AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP TV Channel: ತಮಿಳುನಾಡಿನಲ್ಲಿ ಟಿವಿ ಚಾನೆಲ್ ತೆರೆಯಲಿರುವ ಬಿಜೆಪಿ: ಉಸ್ತುವಾರಿ ಅಣ್ಣಾಮಲೈ ಹೆಗಲಿಗೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಘಟಕ ಹೊಸ ಹೆಜ್ಜೆ ಇಡಲು ಹೊರಟಿದ್ದು, ಹಲವರಿಗೆ ಅಚ್ಚರಿ ಮೂಡಿಸಿದೆ. ಉಸ್ತುವಾರಿಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ವಹಿಸಲಾಗಿದೆ.

BJP TV Channel: ತಮಿಳುನಾಡಿನಲ್ಲಿ ಟಿವಿ ಚಾನೆಲ್ ತೆರೆಯಲಿರುವ ಬಿಜೆಪಿ: ಉಸ್ತುವಾರಿ ಅಣ್ಣಾಮಲೈ ಹೆಗಲಿಗೆ
ಕೆ ಅಣ್ಣಾಮಲೈImage Credit source: Outlookindia.com
TV9 Web
| Edited By: |

Updated on: Jan 23, 2023 | 3:18 PM

Share

ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಘಟಕ ಹೊಸ ಹೆಜ್ಜೆ ಇಡಲು ಹೊರಟಿದ್ದು, ಹಲವರಿಗೆ ಅಚ್ಚರಿ ಮೂಡಿಸಿದೆ. ಉಸ್ತುವಾರಿಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ವಹಿಸಲಾಗಿದೆ. ರಾಜ್ಯದಲ್ಲಿ ಟಿವಿ ಚಾನೆಲ್ ಆರಂಭಿಸಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದು ಕೇರಳದಲ್ಲಿ ಪಕ್ಷದ ಮುಖವಾಣಿ ಎಂದು ಪರಿಗಣಿಸಲಾದ ಜನಂ ಟಿವಿಯ ವಿಸ್ತರಣೆಯಾಗಿದೆ.  ಚಾನೆಲ್ ಆರಂಭಿಸಲು 15 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ, ರಾಜ್ಯದಲ್ಲಿ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಸಂಪನ್ಮೂಲಗಳನ್ನು ಬಳಸಿ ಸಂಗ್ರಹಿಸಲಾಗುವುದು. ಸದ್ಯ ಚಾನೆಲ್ ಆರಂಭದ ದಿನಾಂಕ ನಿರ್ಧಾರವಾಗಿಲ್ಲ.

ತಮಿಳು ಚಾನೆಲ್‌ಗೆ ಜನಂ ಟಿವಿ ಎಂದು ಹೆಸರಿಸಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಇಂಡಿಯನ್ ಎಕ್ಸ್​ಪ್ರೆಸ್​ಗೆ ತಿಳಿಸಿದ್ದಾರೆ. ಇದು ನಗರದ ಆಳ್ವಾರ್‌ಪೇಟೆಯಲ್ಲಿ ಸ್ಥಾಪನೆಯಾಗಲಿದ್ದು, ಆರಂಭಿಕ ವೆಚ್ಚ ಸುಮಾರು 15 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ನಾಯಕರು ಹೇಳಿದ್ದಾರೆ. ಬಿಜೆಪಿ ಚಾನೆಲ್ ಮೂಲಕ ತನ್ನ ರಾಜಕೀಯ ಧ್ಯೇಯೋದ್ದೇಶಗಳನ್ನು ಜನರ ಮನೆ ಮನೆಗೆ ತಲುಪಿಸಲು ಮುಂದಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಯೋಜನೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಕೇರಳದಲ್ಲಿ, ಶಬರಿಮಲೆ ವಿವಾದದ ಸಂದರ್ಭದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪ್ರಚಾರ ಪ್ರಯತ್ನಗಳಲ್ಲಿ ಜನಂ ಟಿವಿ ಪ್ರಮುಖ ಪಾತ್ರ ವಹಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ