AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಮನೆಯೆದುರು ಬಿಜೆಪಿ ಬೆಂಬಲಿಗರ ಪ್ರತಿಭಟನೆ; ತೇಜಸ್ವಿ ಸೂರ್ಯ ಮುಂದಾಳತ್ವ, ಗೇಟ್ ಧ್ವಂಸ

ಬಿಜೆಪಿಯನ್ನು ನೋಡಿದರೆ ನಗು ಬರುತ್ತದೆ. ಅವರು ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ಬಿಟ್ಟು, ದಿ ಕಾಶ್ಮೀರ್ ಫೈಲ್ಸ್ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಆ ಸಿನಿಮಾದ ಪೋಸ್ಟರ್​ ಅಂಟಿಸುತ್ತಿದ್ದಾರೆ ಎಂದೂ ಅರವಿಂದ್ ಕೇಜ್ರಿವಾಲ್​ ಹೇಳಿದ್ದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಮನೆಯೆದುರು ಬಿಜೆಪಿ ಬೆಂಬಲಿಗರ ಪ್ರತಿಭಟನೆ; ತೇಜಸ್ವಿ ಸೂರ್ಯ ಮುಂದಾಳತ್ವ, ಗೇಟ್ ಧ್ವಂಸ
ಅರವಿಂದ ಕೇಜ್ರಿವಾಲ್
TV9 Web
| Updated By: Lakshmi Hegde|

Updated on:Mar 30, 2022 | 4:17 PM

Share

ದಿ ಕಾಶ್ಮೀರ್ ಫೈಲ್ಸ್​ ಸಿನಿಮಾದ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮನೆಯ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ. ಮನೆಯ ಎದುರಿನ ಗೇಟ್​ನ್ನು ಧ್ವಂಸಗೊಳಿಸಿದ್ದಾರೆ. ಭದ್ರತೆಗಾಗಿ ಹಾಕಿದ್ದ ಬ್ಯಾರಿಕೇಡ್​ಗಳು, ಕೇಜ್ರಿವಾಲ್​ ಮನೆಯ ಬಳಿಯಿದ್ದ ಸಿಸಿಟಿವಿ ಕ್ಯಾಮರಾಗಳೆಲ್ಲ ನಾಶಗೊಂಡಿವೆ. ಇಷ್ಟೆಲ್ಲ ಆದರೂ  ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಂಡಿಲ್ಲ, ಅವರು ಅಷ್ಟೆಲ್ಲ ದಾಂಧಲೆ ಎಬ್ಬಿಸುತ್ತಿದ್ದರೂ, ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಇಂದು ಆರೋಪಿಸಿದ್ದಾರೆ. ಈ ಬಗ್ಗೆ ಆಮ್​ ಆದ್ಮಿ ಪಕ್ಷ ಕೂಡ ಟ್ವೀಟ್ ಮಾಡಿದೆ.

ಪ್ರತಿಭಟನೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ನಡೆದಿದೆ ಎಂದು ಆಮ್​ ಆದ್ಮಿ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ. ಇದನ್ನೆಲ್ಲ ನೋಡಿಕೊಂಡು ದೆಹಲಿ ಪೊಲೀಸರು ಸುಮ್ಮನಿದ್ದಾರಲ್ಲ ಎಂಬ ಟೀಕೆಯೂ ಕೇಳಿಬರುತ್ತಿದೆ.  ಆಪ್​ ನಾಯಕಿ ಅತಿಶಿ ಟ್ವೀಟ್ ಮಾಡಿ, ಬಿಜೆಪಿ ಬೆಂಬಲಿಗರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮನೆಯ ಎದುರು ಈ ಪರಿಯ ರಂಪಾಟ ಮಾಡುತ್ತಿದ್ದರೂ ದೆಹಲಿ ಪೊಲೀಸರು ಏನೂ ಕ್ರಮ ಕೈಗೊಂಡಿಲ್ಲ. ಇವರಿಗೆಲ್ಲ ಬೆಂಬಲ ಕೊಡುವಂತೆ ಪೊಲೀಸರಿಗೆ ಅಮಿತ್​ ಶಾ ಕಚೇರಿಯಿಂದ ಸೂಚನೆಯಿತ್ತಾ ಎಂದು ಪ್ರಶ್ನಿಸಿದ್ದಾರೆ.

ಆದರೆ ಕೆಲವೇ ಹೊತ್ತಲ್ಲಿ ದೆಹಲಿ ಪೊಲೀಸರು ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಾಹ್ನ 1ಗಂಟೆ ಹೊತ್ತಿಗೆ ಒಂದಷ್ಟು ಮಂದಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಮನೆಯತ್ತ ನುಗ್ಗಿದರು. ಅಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್​ಗಳನ್ನೆಲ್ಲ ಧ್ವಂಸಗೊಳಿಸಿದ್ದಾರೆ. ದೊಡ್ಡದಾಗಿ ಘೋಷಣೆ ಕೂಗುತ್ತ, ದಾಂಧಲೆ ಮಾಡುತ್ತಿದ್ದರು. ಅವರು ಪೇಂಟ್​ ಬಾಕ್ಸ್​ಗಳನ್ನು ತಂದು, ಸಿಎಂ ಮನೆಯ ಬಾಗಿಲಿನ ಕಡೆಗೆ ಎಸೆದಿದ್ದಾರೆ.  ನಾವು ಕೂಡಲೇ ಕಾರ್ಯಪ್ರವೃತ್ತರಾಗಿ ಪ್ರತಿಭಟನಾಕಾರರನ್ನು ಅಲ್ಲಿಂದ ಚದುರಿಸಿದ್ದೇವೆ. ಘಟನೆಗೆ ಸಂಬಂಧಪಟ್ಟಂತೆ ಒಟ್ಟು 70 ಮಂದಿಯನ್ನು ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಉತ್ತರ ವಲಯದ ಡಿಸಿಪಿ ಸಾಗರ್ ಸಿಂಗ್​ ಕಲ್ಸಿ ತಿಳಿಸಿದ್ದಾರೆ.

ಸಿಎಂ ಕೇಜ್ರಿವಾಲ್​ ಏನು ಹೇಳಿದ್ದರು?

ಸದ್ಯ ದೇಶಾದ್ಯಂತ ದೊಡ್ಡಮಟ್ಟದಲ್ಲಿ ಸುದ್ದಿಯಲ್ಲಿರುವ ದಿ ಕಾಶ್ಮೀರ್ ಫೈಲ್ಸ್​ ಬಗ್ಗೆ ಹಲವು ಪ್ರತಿಪಕ್ಷಗಳ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಗೇ ಅರವಿಂದ್ ಕೇಜ್ರಿವಾಲ್ ಕಳೆದ ವಾರ ದೆಹಲಿ ವಿಧಾನಸಭೆಯಲ್ಲಿ ಮಾತನಾಡಿ, ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾಕ್ಕೆ ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಮಾಡಲಾಗಿದೆ. ಈ ಮೂಲಕ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ದೆಹಲಿಯಲ್ಲೂ ಸಿನಿಮಾವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಅಷ್ಟಿದ್ದರೆ ಯೂಟ್ಯೂಬ್​​ನಲ್ಲಿ ಅಪ್ಲೋಡ್ ಮಾಡಿಕೊಳ್ಳಲಿ. ಎಲ್ಲರೂ ಉಚಿತವಾಗಿಯೇ ನೋಡುತ್ತಾರೆ ಎಂದು ಹೇಳಿದ್ದರು.

ಅಷ್ಟೇ ಅಲ್ಲ, ಬಿಜೆಪಿಯನ್ನು ನೋಡಿದರೆ ನಗು ಬರುತ್ತದೆ. ಅವರು ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ಬಿಟ್ಟು, ದಿ ಕಾಶ್ಮೀರ್ ಫೈಲ್ಸ್ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಆ ಸಿನಿಮಾದ ಪೋಸ್ಟರ್​ ಅಂಟಿಸುತ್ತಿದ್ದಾರೆ. ಅವರೇನು ರಾಜಕೀಯಕ್ಕೆ ಬಂದಿದ್ದು ಸಿನಿಮಾ ಪೋಸ್ಟರ್ ಅಂಟಿಸಲಾ ಎಂದು ವ್ಯಂಗ್ಯವಾಡಿದ್ದರು. ಅರವಿಂದ್​ ಕೇಜ್ರಿವಾಲ್​ ಆಡಿದ ಈ ಮಾತುಗಳಿಂದ  ಕೆರಳಿದ ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: IPL: ಮುಂದಿನ 5 ವರ್ಷಗಳ ಐಪಿಎಲ್ ಮಾಧ್ಯಮ ಹಕ್ಕು ಹರಾಜಿಗೆ ಟೆಂಡರ್ ಕರೆದ ಬಿಸಿಸಿಐ; ಮೇ 10 ಕೊನೆಯ ದಿನಾಂಕ

Published On - 3:33 pm, Wed, 30 March 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ