ಕಾಂಗ್ರೆಸ್​ ಫ್ಯಾಮಿಲಿ ಬಿಸಿನೆಸ್; ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆಗೆ ಬಿಜೆಪಿ ಲೇವಡಿ

ರಾಹುಲ್ ಗಾಂಧಿ ತಾವು ಚುನಾವಣೆಯಲ್ಲಿ ಗೆದ್ದಿರುವ ವಯನಾಡನ್ನು ತೊರೆದು ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನಿಂದ ವಯನಾಡು ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದಾಗಿ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತೀವ್ರ ಲೇವಡಿ ಮಾಡಿದೆ.

ಕಾಂಗ್ರೆಸ್​ ಫ್ಯಾಮಿಲಿ ಬಿಸಿನೆಸ್; ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆಗೆ ಬಿಜೆಪಿ ಲೇವಡಿ
ಪ್ರಿಯಾಂಕಾ ಗಾಂಧಿ
Follow us
|

Updated on: Jun 18, 2024 | 3:38 PM

ನವದೆಹಲಿ: ರಾಹುಲ್ ಗಾಂಧಿ (Rahul Gandhi) ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಮತ್ತು ಕೇರಳದ ವಯನಾಡ್ (Wayanad) ಕ್ಷೇತ್ರವನ್ನು ತೆರವು ಮಾಡುತ್ತಾರೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಘೋಷಿಸಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿನಿಮಯವಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ವಯನಾಡ್‌ನಿಂದ ಚುನಾವಣೆಗೆ ಪದಾರ್ಪಣೆ ಮಾಡಲಿದ್ದಾರೆ.

ರಾಯ್ ಬರೇಲಿಯ ಸ್ಥಾನವನ್ನು ಉಳಿಸಿಕೊಳ್ಳುವ ರಾಹುಲ್ ಗಾಂಧಿಯವರ ನಿರ್ಧಾರ ಮತ್ತು ವಯನಾಡಿನಿಂದ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಪ್ರಿಯಾಂಕಾ ಗಾಂಧಿಯವರ ನಿರ್ಧಾರವು ಕಾಂಗ್ರೆಸ್ ಪಕ್ಷವು ಕುಟುಂಬದ ಬ್ಯುಸಿನೆಸ್ ಆಗಿದೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್ ಎಂಬುದು ಒಂದು ಪಕ್ಷವಲ್ಲ. ಅದು ಕುಟುಂಬದ ಬ್ಯುಸಿನೆಸ್ ಆಗಿದೆ ಎಂಬುದು ಕೊನೆಗೂ ಸಾಬೀತಾಗಿದೆ. ತಾಯಿ ರಾಜ್ಯಸಭೆಗೆ, ಮಗ ಒಂದು ಸ್ಥಾನದಿಂದ ಲೋಕಸಭೆಗೆ ಪ್ರವೇಶಿಸಿದ್ದಾರೆ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಮತ್ತೊಂದು ಲೋಕಸಭೆಯಿಂದ ಸದಸ್ಯರನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಬಿಜೆಪಿ ನಾಯಕ ಶೆಹಜಾದ್ ಪೂನವಾಲಾ ಹೇಳಿದ್ದಾರೆ.

ಕುಟುಂಬದ ಮೂವರೂ ಸಂಸತ್ತಿನಲ್ಲಿ ಇರುತ್ತಾರೆ. ಸಮಾಜವಾದಿ ಪಕ್ಷದ ಪ್ರಯತ್ನದಿಂದ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್​ಬರೇಲಿಯಲ್ಲಿ ವಿಜಯಶಾಲಿಯಾಗಿದ್ದರೂ, ರಾಯ್​ಬರೇಲಿಯಲ್ಲಿ ಒಂದೊಮ್ಮೆ ಉಪಚುನಾವಣೆ ನಡೆದರೆ ಅಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂಬುದು ಅವರಿಗೆ ಖಚಿತವಾಗಿದೆ. ಹೀಗಾಗಿ, ವಯನಾಡಿನಲ್ಲಿ ಉಪಚುನಾವಣೆ ನಡೆಸಿ ಪ್ರಿಯಾಂಕಾ ಗಾಂಧಿಯನ್ನು ಗೆಲ್ಲಿಸಿ ತರಲು ಪ್ಲಾನ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ನಿಮಗಿನ್ನು ಇಬ್ಬರು ಸಂಸದರು; ವಯನಾಡಿನ ಜನತೆಗೆ ರಾಹುಲ್ ಗಾಂಧಿ ಸಂದೇಶ

ವಯನಾಡ್‌ಗಿಂತ ರಾಯ್‌ಬರೇಲಿಯನ್ನು ಆಯ್ಕೆ ಮಾಡುವ ಮೂಲಕ ರಾಹುಲ್‌ ಕೇರಳದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಪೂನಾವಾಲಾ ಹೇಳಿದ್ದಾರೆ. ಇದು ವಯನಾಡು ಜನತೆಗೆ ಮಾಡಿದ ದ್ರೋಹ. ಚುನಾವಣೆಯ ನಂತರ ರಾಹುಲ್ ಗಾಂಧಿ ಅವರು ಕೇರಳ ರಾಜ್ಯದಿಂದ ಹೊರಹೋಗುತ್ತಾರೆ ಎಂದು ಅನ್ನಿ ರಾಜಾ ಹೇಳುತ್ತಲೇ ಇದ್ದರು ಎಂದು ಪೂನಾವಾಲಾ ಟೀಕಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯನ್ನು ವಯನಾಡಿನಿಂದ ಸ್ಪರ್ಧೆಗಿಳಿಸುವ ನಿರ್ಧಾರದಿಂದ ಗಾಂಧಿಯವರು ತಮ್ಮ ಕುಟುಂಬ ರಾಜಕಾರಣವನ್ನು ವಯನಾಡ್‌ನಿಂದ ರಾಯ್‌ಬರೇಲಿಗೆ ಕೊಂಡೊಯ್ಯಲು ಬಯಸಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ ಹೇಳಿದ್ದಾರೆ.

ವಯನಾಡ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸ್ಪರ್ಧೆಯನ್ನು ಘೋಷಿಸಿರುವುದು ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದೆ. ಕಾಂಗ್ರೆಸ್ “ರಾಜವಂಶದ ರಾಜಕೀಯ”ದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಸಾರ್ವಜನಿಕರಿಗೆ ದ್ರೋಹ ಬಗೆದು ತನ್ನ ಉದ್ದೇಶಗಳನ್ನು ಮರೆಮಾಚುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

ತಮ್ಮ ವಂಶದ ಒಂದೊಂದೇ ಸದಸ್ಯರನ್ನು ವಯನಾಡಿನ ಮತದಾರರ ಮೇಲೆ ಹೇರುತ್ತಿರುವ ಕಾಂಗ್ರೆಸ್ ನಾಚಿಕೆಗೇಡಿತನ ಪ್ರದರ್ಶಿಸಿದೆ ಎಂದು ರಾಜೀವ್ ಚಂದ್ರಶೇಖರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಿದ ನಂತರ ಕಾಂಗ್ರೆಸ್ ಸಾರ್ವಜನಿಕರಿಗೆ ದ್ರೋಹ ಬಗೆದು ತನ್ನ ಉದ್ದೇಶವನ್ನು ಮರೆಮಾಚುತ್ತಿದೆ ಎಂದು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಕಾಂಗ್ರೆಸ್‌ನ ಪವನ್ ಖೇರಾ ಅವರು ಈ ಹಿಂದೆ ಪ್ರಧಾನಿ ಮೋದಿ ಕೂಡ 2014ರಲ್ಲಿ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡ ರಾಹುಲ್ ಗಾಂಧಿ; ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

ರಾಜೀವ್ ಚಂದ್ರಶೇಖರ್ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ, “ನರೇಂದ್ರ ಮೋದಿ ಅವರು 2014ರಲ್ಲಿ ವಾರಾಣಸಿಯಿಂದಲೂ ಸ್ಪರ್ಧಿಸುವುದಾಗಿ ಬರೋಡದ ಮತದಾರರನ್ನು ಯಾಮಾರಿಸಿರಲಿಲ್ಲವೇ?” ಎಂದು ವ್ಯಂಗ್ಯವಾಡಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ವಡೋದರಾ ಮತ್ತು ವಾರಾಣಸಿಯಿಂದ ಸ್ಪರ್ಧಿಸಿ ಎರಡರಲ್ಲೂ ಗೆಲುವು ಸಾಧಿಸಿದ್ದನ್ನು ಅವರು ಉಲ್ಲೇಖಿಸಿದ್ದಾರೆ. ಮೋದಿ ನಂತರ ವಡೋದರಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದರು ಮತ್ತು ವಾರಾಣಸಿ ಸ್ಥಾನವನ್ನು ಉಳಿಸಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ