AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ
ಸಂಗ್ರಹ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 22, 2022 | 9:17 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ₹ 340 ಕೋಟಿ ಖರ್ಚು ಮಾಡಿದ್ದರೆ, ಕಾಂಗ್ರೆಸ್ (Congress) ಈ ರಾಜ್ಯಗಳಲ್ಲಿ ತನ್ನ ಪ್ರಚಾರಕ್ಕಾಗಿ ₹ 194 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದೆ ಎಂದು ಎರಡೂ ಪಕ್ಷಗಳ ಚುನಾವಣಾ ವೆಚ್ಚದ ವರದಿಗಳು ತಿಳಿಸಿವೆ.ಬಿಜೆಪಿ ಸಲ್ಲಿಸಿದ ವರದಿಯ ಪ್ರಕಾರ ಮತ್ತು ಚುನಾವಣಾ ಆಯೋಗವು ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ಮಾಹಿತಿ ಪ್ರಕಾರ ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳಿಗಾಗಿ ಪಕ್ಷವು ತನ್ನ ಪ್ರಚಾರಕ್ಕಾಗಿ ₹ 340 ಕೋಟಿಗೂ ಹೆಚ್ಚು ಖರ್ಚು ಮಾಡಿದೆ. ಉತ್ತರ ಪ್ರದೇಶದಲ್ಲಿ ₹ 221 ಕೋಟಿ, ಮಣಿಪುರದಲ್ಲಿ ₹ 23 ಕೋಟಿ, ಉತ್ತರಾಖಂಡದಲ್ಲಿ ₹ 43.67 ಕೋಟಿ, ಪಂಜಾಬ್‌ನಲ್ಲಿ ₹ 36 ಕೋಟಿ ಮತ್ತು ಗೋವಾದಲ್ಲಿ ₹ 19 ಕೋಟಿಗೂ ಹೆಚ್ಚು ಖರ್ಚು ಮಾಡಿದೆ ಎಂದು ಬಿಜೆಪಿಯ ಖರ್ಚುವೆಚ್ಚಗಳ ವರದಿ ತೋರಿಸಿದೆ.ಕಾಂಗ್ರೆಸ್ ಸಲ್ಲಿಸಿದ ವರದಿಯ ಪ್ರಕಾರ, ಐದು ರಾಜ್ಯಗಳಲ್ಲಿ ಪ್ರಚಾರ ಮತ್ತು ಸಂಬಂಧಿತ ವೆಚ್ಚಗಳಿಗಾಗಿ ₹ 194 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳು ಮಾನ್ಯತೆ ಪಡೆದಿವೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್