AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಹಗರಣದಲ್ಲಿ 900 ಕೋಟಿ ಹಣ ಸಿಎಂ ಮಮತಾ ಬ್ಯಾನರ್ಜಿಯವರ ಸೋದರಳಿಯನ ಕೈಸೇರಿದೆ: ಸುವೇಂದು ಅಧಿಕಾರಿ ಆರೋಪ

900 ಕೋಟಿಯಷ್ಟು ಬೃಹತ್ ಮೊತ್ತ ಸಿಎಂ ಮಮತಾ ಬ್ಯಾನರ್ಜಿಯವರ ಸೋದರಳಿಯನ ಕೈಸೇರಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಕಲ್ಲಿದ್ದಲು ಹಗರಣದಲ್ಲಿ 900 ಕೋಟಿ ಹಣ ಸಿಎಂ ಮಮತಾ ಬ್ಯಾನರ್ಜಿಯವರ ಸೋದರಳಿಯನ ಕೈಸೇರಿದೆ: ಸುವೇಂದು ಅಧಿಕಾರಿ ಆರೋಪ
ಮಮತಾ ಬ್ಯಾನರ್ಜಿ- ಸುವೇಂದು ಅಧಿಕಾರಿ
guruganesh bhat
| Edited By: |

Updated on: Apr 04, 2021 | 3:36 PM

Share

ಕೊಲ್ಕತ್ತಾ: ಬಹು ಚರ್ಚಿತ ಕಲ್ಲಿದ್ದಲು ಹಗರಣದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸರ್ಕಾರದ ಕೈವಾಡವಿದೆ. 900 ಕೋಟಿಯಷ್ಟು ಬೃಹತ್ ಮೊತ್ತ ಸಿಎಂ ಮಮತಾ ಬ್ಯಾನರ್ಜಿಯವರ ಸೋದರಳಿಯನ ಕೈಸೇರಿದೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದರು. ಈಗಾಗಲೇ ಎರಡು ಹಂತದ ಚುನಾವಣೆ ಮುಗಿಸಿ ಮಿಕ್ಕ ಆರು ಹಂತದ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದರು.

ಈಮುನ್ನವೂ ಅನೇಕ ಬಾರಿ ಸುವೆಂದು ಅಧಿಕಾರಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಸರ್ಕಾರದ ವಿರುದ್ಧ ಟೀಕೆ ನಡೆಸಿದ್ದರು.  ‘ನಾನು ತೃಣಮೂಲ ಕಾಂಗ್ರೆಸ್ ಜತೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ’ ಎಂದು ಕೆಲವು ದಿನಗಳ ಹಿಂದೆಯಷ್ಟೇ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ನಾಯಕ ಸುವೇಂದು ಅಧಿಕಾರಿ ಹೇಳಿದ್ದರು

ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಇದ್ದ ಪಕ್ಷದಲ್ಲಿ ಶಿಸ್ತು ಇಲ್ಲ. ಅದು ಪಕ್ಷದಿಂದ ಕಂಪನಿಯಾಗಿ ಬದಲಾಗಿದೆ. 21 ವರ್ಷಗಳ ಕಾಲ ಆ ಪಕ್ಷದೊಂದಿಗೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದಿದ್ದರು.

ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ ಬೇಕಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗದಿಂದಾಗಿಯೇ ನಾವು ಈಗ ಪಶ್ಚಿಮ ಬಂಗಾಳದಲ್ಲಿ ಬದುಕಲು ಸಾಧ್ಯವಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಬರಬೇಕು. ಹಾಗಿದ್ದರೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಆರ್ಥಿಕ ಅಭಿವೃದ್ಧಿಯಾಗಬಹುದು. ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದು ಹೇಳಿದ್ದರು.

ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ನೆಲದಲ್ಲಿ ನಮ್ಮನ್ನು ಸ್ವೀಕರಿಸಿದ್ದಕ್ಕೆ ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಧನ್ಯವಾದಗಳನ್ನರ್ಪಿಸುತ್ತೇನೆ. ಬಿಜೆಪಿ ಜಗತ್ತಿನಲ್ಲಿಯೇ ಅತೀ ದೊಡ್ಡ ಪಕ್ಷವಾಗಿದೆ. ನಾನು ಈಗ ರಾಷ್ಟ್ರೀಯವಾದಿ, ಬಹುತ್ವವಾದಿ, ಶಿಸ್ತು ಮತ್ತು ದೇಶಭಕ್ತಿಯಿರುವ ಪಕ್ಷದ ಸದಸ್ಯನಾಗಿದ್ದೇನೆ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿ ಸೋನಾರ್ ಬಾಂಗ್ಲಾ (ಸುವರ್ಣ ಬಾಂಗ್ಲಾ) ಮಾಡುವ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Fact Check: ಪಶ್ಚಿಮ ಬಂಗಾಳದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಜನರನ್ನು ಆಕರ್ಷಿಸಲು ಖಾಲಿ ಕುರ್ಚಿಯಲ್ಲಿ ಊಟದ ಪೊಟ್ಟಣ, ವೈರಲ್ ಆಗಿದ್ದು ಹಳೇ ಫೋಟೊ

ವ್ಯಕ್ತಿ-ವ್ಯಕ್ತಿತ್ವ: ಟಿಎಂಸಿಯಲ್ಲಿ ಬೆಳೆದ ಸುವೇಂದು ಅಧಿಕಾರಿ ಈಗ ಬಿಜೆಪಿಯ ದೊಡ್ಡ ಅಸ್ತ್ರ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ