AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಎಲ್ಲ ಮಾಜಿ ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ ಏಪ್ರಿಲ್​ 14ಕ್ಕೆ; ತಾರತಮ್ಯ ಇಲ್ಲವೇ ಇಲ್ಲವೆಂದ ಪ್ರಧಾನಿ ಮೋದಿ

ಏಪ್ರಿಲ್​ 6-14ರವರೆಗೆ ಸಾಮಾಜಿಕ ಸಾಮರಸ್ಯ ನ್ಯಾಯ ದಿನ ಆಚರಿಸಲಾಗುವುದು. ಏಪ್ರಿಲ್​ 6ರಂದು ಪಕ್ಷದ ಸಂಸ್ಥಾಪನಾ ದಿನ. ಅಂದು ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಭಾರತದ ಎಲ್ಲ ಮಾಜಿ ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ ಏಪ್ರಿಲ್​ 14ಕ್ಕೆ; ತಾರತಮ್ಯ ಇಲ್ಲವೇ ಇಲ್ಲವೆಂದ ಪ್ರಧಾನಿ ಮೋದಿ
ಬಿಜಪಿ ಸಂಸದೀಯ ಸಭೆ
TV9 Web
| Updated By: Lakshmi Hegde|

Updated on: Mar 29, 2022 | 1:11 PM

Share

ಇಂದು ದೆಹಲಿಯ ಅಂಬೇಡ್ಕರ್​ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ (BJP Parliamentary Meet) ನಡೆದಿತ್ತು. ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್​ ಶಾ ಇತರರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಏಪ್ರಿಲ್​ 6ರಿಂದ 14ರವರೆಗೆ ಸಾಮಾಜಿಕ ಸಾಮರಸ್ಯ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತದ ಮಾಜಿ ಪ್ರಧಾನಮಂತ್ರಿಗಳ ಮ್ಯೂಸಿಯಂಯೊಂದನ್ನು ನಿರ್ಮಾಣ ಮಾಡಲಾಗಿದ್ದು, ಅದನ್ನು ಏಪ್ರಿಲ್​ 14ರಂದು ಉದ್ಘಾಟಿಸಲಾಗುತ್ತದೆ ಎಂದೂ ತಿಳಿಸಿದ್ದಾರೆ. ಅಂದಹಾಗೇ, ಈ ಮ್ಯೂಸಿಯಂ ತೀನ್​ ಮೂರ್ತಿ ಭವನ್​​ದಲ್ಲಿ ನಿರ್ಮಾಣವಾಗಿದ್ದು, ಮಾಜಿ ಪ್ರಧಾನಮಂತ್ರಿಗಳಿಗೆ ಸಂಬಂಧಪಟ್ಟ ಮಹತ್ವದ ವಿಚಾರಗಳ ಸಂಗ್ರಹವಾಗಿದೆ. ನಾವು ಎಲ್ಲರನ್ನೂ ಒಂದೇ ರೀತಿ ನೋಡುತ್ತೇವೆ, ಗೌರವಿಸುತ್ತೇವೆ. ಯಾರ ಬಗ್ಗೆಯೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಫೆಬ್ರವರಿ-ಮಾರ್ಚ್​​ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳನ್ನು ಗೆದ್ದು, ಸರ್ಕಾರ ರಚನೆ ಮಾಡಿದ ಬಳಿಕ ಬಿಜೆಪಿ ಇದೇ ಮೊದಲ ಬಾರಿಗೆ ಸಂಸದೀಯ ಸಭೆ ನಡೆಸಿದೆ. ಇದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಅರ್ಜುನ್​ ರಾಮ್​ ಮೇಘ್ವಾಲ್​, ಈ ಸಭೆಯಲ್ಲಿ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ್​  ಯೋಜನೆ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ. ಯೋಜನೆಯ ಅವಧಿಯನ್ನು ಇನ್ನೂ ಆರು ತಿಂಗಳು ವಿಸ್ತರಿಸಿದ್ದಕ್ಕೆ ನಾವೆಲ್ಲರೂ ಪ್ರಧಾನಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಏಪ್ರಿಲ್​ 6-14ರವರೆಗೆ ಸಾಮಾಜಿಕ ಸಾಮರಸ್ಯ ನ್ಯಾಯ ದಿನ ಆಚರಿಸಲಾಗುವುದು. ಏಪ್ರಿಲ್​ 6ರಂದು ಪಕ್ಷದ ಸಂಸ್ಥಾಪನಾ ದಿನ. ಅಂದು ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾರೆ. ನಂತರ 14ರವರೆಗೂ ಅಂದರೆ ಅಂಬೇಡ್ಕರ್ ಜಯಂತಿಯವರೆಗೂ ಪ್ರತಿ ರಾಜ್ಯದಲ್ಲಿ ಬ್ಲಾಕ್​ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಂದರೆ ಕೆರೆಗಳನ್ನು ಸ್ವಚ್ಛಗೊಳಿಸುವುದು, ಆರೋಗ್ಯ ಶಿಬಿರದಂತಹ ಸಾಮಾಜಿಕ ಕೆಲಸಗಳನ್ನು ಮಾಡಲಾಗುವುದು.  ಇನ್ನು 6ನೇ ತಾರೀಖಿನಂದು ಬೆಳಗ್ಗೆ ಪಕ್ಷದ ಧ್ವಜ ಹಾರಿಸಲಾಗುವುದು. 9.45ಕ್ಕೆ ಪ್ರಧಾನಿ ಮೋದಿ ಭಾಷಣ ಇದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯನ್ನೇ ಕೊಂದ ಪತ್ನಿ; ಪ್ರಿಯಕರ ನಾಗೇಶ್, ಅಣ್ಣ ನಾರಾಯಣಸ್ವಾಮಿ ಬಂಧನ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?