AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Elections 2021: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ‘ನಿಜವಾದ ಭಾರತೀಯ‘ನನ್ನು ರಕ್ಷಿಸುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ: ಬಿಜೆಪಿ

BJP Manifesto in Assam: ಅಸ್ಸಾಂನಲ್ಲಿ ಹರಿಯುವ ನದಿಗಳಿಗೆ ಬೃಹತ್ ಆಣೆಕಟ್ಟುಗಳನ್ನು ಕಟ್ಟಿ ಹೆಚ್ಚು ಪ್ರಮಾಣದ ನೀರನ್ನು ಬಳಸಿಕೊಳ್ಳಲಾಗುವುದು. ಪ್ರವಾಹ ಪರಿಸ್ಥಿತಿ ಉದ್ಭವವಾಗದಂತೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು.

Assam Assembly Elections 2021: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ‘ನಿಜವಾದ ಭಾರತೀಯ‘ನನ್ನು ರಕ್ಷಿಸುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ: ಬಿಜೆಪಿ
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ
guruganesh bhat
|

Updated on: Mar 23, 2021 | 1:59 PM

Share

ಗುವಾಹಟಿ: ಇನ್ನೇನು ವಿಧಾನಸಭಾ ಚುನಾವಣೆಗೆ ನಾಲ್ಕೇ ದಿನ ಇದೆ ಎನ್ನುವಾಗ ಬಿಜೆಪಿ ಅಸ್ಸಾಂನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗುವಾಹಟಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಜತೆಗೆ ಪ್ರಚಾರ ಸಭೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ‘ನಿಜವಾದ ಭಾರತೀಯ’ನನ್ನು ರಕ್ಷಿಸುವ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ. ಈ ಕಾನೂನಿನ ಮೂಲಕ ನಿಜವಾದ ಭಾರತೀಯ ನಾಗರಿಕರನ್ನು ರಕ್ಷಣೆ ಮಾಡುತ್ತೇವೆ. ಗಡಿ ನುಸುಳುವಿಕೆಯನ್ನು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುತ್ತೇವೆ ಎಂದು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಭರವಸೆ ನೀಡಿದೆ. ಅಸ್ಸಾಂ ರಾಜ್ಯದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕೆಲಸಗಳನ್ನೂ ಈಡೇರಿಸುತ್ತೇವೆ. ಮಹಿಳಾ ಸಬಲೀಕರಣ, ಸಂಪರ್ಕ ವ್ಯವಸ್ಥೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಬದಲಾವಣೆ ತರುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.  

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು ಮಿಶನ್ ಬ್ರಹ್ಮಪುತ್ರಾ: ಅಸ್ಸಾಂನಲ್ಲಿ ಹರಿಯುವ ನದಿಗಳಿಗೆ ಬೃಹತ್ ಆಣೆಕಟ್ಟುಗಳನ್ನು ಕಟ್ಟಿ ಹೆಚ್ಚು ಪ್ರಮಾಣದ ನೀರನ್ನು ಬಳಸಿಕೊಳ್ಳಲಾಗುವುದು. ಪ್ರವಾಹ ಪರಿಸ್ಥಿತಿ ಉದ್ಭವವಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು.

ಮಹಿಳೆಯರಿಗೆ ವಿಶೇಷ ಆರ್ಥಿಕ ಪ್ರಾತಿನಿಧ್ಯ ಒದಗಿಸುವ ಒರುನೋದಯ್ ಯೋಜನೆ: ಈ ಯೋಜನೆಯನ್ನು ಬಿಜೆಪಿ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡೇ ರೂಪಿಸಿದೆ. ಅಸ್ಸಾಂನ 30 ಲಕ್ಷ ಅರ್ಹ ಕುಟುಂಬಗಳಿಗೆ ಪ್ರತಿ ತಿಂಗಳು 3 ಸಾವಿರದವರೆಗೆ ಹಣ ನೀಡಲಾಗುವುದು.

ನಾಮ್​ಘರ್ ಎಂದು ಕರೆಯಲ್ಪಡುವ ಅಸ್ಸಾಮಿನ ಸಾಂಪ್ರದಾಯಿಕ ಶೈಲಿಯ ದೇಗುಲಗಳನ್ನು ಮರು ನಿರ್ಮಾಣ ಮಾಡಲು ₹ 2.50 ಲಕ್ಷ ಅನುದಾನ ಒದಗಿಸಲಾಗುವುದು.

ಮಿಶನ್ ಶಿಶು ಯೋಜನೆ: ಮಕ್ಕಳಿಗೆ ಶಿಕ್ಷಣ ಒದಗಿಸಲು ವಿಶೇಷ ಒತ್ತು ನೀಡಲಾಗುವುದು. ಅಲ್ಲದೇ 8 ನೇ ತರಗತಿಯಿಂದ ವಿದ್ಯಾರ್ಥಿನಿಯರಿಗೆ ಸೈಕಲ್ ಕೊಡಲಾಗುವುದು. ಸಮರ್ಪಕವಾದ, ನಿಜವಾದ ಭಾರತೀಯರಿಗೆ ರಕ್ಷಣೆ ಒದಗಿಸುವ ಪೌರತ್ವದ ನೋಂದಣಿ ಕಾಯ್ದೆಯನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿ ಭರವಸೆ ನೀಡಿದೆ.

ಬಿಜೆಪಿ ಪ್ರಣಾಳಿಕೆಯ ಗುರಿಯೇನು?

ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ  ನಡೆಯುತ್ತಿದ್ದು ಮೊದಲ ಹಂತದ  ಚುನಾವಣೆ ಮಾರ್ಚ್ 27ರಂದು ನಡೆಯಲಿದೆ. ಏಪ್ರಿಲ್ 1 ಮತ್ತು ಏಪ್ರಿಲ್ 5ರಂದು ಎರಡು, ಮೂರನೇ  ಹಂತದ ಚುನಾವಣೆ ನಡೆಯಲಿದೆ.  ಎಲ್ಲ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದು ಬಿಜೆಪಿ,  ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ಟೀಕಾಪ್ರಹಾರ ಮಾಡುತ್ತಲೇ ಇದೆ. ಕಾಂಗ್ರೆಸ್ ಪಕ್ಷವು ಎಐಯುಡಿಎಫ್ (AIDUF) ಜತೆ ಮೈತ್ರಿ ಮಾಡಿಕೊಂಡಿರುವುದನ್ನೇ ಪ್ರಧಾನ ವಿಷಯವಾಗಿರಿಸಿಕೊಂಡು ಎಐಯುಡಿಎಫ್  ನಾಯಕ  ಅಜ್ಮಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.

ಒರುನೋದಯ್  22 ಲಕ್ಷ ಮಹಿಳೆಯರಿಗೆ ನೇರವಾಗಿ  ಪ್ರಯೋಜನ ನೀಡುತ್ತಿದೆ.  ಕಳೆದ 6 ತಿಂಗಳಿನಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 830 ರೂಪಾಯಿ ಜಮೆ ಆಗುತ್ತಿದೆ. ಇದರ ಜತೆ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುತ್ತಿರುವ ಬಗ್ಗೆ ನನಗೆ ಸಂತೃಪ್ತಿ ಇದೆ. ಪ್ರತಿ ವರ್ಷ ಪದವಿಪೂರ್ವ ಶಿಕ್ಷಣದವರೆಗೆ ನಾಲ್ಕು ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ಉಚಿತ ಪಠ್ಯ ಪುಸ್ತಕ ಸಿಗುತ್ತದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಖರೀದಿಸಲು ಹಣ ನೀಡಲಾಗುತ್ತದೆ. ಈ ಯೋಜನೆಯಿಂದ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದರ ಜತೆಗೆ ಆರೋಗ್ಯ ವಲಯದಲ್ಲಿರುವ ಆಯುಷ್ಮಾನ್ ಭಾರತ್, ಅಟಲ್ ಅಮೃತ್ ಅಭಿಜನ್ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದವರಿಗೆ ಹೆಚ್ಜಿನ ಸಹಾಯವನ್ನು ನೀಡಿದೆ ಎಂದು ಬಿಜೆಪಿಯ ಅಸ್ಸಾಂ ಘಟಕದ  ನಾಯಕ  ಹಿಮಾಂತ ಬಿಸ್ವ ಶರ್ಮಾ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Assam Assembly Elections 2021: ಅಸ್ಸಾಂನ ಗೌರವ ಕುಗ್ಗಿಸುವವರಿಗೆ ಮತ ಹಾಕುವಿರೇ?; ಪ್ರಧಾನಿ ಮೋದಿ ಪ್ರಶ್ನೆ

Assam Assembly Elections 2021: ಅಸ್ಸಾಂನಲ್ಲಿ ‘5 ಗ್ಯಾರಂಟಿ’ ಯಾತ್ರೆಗೆ ಚಾಲನೆ ನೀಡಿದ ಕಾಂಗ್ರೆಸ್

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ