AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ
ಸಂಗ್ರಹ ಚಿತ್ರ
TV9 Web
| Edited By: |

Updated on: Sep 22, 2022 | 9:17 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ₹ 340 ಕೋಟಿ ಖರ್ಚು ಮಾಡಿದ್ದರೆ, ಕಾಂಗ್ರೆಸ್ (Congress) ಈ ರಾಜ್ಯಗಳಲ್ಲಿ ತನ್ನ ಪ್ರಚಾರಕ್ಕಾಗಿ ₹ 194 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದೆ ಎಂದು ಎರಡೂ ಪಕ್ಷಗಳ ಚುನಾವಣಾ ವೆಚ್ಚದ ವರದಿಗಳು ತಿಳಿಸಿವೆ.ಬಿಜೆಪಿ ಸಲ್ಲಿಸಿದ ವರದಿಯ ಪ್ರಕಾರ ಮತ್ತು ಚುನಾವಣಾ ಆಯೋಗವು ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ಮಾಹಿತಿ ಪ್ರಕಾರ ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳಿಗಾಗಿ ಪಕ್ಷವು ತನ್ನ ಪ್ರಚಾರಕ್ಕಾಗಿ ₹ 340 ಕೋಟಿಗೂ ಹೆಚ್ಚು ಖರ್ಚು ಮಾಡಿದೆ. ಉತ್ತರ ಪ್ರದೇಶದಲ್ಲಿ ₹ 221 ಕೋಟಿ, ಮಣಿಪುರದಲ್ಲಿ ₹ 23 ಕೋಟಿ, ಉತ್ತರಾಖಂಡದಲ್ಲಿ ₹ 43.67 ಕೋಟಿ, ಪಂಜಾಬ್‌ನಲ್ಲಿ ₹ 36 ಕೋಟಿ ಮತ್ತು ಗೋವಾದಲ್ಲಿ ₹ 19 ಕೋಟಿಗೂ ಹೆಚ್ಚು ಖರ್ಚು ಮಾಡಿದೆ ಎಂದು ಬಿಜೆಪಿಯ ಖರ್ಚುವೆಚ್ಚಗಳ ವರದಿ ತೋರಿಸಿದೆ.ಕಾಂಗ್ರೆಸ್ ಸಲ್ಲಿಸಿದ ವರದಿಯ ಪ್ರಕಾರ, ಐದು ರಾಜ್ಯಗಳಲ್ಲಿ ಪ್ರಚಾರ ಮತ್ತು ಸಂಬಂಧಿತ ವೆಚ್ಚಗಳಿಗಾಗಿ ₹ 194 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳು ಮಾನ್ಯತೆ ಪಡೆದಿವೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ