AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ‘ನಿಜವಾದ ಭಾರತೀಯ‘ನನ್ನು ರಕ್ಷಿಸುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ: ಬಿಜೆಪಿ

BJP Manifesto in Assam: ಅಸ್ಸಾಂನಲ್ಲಿ ಹರಿಯುವ ನದಿಗಳಿಗೆ ಬೃಹತ್ ಆಣೆಕಟ್ಟುಗಳನ್ನು ಕಟ್ಟಿ ಹೆಚ್ಚು ಪ್ರಮಾಣದ ನೀರನ್ನು ಬಳಸಿಕೊಳ್ಳಲಾಗುವುದು. ಪ್ರವಾಹ ಪರಿಸ್ಥಿತಿ ಉದ್ಭವವಾಗದಂತೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು.

Assam Assembly Elections 2021: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ‘ನಿಜವಾದ ಭಾರತೀಯ‘ನನ್ನು ರಕ್ಷಿಸುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ: ಬಿಜೆಪಿ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ
guruganesh bhat
|

Updated on: Mar 23, 2021 | 1:59 PM

Share

ಗುವಾಹಟಿ: ಇನ್ನೇನು ವಿಧಾನಸಭಾ ಚುನಾವಣೆಗೆ ನಾಲ್ಕೇ ದಿನ ಇದೆ ಎನ್ನುವಾಗ ಬಿಜೆಪಿ ಅಸ್ಸಾಂನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗುವಾಹಟಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಜತೆಗೆ ಪ್ರಚಾರ ಸಭೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ‘ನಿಜವಾದ ಭಾರತೀಯ’ನನ್ನು ರಕ್ಷಿಸುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ. ಈ ಕಾನೂನಿನ ಮೂಲಕ ನಿಜವಾದ ಭಾರತೀಯ ನಾಗರಿಕರನ್ನು ರಕ್ಷಣೆ ಮಾಡುತ್ತೇವೆ. ಗಡಿ ನುಸುಳುವಿಕೆಯನ್ನು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ ಎಂದು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಭರವಸೆ ನೀಡಿದೆ. ಅಸ್ಸಾಂ ರಾಜ್ಯದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕೆಲಸಗಳನ್ನೂ ಈಡೇರಿಸುತ್ತೇವೆ. ಮಹಿಳಾ ಸಬಲೀಕರಣ, ಸಂಪರ್ಕ ವ್ಯವಸ್ಥೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಬದಲಾವಣೆ ತರುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.  

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು ಮಿಶನ್ ಬ್ರಹ್ಮಪುತ್ರಾ: ಅಸ್ಸಾಂನಲ್ಲಿ ಹರಿಯುವ ನದಿಗಳಿಗೆ ಬೃಹತ್ ಆಣೆಕಟ್ಟುಗಳನ್ನು ಕಟ್ಟಿ ಹೆಚ್ಚು ಪ್ರಮಾಣದ ನೀರನ್ನು ಬಳಸಿಕೊಳ್ಳಲಾಗುವುದು. ಪ್ರವಾಹ ಪರಿಸ್ಥಿತಿ ಉದ್ಭವವಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು.

ಮಹಿಳೆಯರಿಗೆ ವಿಶೇಷ ಆರ್ಥಿಕ ಪ್ರಾತಿನಿಧ್ಯ ಒದಗಿಸುವ ಒರುನೋದಯ್ ಯೋಜನೆ: ಈ ಯೋಜನೆಯನ್ನು ಬಿಜೆಪಿ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡೇ ರೂಪಿಸಿದೆ. ಅಸ್ಸಾಂನ 30 ಲಕ್ಷ ಅರ್ಹ ಕುಟುಂಬಗಳಿಗೆ ಪ್ರತಿ ತಿಂಗಳು 3 ಸಾವಿರದವರೆಗೆ ಹಣ ನೀಡಲಾಗುವುದು.

ನಾಮ್​ಘರ್ ಎಂದು ಕರೆಯಲ್ಪಡುವ ಅಸ್ಸಾಮಿನ ಸಾಂಪ್ರದಾಯಿಕ ಶೈಲಿಯ ದೇಗುಲಗಳನ್ನು ಮರು ನಿರ್ಮಾಣ ಮಾಡಲು ₹ 2.50 ಲಕ್ಷ ಅನುದಾನ ಒದಗಿಸಲಾಗುವುದು.

ಮಿಶನ್ ಶಿಶು ಯೋಜನೆ: ಮಕ್ಕಳಿಗೆ ಶಿಕ್ಷಣ ಒದಗಿಸಲು ವಿಶೇಷ ಒತ್ತು ನೀಡಲಾಗುವುದು. ಅಲ್ಲದೇ 8 ನೇ ತರಗತಿಯಿಂದ ವಿದ್ಯಾರ್ಥಿನಿಯರಿಗೆ ಸೈಕಲ್ ಕೊಡಲಾಗುವುದು. ಸಮರ್ಪಕವಾದ, ನಿಜವಾದ ಭಾರತೀಯರಿಗೆ ರಕ್ಷಣೆ ಒದಗಿಸುವ ಪೌರತ್ವದ ನೋಂದಣಿ ಕಾಯ್ದೆಯನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿ ಭರವಸೆ ನೀಡಿದೆ.

ಬಿಜೆಪಿ ಪ್ರಣಾಳಿಕೆಯ ಗುರಿಯೇನು?

ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ  ನಡೆಯುತ್ತಿದ್ದು ಮೊದಲ ಹಂತದ  ಚುನಾವಣೆ ಮಾರ್ಚ್ 27ರಂದು ನಡೆಯಲಿದೆ. ಏಪ್ರಿಲ್ 1 ಮತ್ತು ಏಪ್ರಿಲ್ 5ರಂದು ಎರಡು, ಮೂರನೇ  ಹಂತದ ಚುನಾವಣೆ ನಡೆಯಲಿದೆ.  ಎಲ್ಲ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದು ಬಿಜೆಪಿ,  ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ಟೀಕಾಪ್ರಹಾರ ಮಾಡುತ್ತಲೇ ಇದೆ. ಕಾಂಗ್ರೆಸ್ ಪಕ್ಷವು ಎಐಯುಡಿಎಫ್ (AIDUF) ಜತೆ ಮೈತ್ರಿ ಮಾಡಿಕೊಂಡಿರುವುದನ್ನೇ ಪ್ರಧಾನ ವಿಷಯವಾಗಿರಿಸಿಕೊಂಡು ಎಐಯುಡಿಎಫ್  ನಾಯಕ  ಅಜ್ಮಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.

ಒರುನೋದಯ್  22 ಲಕ್ಷ ಮಹಿಳೆಯರಿಗೆ ನೇರವಾಗಿ  ಪ್ರಯೋಜನ ನೀಡುತ್ತಿದೆ.  ಕಳೆದ 6 ತಿಂಗಳಿನಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 830 ರೂಪಾಯಿ ಜಮೆ ಆಗುತ್ತಿದೆ. ಇದರ ಜತೆ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುತ್ತಿರುವ ಬಗ್ಗೆ ನನಗೆ ಸಂತೃಪ್ತಿ ಇದೆ. ಪ್ರತಿ ವರ್ಷ ಪದವಿಪೂರ್ವ ಶಿಕ್ಷಣದವರೆಗೆ ನಾಲ್ಕು ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ಉಚಿತ ಪಠ್ಯ ಪುಸ್ತಕ ಸಿಗುತ್ತದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಖರೀದಿಸಲು ಹಣ ನೀಡಲಾಗುತ್ತದೆ. ಈ ಯೋಜನೆಯಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ಜತೆಗೆ ಆರೋಗ್ಯ ವಲಯದಲ್ಲಿರುವ ಆಯುಷ್ಮಾನ್ ಭಾರತ್, ಅಟಲ್ ಅಮೃತ್ ಅಭಿಜನ್ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದವರಿಗೆ ಹೆಚ್ಜಿನ ಸಹಾಯವನ್ನು ನೀಡಿದೆ ಎಂದು ಬಿಜೆಪಿಯ ಅಸ್ಸಾಂ ಘಟಕದ  ನಾಯಕ  ಹಿಮಾಂತ ಬಿಸ್ವ ಶರ್ಮಾ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Assam Assembly Elections 2021: ಅಸ್ಸಾಂನ ಗೌರವ ಕುಗ್ಗಿಸುವವರಿಗೆ ಮತ ಹಾಕುವಿರೇ?; ಪ್ರಧಾನಿ ಮೋದಿ ಪ್ರಶ್ನೆ

Assam Assembly Elections 2021: ಅಸ್ಸಾಂನಲ್ಲಿ ‘5 ಗ್ಯಾರಂಟಿ’ ಯಾತ್ರೆಗೆ ಚಾಲನೆ ನೀಡಿದ ಕಾಂಗ್ರೆಸ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?