AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva

ಮಹಾರಾಷ್ಟ್ರದಲ್ಲಿ ಶಿವ ಸೇನಾ ಮತ್ತು ಬಿಜೆಪಿ ಪಕ್ಷಗಳ ನಡುವೆ ನಿರಂತರವಾಗಿ ನಡೆಯುತ್ತಿರುವ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಎರಡು ಪಕ್ಷಗಳು ಪ್ರಚಂಡ ಹಿಂದುತ್ವವಾದಿಗಳು. ಈ ವಿಷಯಯವಾಗೇ ಅವೆರಡರ ನಡುವೆ ವಾಗ್ವಾದಗಳು ನಡೆಯುತ್ತಿರುತ್ತವೆ. ಮಂಗಳವಾರದಂದು ಸುದ್ದಿಸಂಸ್ಥೆಯೊಂದರ ಜೊತೆ ಮಾತಾಡಿದ ಶಿವ ಸೇನಾ ಹಿರಿಯ ನಾಯಕ ಸಂಜಯ ರಾವತ್ ದೇಶಕ್ಕೆ ಅಗತ್ಯಬಿದ್ದರೆ ತಮ್ಮ ಪಕ್ಷ ಹಿಂದುತ್ವದ ಖಡ್ಗವನ್ನೇ ಝಳಪಳಿಸುತ್ತಾ ಮುಂದೆ ಬರುತ್ತದೆ ಎಂದು ಹೇಳಿದರು. ‘‘ಶಿವ ಸೇನಾ ಹಿಂದೆಯೂ ಹಿಂದುತ್ವವಾದಿಯಾಗಿತ್ತು, ಇವತ್ತೂ ಆಗಿದೆ ಮತ್ತು ಮುಂದೆಯೂ ಹಿಂದುತ್ವವಾದಿಯಾಗಿಯೇ ಉಳಿಯುತ್ತದೆ. ಆದರೆ […]

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 17, 2020 | 5:55 PM

Share

ಮಹಾರಾಷ್ಟ್ರದಲ್ಲಿ ಶಿವ ಸೇನಾ ಮತ್ತು ಬಿಜೆಪಿ ಪಕ್ಷಗಳ ನಡುವೆ ನಿರಂತರವಾಗಿ ನಡೆಯುತ್ತಿರುವ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಎರಡು ಪಕ್ಷಗಳು ಪ್ರಚಂಡ ಹಿಂದುತ್ವವಾದಿಗಳು. ಈ ವಿಷಯಯವಾಗೇ ಅವೆರಡರ ನಡುವೆ ವಾಗ್ವಾದಗಳು ನಡೆಯುತ್ತಿರುತ್ತವೆ. ಮಂಗಳವಾರದಂದು ಸುದ್ದಿಸಂಸ್ಥೆಯೊಂದರ ಜೊತೆ ಮಾತಾಡಿದ ಶಿವ ಸೇನಾ ಹಿರಿಯ ನಾಯಕ ಸಂಜಯ ರಾವತ್ ದೇಶಕ್ಕೆ ಅಗತ್ಯಬಿದ್ದರೆ ತಮ್ಮ ಪಕ್ಷ ಹಿಂದುತ್ವದ ಖಡ್ಗವನ್ನೇ ಝಳಪಳಿಸುತ್ತಾ ಮುಂದೆ ಬರುತ್ತದೆ ಎಂದು ಹೇಳಿದರು.

‘‘ಶಿವ ಸೇನಾ ಹಿಂದೆಯೂ ಹಿಂದುತ್ವವಾದಿಯಾಗಿತ್ತು, ಇವತ್ತೂ ಆಗಿದೆ ಮತ್ತು ಮುಂದೆಯೂ ಹಿಂದುತ್ವವಾದಿಯಾಗಿಯೇ ಉಳಿಯುತ್ತದೆ. ಆದರೆ ಬಿಜೆಪಿಯಂತೆ ನಾವು ರಾಜಕಾರಣಕ್ಕಾಗಿ ನಾವು ಹಿಂದುತ್ವದ ಕಾರ್ಡ್ ಪ್ರದರ್ಶಿಸುವುದಿಲ್ಲ. ದೇಶಕ್ಕೆ ಅವಶ್ಯಕತೆ ಬಿದ್ದಾಗ ನಾವು ಹಿದುತ್ವದ ಖಡ್ಗವನ್ನು ಹಿರಿದೇ ಮುಂದೆ ಬರುತ್ತೇವೆ,’’ ಎಂದು ಹೇಳಿದರು.

ಈ ವಾರದಲ್ಲಿ ಎರಡನೆ ಬಾರಿ ಶಿವ ಸೇನಾ ಮತ್ತು ಬಿಜೆಪಿ ಪಕ್ಷಗಳ ನಡುವೆ ಹಿಂದುತ್ವದ ಮೇಲೆ ಮಾತಿನ ಚಕಮಕಿ ನಡೆದಿದೆ. ಕಳೆದ ವಾರ ಶಿವ ಸೇನಾ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನವೆಂಬರ್16ರಿಂದ ರಾಜ್ಯ ದಾದ್ಯಂತ ದೇವಸ್ಥಾನ ಮತ್ತು ಆರಾಧನೆ ನಡೆಯುವ ಎಲ್ಲ ಸ್ಥಳಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಪ್ರಕಟಿಸಿದಾಗ, ಅದು ಹಿಂದುತ್ವಕ್ಕೆ ಸಂದ ಜಯ ಅಂತ ಬಿಜೆಪಿ ಹೇಳಿತ್ತು.

ರವಿವಾರದಂದು ಬಿಜೆಪಿಯ ಕಾಮೆಂಟ್​ಗೆ ಪ್ರತಿಕ್ರಿಯಿಸಿದ್ದ ರಾವತ್, ‘‘ಪ್ರಾರ್ಥನಾ ಮಂದಿರಗಳನ್ನು ನಾವು ಪುನರಾರಂಭಿಸಲು ನಿರ್ಧರಿಸಿದ್ದು ಯಾರ ಗೆಲುವೂ ಅಲ್ಲ, ಸೋಲೂ ಅಲ್ಲ. ಬಿಜೆಪಿ ನಾಯಕರು ಪ್ರಾಯಶಃ ಮರೆತಿರುವಂತೆ ಕಾಣುತ್ತಿದೆ. ದೇವಸ್ಥಾನಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಮುಚ್ಚಲಾಗಿತ್ತು. ಮೋದಿಯವರು ಲಾಕ್​ಡೌನ್ ಘೋಷಿಸಿದಾಗ ದೇಶದೆಲ್ಲೆಡೆ ಪ್ರಾರ್ಥನಾ ಸ್ಥಳಗಳನ್ನು ಮುಚ್ಚಲಾಯಿತು. ಇದರಲ್ಲಿ ಬಿಜೆಪಿ ಕ್ರೆಡಿಟ್ ತೆಗೆದುಕೊಳ್ಳುವಂಥದ್ದೇನೂ ಇಲ್ಲ. ಈ ಅಂಶವನ್ನು ಪ್ರಧಾನ ಮಂತ್ರಿ ಮೋದಿಯವರು ತಮ್ಮ ಪಕ್ಷದ ಕಾರ್ಯರ್ತರಿಗೆ ವಿವರಿಸಿದರೆ ಒಳ್ಳೆಯದು ಅಂತ ಭಾವಿಸುತ್ತೇನೆ,’’ ಎಂದು ಹೇಳಿದ್ದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ