AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ 2ನೇ ಹಂತದ ಆಪರೇಷನ್ ಕಮಲ ನಡೆಸುತ್ತಿದೆ: ಎಎಪಿ ರಾಷ್ಟ್ರೀಯ ಸಮಾವೇಶದಲ್ಲಿ ಅರವಿಂದ ಕೇಜ್ರಿವಾಲ್

ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲವನ್ನು ಪ್ರಾರಂಭಿಸಿದೆ. ಇದು ಚುನಾಯಿತ ಸರ್ಕಾರಗಳನ್ನು ಉರುಳಿಸುವ ಉದ್ದೇಶವನ್ನು ಹೊಂದಿದೆ. ದೆಹಲಿ ಮತ್ತು ಪಂಜಾಬ್​​ನಲ್ಲಿ ನಡೆಸಿದ ಅವರ ಹಿಂದಿನ ಪ್ರಯತ್ನಗಳು...

ಬಿಜೆಪಿ 2ನೇ ಹಂತದ ಆಪರೇಷನ್ ಕಮಲ ನಡೆಸುತ್ತಿದೆ: ಎಎಪಿ ರಾಷ್ಟ್ರೀಯ ಸಮಾವೇಶದಲ್ಲಿ ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 18, 2022 | 1:01 PM

ದೆಹಲಿ: ಭಾನುವಾರ ಎಎಪಿಯ (AAP National Convention) ಮೊದಲ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅರವಿಂದ ಕೇಜ್ರಿವಾಲ್ (Arvind Kejriwal ) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲವನ್ನು ಪ್ರಾರಂಭಿಸಿದೆ ಎಂದು ಅವರು ಆರೋಪಿಸಿದರು. ಇದು ಚುನಾಯಿತ ಸರ್ಕಾರಗಳನ್ನು ಉರುಳಿಸುವ ಉದ್ದೇಶವನ್ನು ಹೊಂದಿದೆ. ದೆಹಲಿ ಮತ್ತು ಪಂಜಾಬ್​​ನಲ್ಲಿ ನಡೆಸಿದ ಅವರ ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು. ಈಗ, ಹೊಸ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದ ಒಂದು ದಿನದ ನಂತರ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ. ಮನೀಶ್ ಸಿಸೋಡಿಯಾ ನಂತರ ಅಮಾನತುಲ್ಲಾ ಅವರನ್ನು ಬಂಧಿಸಲಾಗಿದೆ. ಮುಂದೆ ಅವರು ಕೈಲಾಶ್ ಗಹ್ಲೋಟ್ (ದೆಹಲಿ ಸಾರಿಗೆ ಸಚಿವ) ಅವರನ್ನು ಗುರಿಯಾಗಿಸುತ್ತಾರೆ. ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದಿದ್ದಾರೆ ಕೇಜ್ರಿವಾಲ್. ಈ ದೇಶದ ಸಂವಿಧಾನವನ್ನು ಉಳಿಸಲು 2012 ನವೆಂಬರ್ 26ರಂದು ಎಎಪಿ ಸ್ಥಾಪಿಸಲಾಯಿತು.ಇದು ಕಾಕತಾಳೀಯವಲ್ಲ ಎಂದು ಅವರು ಒತ್ತಿ ಹೇಳಿದರು.

ಇಂದು ನಾವು ದೇಶದ 20 ರಾಜ್ಯಗಳಲ್ಲಿ 1446 ಜನ ಪ್ರತಿನಿಧಿಗಳನ್ನು ಹೊಂದಿದ್ದೇವೆ. ಇವು ದೇವರು ಬಿತ್ತಿದ ನಮ್ಮ ಬೀಜಗಳು. ದೆಹಲಿ ಮತ್ತು ಪಂಜಾಬ್‌ನಲ್ಲಿ ಈ ಬೀಜಗಳು ಮರಗಳಾಗಿ ಮಾರ್ಪಟ್ಟಿವೆ ಮತ್ತು ಜನರಿಗೆ ನೆರಳು ಮತ್ತು ಹಣ್ಣುಗಳನ್ನು ನೀಡುತ್ತಿವೆ. ದೇವರು ಗುಜರಾತ್‌ನಲ್ಲಿ 27 ಬೀಜಗಳನ್ನು ಬಿತ್ತಿದ್ದಾನೆ. ಅವು ವೃಕ್ಷಗಳಾಗಲಿವೆ, ಗುಜರಾತ್‌ನಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದ ಕೇಜ್ರಿವಾಲ್, ರಾಜ್ಯ ಚುನಾವಣೆಯಲ್ಲಿ ಎಎಪಿ ಉತ್ತಮ ಸಾಧನೆ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Published On - 12:43 pm, Sun, 18 September 22

ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು