AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chintan Shivir ಬಿಜೆಪಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಗಾಂಧೀಜಿ ಹಂತಕರನ್ನು ವೈಭವೀಕರಿಸುತ್ತಿದೆ: ಸೋನಿಯಾ ಗಾಂಧಿ

ಬಿಜೆಪಿ ಪಕ್ಷವು ಒಂದು ನಿರ್ದಿಷ್ಟ ವರ್ಗಕ್ಕೆ ಸೇರಿದ ಜನರನ್ನು ಗುರಿಯಾಗಿಸಿಕೊಂಡು ಮಹಾತ್ಮ ಗಾಂಧಿಯವರ ಹಂತಕರನ್ನು ವೈಭವೀಕರಿಸುತ್ತಿದೆ ಎಂದು ಸೋನಿಯಾ ಹೇಳಿದ್ದಾರೆ

Chintan Shivir ಬಿಜೆಪಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಗಾಂಧೀಜಿ ಹಂತಕರನ್ನು ವೈಭವೀಕರಿಸುತ್ತಿದೆ: ಸೋನಿಯಾ ಗಾಂಧಿ
ಚಿಂತನ್ ಶಿವಿರ್​​ನಲ್ಲಿ ಸೋನಿಯಾ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 13, 2022 | 3:55 PM

Share

ಉದಯಪುರ: ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಚಿಂತನ್ ಶಿವಿರ್‌ನಲ್ಲಿ(Chintan Shivir) ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi), ಅಲ್ಪಸಂಖ್ಯಾತರ ಮೇಲಿನ ಇತ್ತೀಚಿನ ಹಿಂಸಾಚಾರದ ಬಗ್ಗೆ ಬಿಜೆಪಿಯನ್ನು(BJP) ತರಾಟೆಗೆ ತೆಗೆದುಕೊಂಡರು. ಬಿಜೆಪಿ ಪಕ್ಷವು ಒಂದು ನಿರ್ದಿಷ್ಟ ವರ್ಗಕ್ಕೆ ಸೇರಿದ ಜನರನ್ನು ಗುರಿಯಾಗಿಸಿಕೊಂಡು ಮಹಾತ್ಮ ಗಾಂಧಿಯವರ ಹಂತಕರನ್ನು ವೈಭವೀಕರಿಸುತ್ತಿದೆ ಎಂದು ಸೋನಿಯಾ ಹೇಳಿದ್ದಾರೆ. ‘ ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ’ ಎಂಬ ತಮ್ಮ ಘೋಷವಾಕ್ಯದ ಮೂಲಕ ಪ್ರಧಾನಿ ಮೋದಿ ಮತ್ತು ಅವರ ಸಹೋದ್ಯೋಗಿಗಳು ನಿಜವಾಗಿಯೂ ಏನನ್ನು ಅರ್ಥೈಸುತ್ತಾರೆ ಎಂಬುದು ಸ್ಪಷ್ಟವಾಗಿದೆ. ಇದರರ್ಥ ದೇಶವನ್ನು ಶಾಶ್ವತ ಧ್ರುವೀಕರಣದ ಸ್ಥಿತಿಯಲ್ಲಿ ಇರಿಸುವುದು, ನಿರಂತರ ಭಯ ಮತ್ತು ಅಭದ್ರತೆಯ ಸ್ಥಿತಿಯಲ್ಲಿ ಬದುಕಲು ಜನರನ್ನು ಒತ್ತಾಯಿಸುವುದು, ನಮ್ಮ ಸಮಾಜದ ಅವಿಭಾಜ್ಯ ಅಂಗವಾಗಿರುವ ಅಲ್ಪಸಂಖ್ಯಾತರನ್ನು ಕ್ರೂರವಾಗಿ ಗುರಿಯಾಗಿಸುವುದು ಮತ್ತು ಬಲಿಪಶು ಮಾಡುವುದು ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

ಬಿಜೆಪಿ, ಆರೆಸ್ಸೆಸ್ ಮತ್ತು ಅದರ ಅಂಗಸಂಸ್ಥೆಗಳ ನೀತಿಗಳ ಪರಿಣಾಮವಾಗಿ ದೇಶವು ಎದುರಿಸುತ್ತಿರುವ ಹಲವಾರು ಸವಾಲುಗಳನ್ನು ನಮ್ಮ ನಡುವೆ ಚರ್ಚಿಸಲು ನವ ಸಂಕಲ್ಪ ಚಿಂತನ್ ಶಿವಿರ್ ನಮಗೆ ಅವಕಾಶವನ್ನು ನೀಡುತ್ತದೆ. ನಮ್ಮ ಮುಂದಿರುವ ಅನೇಕ ಕಾರ್ಯಗಳ ಬಗ್ಗೆ ಚರ್ಚಿಸಲು ಇದು ಒಂದು ಸಂದರ್ಭವಾಗಿದೆ. ಇದು ರಾಷ್ಟ್ರೀಯ ವಿಷಯಗಳ ಬಗ್ಗೆ ಚಿಂತನೆ ಮತ್ತು ನಮ್ಮ ಪಕ್ಷದ ಸಾಂಸ್ಥಿಕ ರಚನೆಯ ಬಗ್ಗೆ ಆತ್ಮಚಿಂತನೆಯಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಶಿವಿರ್‌ನಲ್ಲಿ ಬಹಿರಂಗವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ನಾನು ಪಕ್ಷದವರಲ್ಲಿ ಒತ್ತಾಯಿಸುತ್ತೇನೆ.  ಬಲವಾದ ಪಕ್ಷ ಮತ್ತು ಏಕತೆಯ ಒಂದು ಸಂದೇಶವು ದೇಶಕ್ಕೆ ಹೋಗಬೇಕು. ನಾವು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಿಂತ ಸಂಘಟನೆಯನ್ನು ಇಟ್ಟುಕೊಳ್ಳಬೇಕು, ಪಕ್ಷ ನಮಗೆ ಸಾಕಷ್ಟು ನೀಡಿದೆ ಮತ್ತು ಮರುಪಾವತಿ ಮಾಡುವ ಸಮಯ ಬಂದಿದೆ. ಸಂಘಟನೆಯಲ್ಲಿ ಬದಲಾವಣೆಗಳು ಇಂದಿನ ಅಗತ್ಯ, ನಾವು ನಮ್ಮ ಕೆಲಸದ ವಿಧಾನವನ್ನು ಬದಲಾಯಿಸಬೇಕಾಗಿದೆ. ರಾಷ್ಟ್ರೀಯ ವಿಷಯಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲು ನಾವು ಈ ಸಮಯವನ್ನು ತೆಗೆದುಕೊಳ್ಳಬೇಕು ಎಂದು ಸೋನಿಯಾ ಗಾಂಧಿ ಪಕ್ಷದ ಸದಸ್ಯರಿಗೆ ಹೇಳಿದ್ದಾರೆ.

ಹೊಸ ಮುಖಗಳನ್ನು ನಾಯಕತ್ವದ ಮಟ್ಟಕ್ಕೆ ತರಲು ಆಮೂಲಾಗ್ರ ಆಲೋಚನೆಯನ್ನು ಕಾಂಗ್ರೆಸ್ ಉನ್ನತ ನಾಯಕರು ಸಕ್ರಿಯವಾಗಿ ಪರಿಗಣಿಸುತ್ತಿದ್ದಾರೆ. ರಾಜ್ಯಸಭಾ ಸದಸ್ಯರ ಅವಧಿಯ ಮಿತಿಯನ್ನು ಹಾಕುವುದರ ಜೊತೆಗೆ ಸಂಘಟನೆಯಲ್ಲಿ ಎಲ್ಲಾ ಹಂತಗಳಲ್ಲಿ ಸ್ಥಾನಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕರಿಗೆ ವಯಸ್ಸಿನ ಮಿತಿಯನ್ನು ವಿಧಿಸಲು ಪಕ್ಷವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇಂಗ್ಲಿಷ್​​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 13 May 22

ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್​ಗೆ ಹಾಜರು ಸಾಧ್ಯತೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!