಾಸ್ ಕೋಝಿಕ್ಕೋಡ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ನ ಮಾಜಿ ಹಿರಿಯ ಕೆ. ಕರುಣಾಕರನ್ ಅವರ ಪುತ್ರಿ ಮತ್ತು ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಅವರ ಸಹೋದರಿಯಾದ ಪದ್ಮಜಾ ವೇಣುಗೋಪಾಲ್ ಅವರನ್ನು ತ್ರಿಶೂರ್ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.

ಇತ್ತೀಚೆಗೆ ಕೇರಳಂ ಎಂದು ಮರುನಾಮಕರಣಗೊಂಡಿರುವ ಕೇರಳದಲ್ಲಿ ಏಪ್ರಿಲ್ 9ರಂದು 140 ಕ್ಷೇತ್ರಗಳ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?